Latest

ಪ್ರತೀ ರಾತ್ರಿ ಲವರ್ ಮೀಟ್ ಆಗೋಕೆ ಗ್ರಾಮದ ಟ್ರಾನ್ಸ್‌ಫಾರ್ಮರ್ ಫ್ಯೂಸ್ ತೆಗೆಯುತ್ತಿದ್ದ ಯುವತಿ!

ಬಿಹಾರದ ಬೆಟ್ಟಿಯಾ ಗ್ರಾಮದ ಯುವತಿ ಸಂಪೂರ್ಣ ಗ್ರಾಮದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಪ್ರಿಯಕರನನ್ನು ಭೇಟಿಯಾಗುತ್ತಿದ್ದಳೆ. ಇಡೀ ಗ್ರಾಮಕ್ಕೆ ವಿದ್ಯುತ್ ಪೂರೈಸುತ್ತಿದ್ದ ಟ್ರಾನ್ಸ್‌ಫಾರ್ಮರ್‌ ಬಳಿ ಬಂದು ಪ್ರೇಮಿಯನ್ನು ಭೇಟಿ ಯಾಗಲು ಕಾಯುತ್ತಿದ್ದಳು. ಪ್ರಿಯಕರ ಬಂದು ಮೊದಲು ಟ್ರಾನ್ಸ್‌ಫಾರ್ಮರ್‌ನಲ್ಲಿದ್ದ ಎಬಿ (ಏರ್ ಬ್ರೇಕ್ ಸ್ವಿಚ್) ಸ್ವಿಚ್ ಕೆಳಗೆ ಬೀಳಿಸುತ್ತಿದ್ದನು. ಇದರಿಂದಾಗಿ ಇಡೀ ಗ್ರಾಮದ ದೀಪಗಳು ಆಫ್ ಆಗುತ್ತಿದ್ದವು. ಆಗ ಇಬ್ಬರೂ ರಾತ್ರಿಯ ಕತ್ತಲಲ್ಲಿ ಭೇಟಿಯಾಗುತ್ತಿದ್ದರು. ನಂತರ ಪ್ರಿಯಕರ ಮರಳಿ ಹೋದ ನಂತರ ಯುವತಿ ಟ್ರಾನ್ಸ್‌ಫಾರ್ಮರ್ ಸ್ವಿಚ್ ಹಾಕುತ್ತಿದ್ದಳು.
ಗ್ರಾಮದಲ್ಲಿ ದಿನಾಲೂ ಕರೆಂಟ್ ಕಟ್ ಆಗುವ ಕಾರಣ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಜನರು ನಿಗಾ ವಹಿಸಿದ್ದರು. ರಾತ್ರಿ ಹೊತ್ತು ಗಸ್ತು ತಿರುಗುತ್ತಿದ್ದರು. ಇದೇ ವೇಳೆ ಜುಲೈ 14ರಂದು ಗೆಳತಿಯನ್ನು ಭೇಟಿಯಾಗಲು ಬಂದಿದ್ದ ಲವರ್ಸ್ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ವಿಡಿಯೋದಲ್ಲಿ ಆರರಿಂದ ಏಳು ಮಂದಿ ಜೋಡಿಯನ್ನು ಸುತ್ತುವರಿದಿದ್ದಾರೆ. ಎಲ್ಲರೂ ಸೇರಿ ಹುಡುಗನಿಗೆ ಬೆಲ್ಟ್‌ನಿಂದ ಹೊಡೆಯುತ್ತಾರೆ. ಈ ಸಂದರ್ಭದಲ್ಲಿ ಯುವತಿ ತನ್ನ ಪ್ರಿಯಕರನನ್ನು ಥಳಿಸುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ಜನರನ್ನು ಹೊಡೆದಿದ್ದಾಳೆ. ಥಳಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿದೆ. ಇದರಲ್ಲಿ ಕೆಲವರು ಯುವಕನಿಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ಕಂಡುಬರುತ್ತದೆ. ನೌತಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ವಿಡಿಯೋ ವೈರಲ್ ಆದ ಬಳಿಕ ಯುವತಿಯ ಪ್ರೇಮಿ ಆಕೆಯ ಗ್ರಾಮಕ್ಕೆ ಬಂದು ಆಕೆಯನ್ನು ಥಳಿಸಿದವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ಪೊಲೀಸರು, ವೀಡಿಯೋ ಆಧರಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಪ್ರಿಯಕರ ಮತ್ತು ಗೆಳತಿಯ ಕುಟುಂಬಗಳ ನಡುವೆ ಸಮಸ್ಯೆ ಇತ್ಯರ್ಥವಾಗಿದೆ. ಇಬ್ಬರೂ ಶೀಘ್ರದಲ್ಲೇ ಮದುವೆ ಯಾಗಲಿದ್ದಾರೆ ಎಂದು ಗೆಳತಿ ಮತ್ತು ಗೆಳೆಯನ ಸಂಬಂಧಿಕರು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ನೌತನ್ ಪೊಲೀಸ್ ಠಾಣೆಯ ಮುಖ್ಯಸ್ಥ ಖಾಲಿದ್ ಅಖ್ತರ್, ಈ ವಿಷಯವು ಪ್ರೇಮ ಸಂಬಂಧವಾಗಿದೆ. ಹೀಗಾಗಿ ಸೂಕ್ಷ್ಮವಾಗಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago