Latest

ರೈಲು ಪ್ರಯಾಣ ಮಧ್ಯೆ ನಿಗೂಢವಾಗಿ ನಾಪತ್ತೆಯಾದ ಸಿವಿಲ್ ನ್ಯಾಯಾಧೀಶೆಯಾಗಲು ಸಜ್ಜಾಗಿದ್ದ ಯುವತಿ

ಮಧ್ಯಪ್ರದೇಶದ ಕಟ್ನಿ ರೈಲು ನಿಲ್ದಾಣದಲ್ಲಿ ಇಳಿಯಬೇಕಿದ್ದ 28 ವರ್ಷದ ಅರ್ಚನಾ ತಿವಾರಿ ಎಂಬ ಯುವತಿ ಆಗಸ್ಟ್ 7ರಂದು ನಿಗೂಢವಾಗಿ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಿವಿಲ್ ನ್ಯಾಯಾಧೀಶೆಯಾಗಲು ತಯಾರಿ ನಡೆಸುತ್ತಿದ್ದ ಅರ್ಚನಾ, ಇಂದೋರ್–ಬಿಲಾಸ್ಪುರ್ ನರ್ಮದಾ ಎಕ್ಸ್‌ಪ್ರೆಸ್‌ನಲ್ಲಿ ತಮ್ಮ ಊರಿಗೆ ಹೊರಟಿದ್ದರು.

ಮಾಹಿತಿ ಪ್ರಕಾರ, ಅರ್ಚನಾ ಇಂದೋರ್‌ನಿಂದ ಬೆಳಿಗ್ಗೆ ಹೊರಟು ಬಿ–3 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಭೋಪಾಲ್ ಸಮೀಪ ಬಂದಾಗ, ಬೆಳಗ್ಗೆ 10.15ರ ಸುಮಾರಿಗೆ ಅವರು ಮನೆಯವರೊಂದಿಗೆ ಕೊನೆಯದಾಗಿ ಫೋನ್‌ನಲ್ಲಿ ಮಾತನಾಡಿದ್ದರು. ಆ ಸಂದರ್ಭದಲ್ಲಿ ತಾವು ಭೋಪಾಲ್ ಹತ್ತಿರ ಇದ್ದೇವೆ ಎಂದು ತಿಳಿಸಿದ್ದಾರೆ. ಆ ಬಳಿಕ ಅವರ ಫೋನ್ ಸ್ವಿಚ್‌ಆಫ್ ಆಗಿದೆ.

ರೈಲು ಕಟ್ನಿ ನಿಲ್ದಾಣ ತಲುಪಿದಾಗ, ಅವರು ಇಳಿಯದೇ ಇರುವುದನ್ನು ಗಮನಿಸಿದ ಕುಟುಂಬ ಸದಸ್ಯರು ಆತಂಕಗೊಂಡರು. ತಕ್ಷಣವೇ ಪಕ್ಕದ ಉಮಾರಿಯಾ ನಗರದಲ್ಲಿ ವಾಸಿಸುವ ಸಂಬಂಧಿಕರಿಗೆ ಮಾಹಿತಿ ನೀಡಿ ಹುಡುಕಾಟ ಪ್ರಾರಂಭಿಸಲಾಯಿತು. ಉಮಾರಿಯಾ ನಿಲ್ದಾಣದಲ್ಲಿ ಅವರ ಕೋಚ್‌ಗೆ ಹೋದ ಸಂಬಂಧಿಕರು ಅರ್ಚನಾದ ಪ್ರಯಾಣ ಬ್ಯಾಗ್ ಪತ್ತೆ ಹಚ್ಚಿದರು. ಆದರೆ ಅರ್ಚನಾ ಅಲ್ಲಿ ಇರಲಿಲ್ಲ.

ಈ ಘಟನೆ ಕುರಿತು ಕಟ್ನಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರೈಲ್ವೆ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಅನಿಲ್ ಮರಾವಿ ಅವರು, “ಅರ್ಚನಾ ಕೊನೆಯದಾಗಿ ಭೋಪಾಲ್‌ನ ರಾಣಿ ಕಮಲಪತಿ ರೈಲು ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಅದಾದ ಬಳಿಕ ಅವರನ್ನು ಬೇರೆ ಯಾವುದೇ ಪ್ರಯಾಣಿಕರು ನೋಡಿಲ್ಲ” ಎಂದು ತಿಳಿಸಿದ್ದಾರೆ.

ಪ್ರಸ್ತುತ ರೈಲ್ವೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಿಸಿಟಿವಿ ದೃಶ್ಯಾವಳಿ ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ತೀವ್ರ ತನಿಖೆ ಆರಂಭಿಸಿದ್ದಾರೆ. ಈ ನಾಪತ್ತೆ ಪ್ರಕರಣವು ಸ್ಥಳೀಯರಲ್ಲೂ ಕುತೂಹಲ ಹಾಗೂ ಆತಂಕ ಮೂಡಿಸಿದೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago