Latest

ಮೊಬೈಲ್ ಕದ್ದವನಿಗೆ ಮನಸೋತು ಪ್ರೀತಿಸಿದ ಯುವತಿ; ಅಪರೂಪದ ಲವ್ ಸ್ಟೋರಿ ವಿಡಿಯೋ ವೈರಲ್!

ತನ್ನ ಫೋನ್ ಕದ್ದವನಿಗೆ ಯುವತಿಯೊಬ್ಬಳು ಮನಸೋತು ಪ್ರೀತಿಸಲು ಪ್ರಾರಂಭಿಸಿದ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ. ಇಮ್ಯಾನುಯೆಲಾ ಎಂಬಾಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಳ್ಳನೊಬ್ಬ ಆಕೆಯ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ವೇಳೆ ಆಕೆಗೆ ಏನೂ ಮಾಡಲು ಸಾಧ್ಯವಾಗಿರಲಿಲ್ಲ.
ಇಮ್ಯಾನುಯೆಲಾನ ಮೊಬೈಲ್ ಕದ್ದುಕೊಂಡು ಹೋದ ಕಳ್ಳನ ಮನಸ್ಸು ಮೊಬೈಲ್ ನಲ್ಲಿದ್ದ ಆಕೆಯ ಫೋಟೋ ನೋಡಿ ಬದಲಾಗಿದೆ. ಮೊಬೈಲ್ ಕದ್ದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾನೆ. ಬಳಿಕ ಇಬ್ಬರೂ ಭೇಟಿಯಾಗಿ ಪ್ರೀತಿಯನ್ನು ವ್ಯಕ್ತಪಡಿಸಿ ಎರಡು ವರ್ಷ ಡೇಟಿಂಗ್ ನಲ್ಲಿದ್ದರು. ಇದೀಗ ಇವರ ಪ್ರೇಮ ಕಥೆಯ ವಿಡಿಯೋ ವೈರಲ್ ಆಗಿದೆ.
ನಾನು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನನ್ನ ಮೊಬೈಲ್ ಅನ್ನು ಯುವಕನೊಬ್ಬ ಕಳವು ಮಾಡಿದ್ದ. ಬಳಿಕ ಒಂದು ಡೇಟ್ ನೈಟ್ ನಲ್ಲಿ ನಮಗೆ ಪ್ರೀತಿ ಶುರುವಾಗಿದೆ ಎಂದು ಇಮ್ಯಾನುಯೆಲಾ ತನ್ನ ಪ್ರೀತಿ ಆರಂಭವಾದ ಕಥೆಯನ್ನು ವಿಡಿಯೋ ದಲ್ಲಿ ಹೇಳಿಕೊಂಡಿದ್ದಾಳೆ.
ಫೋನ್ ಕದ್ದು, ಅದರಲ್ಲಿ ಇಮ್ಯಾನುಯೆಲಾನ ಫೋಟೋ ನೋಡಿದಾಗ ಅವಳ ಸೌಂದರ್ಯ ನೋಡಿ ಇಷ್ಟೊಂದು ಸುಂದರವಾದ ಯುವತಿಯನ್ನು ನಾನು ಎಲ್ಲೂ ನೋಡಿಲ್ಲ ಎಂದೆನಿಸಿತ್ತು. ಬಳಿಕ ಫೋನ್ ಕದ್ದ ಬಗ್ಗೆ ಪಶ್ಚತ್ತಾಪವಾಗಿದೆ ಎಂದು ಯುವಕ ಹೇಳಿದ್ದಾನೆ.

ಒಟ್ಟಿನಲ್ಲಿ ಇವರಿಬ್ಬರ ಪ್ರೀತಿಯ ಕಥೆ ಈಗ ಟ್ವೀಟರ್ ನಲ್ಲಿ ವೈರಲ್ ಆಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago