ಜೀವನದಲ್ಲಿ ವಿಧಿ ಕೆಲವೊಮ್ಮೆ ಯೂ-ಟರ್ನ್ ಹೊಡೆದಾಗ ಎಂತಹವರೂ ಒಮ್ಮೆಗಂತೂ ಕಂಗಾಲಾಗುವುದು ಸಹಜ. ಅಂತಹದೇ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ಹೈದರಾಬಾದ್ನಿಂದ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿದ್ದ ಯುವತಿ ಹಸಿವಿನಿಂದ ಕಂಗೆಟ್ಟು ರಸ್ತೆ ಬದಿಯಲ್ಲಿ ಭಿಕ್ಷೆ ಎತ್ತುವ ಕಥೆ ಬೆಳಕಿಗೆ ಬಂದಿದೆ. ಈ ಯುವತಿ, ಡೆಟ್ರಾಯಿಟ್ನ ಟ್ರೈನ್ ವಿಶ್ವವಿದ್ಯಾಲಯದಿಂದ ತನ್ನ ಎಂಎಸ್ ಅನ್ನು ಮುಂದುವರಿಸಲು ಹೋದ ಹೈದರಾಬಾದ್ ನ ಮಹಿಳೆ ಚಿಕಾಗೋದಲ್ಲಿ ಹಸಿವಿನಿಂದ ಬಳಲುತ್ತಾ ರಸ್ತೆ ಬದಿಯಲ್ಲಿ ಕುಳಿತಿರುವುದು ಕಂಡು ಬಂದಿದೆ.
ಮಜ್ಲಿಸ್ ಬಚಾವೊ ತೆಹ್ರೀಕ್ ( MBT ) ಟ್ವಿಟರ್ ನಲ್ಲಿ ಅಮ್ಜದುಲ್ಲಾ ಖಾನ್ ಅವರ ವಕ್ತಾರರು ಹಂಚಿಕೊಂಡ ವೀಡಿಯೊ ಮಹಿಳೆಯನ್ನು ಸಂಪೂರ್ಣವಾಗಿ ದುರಂತ ಸ್ಥಿತಿಯಲ್ಲಿ ತೋರಿಸುತ್ತಿದೆ. ಆಕೆ ಅಮೆರಿಕದ ಪ್ರಸಿದ್ಧ ನಗರವಾದ ಚಿಕಾಗೋದ ಬೀದಿಯ ಒಂದು ಮೂಲೆಯಲ್ಲಿ ಕುಳಿತಿರುವುದು ಕಂಡುಬಂದಿದೆ.
ಈ ವಿಡಿಯೋದಲ್ಲಿ ಆ ಮಹಿಳೆ, ತನ್ನ ಹೆಸರನ್ನು ಸೈದಾ ಲುಲು ಮಿನ್ಹಾಜ್ ಜೈಡಿ ಎಂದು ಹೇಳಿದ್ದು, ತಾನು ಹೈದರಾಬಾದ್ಗೆ ಸೇರಿದವಳು ಎಂದು ಹೇಳಿಕೊಂಡಿದ್ದಾರೆ. ಮಹಿಳೆಯ ಸ್ಥಿತಿಯ ಬಗ್ಗೆ ತಿಳಿದಾಗ, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಕೆಯ ದೇಹದಿಂದ ಪರೀಕ್ಷೆಗೆಂದು ರಕ್ತದ ಮಾದರಿಗಳನ್ನು ಹೊರತೆಗೆದಾಗ ಆ ಮಹಿಳೆ ಇನ್ನಷ್ಟು ದುರ್ಬಲರಾದರು.
ವೀಡಿಯೊದಲ್ಲಿರುವ ವ್ಯಕ್ತಿಯು ಮಹಿಳೆಗೆ ದಾಲ್-ರೋಟಿಯನ್ನು ರಾತ್ರಿಯ ಊಟಕ್ಕೆ ನೀಡುತ್ತಾನೆ. ಜತೆಗೆ ಆಕೆಗೆ ಸಹಾಯ ಮಾಡುವ ಭರವಸೆಯನ್ನೂ ನೀಡುತ್ತಾನೆ. ಅವನು ಆಕೆಯಲ್ಲಿ ಭಾರತಕ್ಕೆ ಹಿಂತಿರುಗಲು ಕೇಳಿಕೊಳ್ಳುತ್ತಾನೆ. ಈ ನಡುವೆ, ಟ್ವಿಟರ್ನಲ್ಲಿ ಮಹಿಳೆಯ ಫೋಟೊ ಹಾಗೂ ದಾಖಲೆಗಳು ವೈರಲ್ ಆಗಿದ್ದು, ಸುದ್ದಿ ಶರವೇಗದೊಂದಿಗೆ ಹೈದರಾಬಾದ್ ತಲುಪಿದೆ. ಮಹಿಳೆಯ ತಾಯಿ ತನ್ನ ಮಗಳನ್ನು ಭಾರತಕ್ಕೆ ಮರಳಿ ಕರೆತರಲು ಸಹಾಯ ಕೋರಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಭಾರತೀಯ ರಾಯಭಾರ ಕಚೇರಿಗೆ ಮನವಿ ಮಾಡಿದ್ದಾರೆ.
ಈ ವೀಡಿಯೊದಿಂದ ದಿಗ್ಭ್ರಮೆಗೊಂಡ ನೆಟ್ಟಿಗರು, ಆಕೆಯನ್ನು ಮತ್ತೆ ಹೈದರಾಬಾದ್ ಗೆ ತರಬೇಕು ಎಂದು ಪ್ರತಿಕ್ರಿಯಿಸಿದ್ದಾರೆ. ಟ್ವಿಟರ್ ಬಳಕೆದಾರರಲ್ಲಿ ಒಬ್ಬರು, ‘ಅವರ ಸ್ಥಿತಿಯನ್ನು ನೋಡಿ ನನಗೆ ಆಘಾತವಾಗಿದೆ. ನನಗೆ ಅವರು ಬಾಲ್ಯದಿಂದಲೂ ಪರಿಚಿತರು. ಅವರು ಸ್ಟೂಡಿಯಸ್ ವಿದ್ಯಾರ್ಥಿಯಾಗಿದ್ದರು’ ಎಂದು ಕಾಮೆಂಟ್ ಮಾಡಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…