Categories: CrimeLatest

ಬೆಂಗಳೂರು ರಸ್ತೆ ಅಪಘಾತದಲ್ಲಿ ಭಟ್ಕಳದ ಯುವತಿ ದುರ್ಮರಣ; ಮದುವೆ ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ದುರಂತ

ಭಟ್ಕಳ: ಉದ್ಯೋಗ ನಿಮಿತ್ತ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಭಟ್ಕಳ ಮೂಲದ ಯುವತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ಕಾನುಬದ್ಲು ಬೊಮ್ಮನಕೆರೆಯ ನಿವಾಸಿ ದೀಪಾಲಿ ಗುರು ಗೊಂಡ (22) ಎಂದು ಗುರುತಿಸಲಾಗಿದೆ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಪಡೆದಿದ್ದ ಅವರು ಕಳೆದ ಸುಮಾರು ಏಳು ತಿಂಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು.

ಲಭ್ಯ ಮಾಹಿತಿಯ ಪ್ರಕಾರ, ದೀಪಾಲಿ ಅವರು ತಮ್ಮ ಸಹೋದ್ಯೋಗಿಯ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ನೇಹಿತರೊಂದಿಗೆ ಟಿಟಿ ವಾಹನದಲ್ಲಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಹಿಂದಿರುಗುವ ವೇಳೆ ಕೆ.ಆರ್. ಪುರಂ ಸಮೀಪ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು.

ಈ ವೇಳೆ ಕೆಲವು ಪ್ರಯಾಣಿಕರು ವಾಹನದಿಂದ ಕೆಳಗಿಳಿದಿದ್ದರೆ, ಕೊನೆಯ ಹಂತದಲ್ಲಿ ಮೂವರು ವಾಹನದಲ್ಲೇ ಉಳಿದಿದ್ದರು ಎನ್ನಲಾಗಿದೆ. ಅದೇ ಸಮಯದಲ್ಲಿ ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಉರುಳಿ ಬಿದ್ದಿದೆ.

ಅಪಘಾತದ ತೀವ್ರತೆಗೆ ದೀಪಾಲಿ ವಾಹನದೊಳಗೆ ಸಿಲುಕಿಕೊಂಡು ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ಬಳಿಕ ಕೆಲಕಾಲ ಆ ಪ್ರದೇಶದಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲು ಸಹ ಅಡಚಣೆ ಎದುರಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

ದೀಪಾಲಿ ಅವರ ಅಕಾಲಿಕ ನಿಧನದಿಂದ ಕುಟುಂಬದವರು, ಬಂಧು-ಬಳಗ ಹಾಗೂ ಸ್ನೇಹಿತರಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.

ಭ್ರಷ್ಟರ ಬೇಟೆ

Recent Posts

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಮನೆಗಳ್ಳರ ಬಂಧನ, ₹9 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳ ಜಪ್ತಿ

ಕಿತ್ತೂರು: ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಕಿತ್ತೂರು ಪೊಲೀಸರು,…

2 hours ago

ಶಿರಸಿಯಲ್ಲಿ ಹಾವು ಕಚ್ಚಿ ಬಾಲಕ ಸಾವು – ವೈದ್ಯರ ನಿರ್ಲಕ್ಷ್ಯದ ಆರೋಪ

ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ…

5 hours ago

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಬೈಕ್ ಡಿಕ್ಕಿ – ಯುವಕ ಸಾವು, ಸವಾರನ ಸ್ಥಿತಿ ಗಂಭೀರ

ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ…

5 hours ago

ತುಮಕೂರು ಹೆದ್ದಾರಿಯಲ್ಲಿ ದಾರುಣ ಘಟನೆ: ಯುವತಿಗೆ ಚಾಕು ಇರಿದು ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಪ್ರೇಮಿ ಸಾವು

ತುಮಕೂರು: ಪ್ರೇಮಿಗಳ ನಡುವಿನ ಮನಸ್ತಾಪ ಭೀಕರ ತಿರುವು ಪಡೆದುಕೊಂಡ ಪರಿಣಾಮ, ಯುವಕನೊಬ್ಬ ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಕಾರಿನಲ್ಲೇ…

5 hours ago

ಶೀಲಾ ಶಂಕಿಸಿ ಮಕ್ಕಳ ಎದುರೇ ತಾಯಿಯ ಹತ್ಯೆ: ಪತ್ನಿಯನ್ನು ಕೊಡಲಿಯಿಂದ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ ಪತಿಗೆ ಧಾರವಾಡದ ನಾಲ್ಕನೇ…

5 hours ago

ಮೊಹರಂ ಮೆರವಣಿಗೆ ಟಾರ್ಗೆಟ್?: 14,900 ವಿಷಪೂರಿತ ಕ್ಯಾಪ್ಸೂಲ್‌ಗಳೊಂದಿಗೆ ಪುಣೆ ಉದ್ಯಮಿ ಬಂಧನ

ಮುಂಬೈ: ಮುಹರಂ ಮೆರವಣಿಗೆಯ ವೇಳೆ ಸಾರ್ವಜನಿಕರಿಗೆ ವಿಷಪ್ರಾಶನ ಮಾಡಿಸಲು ಸಂಚು ರೂಪಿಸಲಾಗಿದೆ ಎಂಬ ಶಂಕೆಯ ಮೇರೆಗೆ ಮುಂಬೈ ಪೊಲೀಸರು ಭಾರೀ…

5 hours ago