Latest

ಮೊಬೈಲ್ ಕದ್ದವನಿಗೆ ಮನಸೋತು ಪ್ರೀತಿಸಿದ ಯುವತಿ; ಅಪರೂಪದ ಲವ್ ಸ್ಟೋರಿ ವಿಡಿಯೋ ವೈರಲ್!

ತನ್ನ ಫೋನ್ ಕದ್ದವನಿಗೆ ಯುವತಿಯೊಬ್ಬಳು ಮನಸೋತು ಪ್ರೀತಿಸಲು ಪ್ರಾರಂಭಿಸಿದ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ. ಇಮ್ಯಾನುಯೆಲಾ ಎಂಬಾಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಳ್ಳನೊಬ್ಬ ಆಕೆಯ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ವೇಳೆ ಆಕೆಗೆ ಏನೂ ಮಾಡಲು ಸಾಧ್ಯವಾಗಿರಲಿಲ್ಲ.
ಇಮ್ಯಾನುಯೆಲಾನ ಮೊಬೈಲ್ ಕದ್ದುಕೊಂಡು ಹೋದ ಕಳ್ಳನ ಮನಸ್ಸು ಮೊಬೈಲ್ ನಲ್ಲಿದ್ದ ಆಕೆಯ ಫೋಟೋ ನೋಡಿ ಬದಲಾಗಿದೆ. ಮೊಬೈಲ್ ಕದ್ದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾನೆ. ಬಳಿಕ ಇಬ್ಬರೂ ಭೇಟಿಯಾಗಿ ಪ್ರೀತಿಯನ್ನು ವ್ಯಕ್ತಪಡಿಸಿ ಎರಡು ವರ್ಷ ಡೇಟಿಂಗ್ ನಲ್ಲಿದ್ದರು. ಇದೀಗ ಇವರ ಪ್ರೇಮ ಕಥೆಯ ವಿಡಿಯೋ ವೈರಲ್ ಆಗಿದೆ.
ನಾನು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನನ್ನ ಮೊಬೈಲ್ ಅನ್ನು ಯುವಕನೊಬ್ಬ ಕಳವು ಮಾಡಿದ್ದ. ಬಳಿಕ ಒಂದು ಡೇಟ್ ನೈಟ್ ನಲ್ಲಿ ನಮಗೆ ಪ್ರೀತಿ ಶುರುವಾಗಿದೆ ಎಂದು ಇಮ್ಯಾನುಯೆಲಾ ತನ್ನ ಪ್ರೀತಿ ಆರಂಭವಾದ ಕಥೆಯನ್ನು ವಿಡಿಯೋ ದಲ್ಲಿ ಹೇಳಿಕೊಂಡಿದ್ದಾಳೆ.
ಫೋನ್ ಕದ್ದು, ಅದರಲ್ಲಿ ಇಮ್ಯಾನುಯೆಲಾನ ಫೋಟೋ ನೋಡಿದಾಗ ಅವಳ ಸೌಂದರ್ಯ ನೋಡಿ ಇಷ್ಟೊಂದು ಸುಂದರವಾದ ಯುವತಿಯನ್ನು ನಾನು ಎಲ್ಲೂ ನೋಡಿಲ್ಲ ಎಂದೆನಿಸಿತ್ತು. ಬಳಿಕ ಫೋನ್ ಕದ್ದ ಬಗ್ಗೆ ಪಶ್ಚತ್ತಾಪವಾಗಿದೆ ಎಂದು ಯುವಕ ಹೇಳಿದ್ದಾನೆ.

ಒಟ್ಟಿನಲ್ಲಿ ಇವರಿಬ್ಬರ ಪ್ರೀತಿಯ ಕಥೆ ಈಗ ಟ್ವೀಟರ್ ನಲ್ಲಿ ವೈರಲ್ ಆಗಿದೆ.

ಭ್ರಷ್ಟರ ಬೇಟೆ

Recent Posts

ಶಿವಾಜಿನಗರ ಬೌರಿಂಗ್ ಆಸ್ಪತ್ರೆ ದುರಂತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…

20 minutes ago

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

16 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

16 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

18 hours ago

31 ವರ್ಷ ಜೈಲು ಜೀವನದ ನಂತರ ಹೊಸ ಹಾದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪೆರಾರಿವಾಲನ್ ಇದೀಗ ವಕೀಲ

ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…

18 hours ago

ಪತಿಯ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…

18 hours ago