Categories: CrimeLatest

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಯುವತಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ತಂದೆ-ತಾಯಿ ಹಾಗೂ ತಂಗಿಯನ್ನೇ ಕೊಲೆ ಮಾಡಿದ ಆರೋಪ ಕೇಳಿಬಂದಿದೆ.

ಹತ್ಯೆಗೀಡಾದವರನ್ನು ಸೋಮಸುಂದರ್ (55), ಅವರ ಪತ್ನಿ ಮುತ್ತುಲಕ್ಷ್ಮಿ (48) ಮತ್ತು ಕಿರಿಯ ಪುತ್ರಿ ಸುಪ್ರಿಯಾ (20) ಎಂದು ಗುರುತಿಸಲಾಗಿದೆ. ಇವರ ಮೃತದೇಹಗಳು ಸೀಗೇಹಳ್ಳಿಯ ಧಾರ್ಮಿಕ ಲೇಔಟ್‌ನ ‘ಸಾಯಿ ಗ್ರೀನ್ ಅಪಾರ್ಟ್‌ಮೆಂಟ್’‌ನ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿವೆ.

ಮಾಹಿತಿಯ ಪ್ರಕಾರ, ದಂಪತಿಯ ಹಿರಿಯ ಪುತ್ರಿ ಶ್ವೇತಾ ತನ್ನ ಪ್ರಿಯಕರ ಕೆನ್ನೆತ್ ಜೊತೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದಳು. ಸುಮಾರು ಒಂದೂವರೆ ತಿಂಗಳ ಹಿಂದೆ ಇಬ್ಬರೂ ಬಾಡಿಗೆ ಫ್ಲ್ಯಾಟ್ ಪಡೆದು ಒಟ್ಟಿಗೆ ವಾಸ ಆರಂಭಿಸಿದ್ದರು. ಆದರೆ ಈ ಸಂಬಂಧಕ್ಕೆ ಶ್ವೇತಾ ಅವರ ಕುಟುಂಬ ತೀವ್ರ ವಿರೋಧ ವ್ಯಕ್ತಪಡಿಸುತ್ತಿತ್ತು ಎನ್ನಲಾಗಿದೆ.

ಜೂನ್ 22ರ ಸಂಜೆ ಸುಮಾರು 7 ಗಂಟೆ ವೇಳೆಗೆ ಶ್ವೇತಾ ಅವರ ತಂದೆ-ತಾಯಿ ಹಾಗೂ ತಂಗಿ, ಆಕೆ ವಾಸಿಸುತ್ತಿದ್ದ ಫ್ಲ್ಯಾಟ್‌ಗೆ ತೆರಳಿದ್ದರು. ಈ ವೇಳೆ ಸಂಬಂಧದ ವಿಚಾರವಾಗಿ ಮತ್ತೆ ಮಾತಿನ ಚಕಮಕಿ ನಡೆದಿದ್ದು, ವಾಗ್ವಾದ ತೀವ್ರ ಸ್ವರೂಪ ಪಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕೋಪದ ಭರದಲ್ಲಿ ಶ್ವೇತಾ ಮತ್ತು ಕೆನ್ನೆತ್ ಸೇರಿ ಮೂವರ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಘಟನೆಯ ಬಗ್ಗೆ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಕೆ.ಆರ್.ಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆ ಹಾಗೂ ಘಟನೆಯ ನಿಖರ ಕಾರಣಗಳ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಕುಟುಂಬ ಸಂಬಂಧಗಳು ಎಷ್ಟು ಹದಗೆಟ್ಟಿವೆ ಎಂಬುದಕ್ಕೆ ಈ ಘಟನೆ ಮತ್ತೊಂದು ಕಹಿ ಉದಾಹರಣೆಯಾಗಿದ್ದು, ಪ್ರೀತಿಯ ಮೋಹದಲ್ಲಿ ಯುವತಿ ತನ್ನದೇ ಕುಟುಂಬದವರ ವಿರುದ್ಧ ಕ್ರೂರ ಕೃತ್ಯ ಎಸಗಿದ್ದಾಳೆ ಎಂಬ ಆರೋಪ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

11 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

11 hours ago