Latest

ಪ್ರತೀ ರಾತ್ರಿ ಲವರ್ ಮೀಟ್ ಆಗೋಕೆ ಗ್ರಾಮದ ಟ್ರಾನ್ಸ್‌ಫಾರ್ಮರ್ ಫ್ಯೂಸ್ ತೆಗೆಯುತ್ತಿದ್ದ ಯುವತಿ!

ಬಿಹಾರದ ಬೆಟ್ಟಿಯಾ ಗ್ರಾಮದ ಯುವತಿ ಸಂಪೂರ್ಣ ಗ್ರಾಮದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಪ್ರಿಯಕರನನ್ನು ಭೇಟಿಯಾಗುತ್ತಿದ್ದಳೆ. ಇಡೀ ಗ್ರಾಮಕ್ಕೆ ವಿದ್ಯುತ್ ಪೂರೈಸುತ್ತಿದ್ದ ಟ್ರಾನ್ಸ್‌ಫಾರ್ಮರ್‌ ಬಳಿ ಬಂದು ಪ್ರೇಮಿಯನ್ನು ಭೇಟಿ ಯಾಗಲು ಕಾಯುತ್ತಿದ್ದಳು. ಪ್ರಿಯಕರ ಬಂದು ಮೊದಲು ಟ್ರಾನ್ಸ್‌ಫಾರ್ಮರ್‌ನಲ್ಲಿದ್ದ ಎಬಿ (ಏರ್ ಬ್ರೇಕ್ ಸ್ವಿಚ್) ಸ್ವಿಚ್ ಕೆಳಗೆ ಬೀಳಿಸುತ್ತಿದ್ದನು. ಇದರಿಂದಾಗಿ ಇಡೀ ಗ್ರಾಮದ ದೀಪಗಳು ಆಫ್ ಆಗುತ್ತಿದ್ದವು. ಆಗ ಇಬ್ಬರೂ ರಾತ್ರಿಯ ಕತ್ತಲಲ್ಲಿ ಭೇಟಿಯಾಗುತ್ತಿದ್ದರು. ನಂತರ ಪ್ರಿಯಕರ ಮರಳಿ ಹೋದ ನಂತರ ಯುವತಿ ಟ್ರಾನ್ಸ್‌ಫಾರ್ಮರ್ ಸ್ವಿಚ್ ಹಾಕುತ್ತಿದ್ದಳು.
ಗ್ರಾಮದಲ್ಲಿ ದಿನಾಲೂ ಕರೆಂಟ್ ಕಟ್ ಆಗುವ ಕಾರಣ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಜನರು ನಿಗಾ ವಹಿಸಿದ್ದರು. ರಾತ್ರಿ ಹೊತ್ತು ಗಸ್ತು ತಿರುಗುತ್ತಿದ್ದರು. ಇದೇ ವೇಳೆ ಜುಲೈ 14ರಂದು ಗೆಳತಿಯನ್ನು ಭೇಟಿಯಾಗಲು ಬಂದಿದ್ದ ಲವರ್ಸ್ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ವಿಡಿಯೋದಲ್ಲಿ ಆರರಿಂದ ಏಳು ಮಂದಿ ಜೋಡಿಯನ್ನು ಸುತ್ತುವರಿದಿದ್ದಾರೆ. ಎಲ್ಲರೂ ಸೇರಿ ಹುಡುಗನಿಗೆ ಬೆಲ್ಟ್‌ನಿಂದ ಹೊಡೆಯುತ್ತಾರೆ. ಈ ಸಂದರ್ಭದಲ್ಲಿ ಯುವತಿ ತನ್ನ ಪ್ರಿಯಕರನನ್ನು ಥಳಿಸುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ಜನರನ್ನು ಹೊಡೆದಿದ್ದಾಳೆ. ಥಳಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗಿದೆ. ಇದರಲ್ಲಿ ಕೆಲವರು ಯುವಕನಿಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ಕಂಡುಬರುತ್ತದೆ. ನೌತಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ವಿಡಿಯೋ ವೈರಲ್ ಆದ ಬಳಿಕ ಯುವತಿಯ ಪ್ರೇಮಿ ಆಕೆಯ ಗ್ರಾಮಕ್ಕೆ ಬಂದು ಆಕೆಯನ್ನು ಥಳಿಸಿದವರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ಪೊಲೀಸರು, ವೀಡಿಯೋ ಆಧರಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಪ್ರಿಯಕರ ಮತ್ತು ಗೆಳತಿಯ ಕುಟುಂಬಗಳ ನಡುವೆ ಸಮಸ್ಯೆ ಇತ್ಯರ್ಥವಾಗಿದೆ. ಇಬ್ಬರೂ ಶೀಘ್ರದಲ್ಲೇ ಮದುವೆ ಯಾಗಲಿದ್ದಾರೆ ಎಂದು ಗೆಳತಿ ಮತ್ತು ಗೆಳೆಯನ ಸಂಬಂಧಿಕರು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ನೌತನ್ ಪೊಲೀಸ್ ಠಾಣೆಯ ಮುಖ್ಯಸ್ಥ ಖಾಲಿದ್ ಅಖ್ತರ್, ಈ ವಿಷಯವು ಪ್ರೇಮ ಸಂಬಂಧವಾಗಿದೆ. ಹೀಗಾಗಿ ಸೂಕ್ಷ್ಮವಾಗಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

18 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

18 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

18 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

19 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

19 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

24 hours ago