Latest

17 ವರ್ಷದ ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ, ಯುವಕ ಪರಾರಿ!

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಮೇಕೆ ಮೇಯಿಸಲು ಹೋಗುತ್ತಿದ್ದ 17 ವರ್ಷದ ದಲಿತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಸುರೇಶ್ ಎಂಬಾತ ಈ ಕೃತ್ಯವೆಸಗಿದವನು.
ಈ ಕೃತ್ಯಕೆ ಮಹಿಳೆಯೊಬ್ಬಳ ಸಹಕಾರ ಇತ್ತು ಎನ್ನಲಾಗಿದೆ. ಈ ವಿಷಯವನ್ನು ಹೊರಗೆ ಹೇಳದಂತೆ ಬೆದರಿಕೆಯನ್ನೂ ಹಾಕಿದ್ದಾನೆ. ಮಾತ್ರವಲ್ಲದೇ ಮದುವೆ ಆಗುವುದಾಗಿ ನಂಬಿಸಿ, ಪದೇಪದೇ ಆಕೆಯೊಂದಿಗೆಬಲವಂತವಾಗಿ ದೈಹಿಕ ಸಂಪರ್ಕವನ್ನು ಬೆಳೆಸಿದ್ದಾನೆ ಎಂದು ಹೇಳಲಾಗುತ್ತಿದೆ
ಬಾಲಕಿ ತನಗೆ ಅರಿವಿಲ್ಲದೆ ಏಳು ತಿಂಗಳ ಗರ್ಭಿಣಿ ಯಾಗಿದ್ದಾಳೆ. ಆಕೆಯ ಆರೋಗ್ಯ ದಲ್ಲಿ ಏರುಪೇರು ಆಗಿದ್ದಾಗ ಪೋಷಕರು ಗಮನಿಸಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ , ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿ ಎಂದು ತಿಳಿದು ಬಂದಿದೆ. ಆಗ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಸುರೇಶ್ ಕೃತ್ಯವು ಬೆಳಕಿಗೆ ಬಂದಿದೆ. ಇನ್ನೂ ಈ ವಿಷಯ ಬೆಳಕಿಗೆ ಬಂದ ತಕ್ಷಣ ಬಾಲಕಿಯರ ಸಂಬಂಧಿಕರು ಮದುವೆ ಆಗುವಂತೆ ಕೇಳಿದರೆ ಹಣ ಕೊಟ್ಟು ಸೇಟಲ್ ಮೆಂಟ್ ಮಾಡಿಕೊಳ್ಳೋಣ ಎಂದು ಸುರೇಶ್ ಹೇಳಿದ್ದಾನೆ ಎಂದು ಹೇಳಿದ್ದಾರೆ.
ಸದ್ಯ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಆಕೆಯನ್ನು ಸಾಂತ್ವನ ಕೇಂದ್ರಕ್ಕೆ ರವಾನೆ ಮಾಡಲಾಗುತ್ತದೆ. ವಿಚಾರಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ.

 

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 hour ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 hour ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

1 hour ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

1 hour ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

16 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

16 hours ago