Latest

ರೈಲು ಪ್ರಯಾಣ ಮಧ್ಯೆ ನಿಗೂಢವಾಗಿ ನಾಪತ್ತೆಯಾದ ಸಿವಿಲ್ ನ್ಯಾಯಾಧೀಶೆಯಾಗಲು ಸಜ್ಜಾಗಿದ್ದ ಯುವತಿ

ಮಧ್ಯಪ್ರದೇಶದ ಕಟ್ನಿ ರೈಲು ನಿಲ್ದಾಣದಲ್ಲಿ ಇಳಿಯಬೇಕಿದ್ದ 28 ವರ್ಷದ ಅರ್ಚನಾ ತಿವಾರಿ ಎಂಬ ಯುವತಿ ಆಗಸ್ಟ್ 7ರಂದು ನಿಗೂಢವಾಗಿ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಿವಿಲ್ ನ್ಯಾಯಾಧೀಶೆಯಾಗಲು ತಯಾರಿ ನಡೆಸುತ್ತಿದ್ದ ಅರ್ಚನಾ, ಇಂದೋರ್–ಬಿಲಾಸ್ಪುರ್ ನರ್ಮದಾ ಎಕ್ಸ್‌ಪ್ರೆಸ್‌ನಲ್ಲಿ ತಮ್ಮ ಊರಿಗೆ ಹೊರಟಿದ್ದರು.

ಮಾಹಿತಿ ಪ್ರಕಾರ, ಅರ್ಚನಾ ಇಂದೋರ್‌ನಿಂದ ಬೆಳಿಗ್ಗೆ ಹೊರಟು ಬಿ–3 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಭೋಪಾಲ್ ಸಮೀಪ ಬಂದಾಗ, ಬೆಳಗ್ಗೆ 10.15ರ ಸುಮಾರಿಗೆ ಅವರು ಮನೆಯವರೊಂದಿಗೆ ಕೊನೆಯದಾಗಿ ಫೋನ್‌ನಲ್ಲಿ ಮಾತನಾಡಿದ್ದರು. ಆ ಸಂದರ್ಭದಲ್ಲಿ ತಾವು ಭೋಪಾಲ್ ಹತ್ತಿರ ಇದ್ದೇವೆ ಎಂದು ತಿಳಿಸಿದ್ದಾರೆ. ಆ ಬಳಿಕ ಅವರ ಫೋನ್ ಸ್ವಿಚ್‌ಆಫ್ ಆಗಿದೆ.

ರೈಲು ಕಟ್ನಿ ನಿಲ್ದಾಣ ತಲುಪಿದಾಗ, ಅವರು ಇಳಿಯದೇ ಇರುವುದನ್ನು ಗಮನಿಸಿದ ಕುಟುಂಬ ಸದಸ್ಯರು ಆತಂಕಗೊಂಡರು. ತಕ್ಷಣವೇ ಪಕ್ಕದ ಉಮಾರಿಯಾ ನಗರದಲ್ಲಿ ವಾಸಿಸುವ ಸಂಬಂಧಿಕರಿಗೆ ಮಾಹಿತಿ ನೀಡಿ ಹುಡುಕಾಟ ಪ್ರಾರಂಭಿಸಲಾಯಿತು. ಉಮಾರಿಯಾ ನಿಲ್ದಾಣದಲ್ಲಿ ಅವರ ಕೋಚ್‌ಗೆ ಹೋದ ಸಂಬಂಧಿಕರು ಅರ್ಚನಾದ ಪ್ರಯಾಣ ಬ್ಯಾಗ್ ಪತ್ತೆ ಹಚ್ಚಿದರು. ಆದರೆ ಅರ್ಚನಾ ಅಲ್ಲಿ ಇರಲಿಲ್ಲ.

ಈ ಘಟನೆ ಕುರಿತು ಕಟ್ನಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರೈಲ್ವೆ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಅನಿಲ್ ಮರಾವಿ ಅವರು, “ಅರ್ಚನಾ ಕೊನೆಯದಾಗಿ ಭೋಪಾಲ್‌ನ ರಾಣಿ ಕಮಲಪತಿ ರೈಲು ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಅದಾದ ಬಳಿಕ ಅವರನ್ನು ಬೇರೆ ಯಾವುದೇ ಪ್ರಯಾಣಿಕರು ನೋಡಿಲ್ಲ” ಎಂದು ತಿಳಿಸಿದ್ದಾರೆ.

ಪ್ರಸ್ತುತ ರೈಲ್ವೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಿಸಿಟಿವಿ ದೃಶ್ಯಾವಳಿ ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ತೀವ್ರ ತನಿಖೆ ಆರಂಭಿಸಿದ್ದಾರೆ. ಈ ನಾಪತ್ತೆ ಪ್ರಕರಣವು ಸ್ಥಳೀಯರಲ್ಲೂ ಕುತೂಹಲ ಹಾಗೂ ಆತಂಕ ಮೂಡಿಸಿದೆ.

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

57 minutes ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

17 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

23 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

23 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago