ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಮೇಕೆ ಮೇಯಿಸಲು ಹೋಗುತ್ತಿದ್ದ 17 ವರ್ಷದ ದಲಿತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಸುರೇಶ್ ಎಂಬಾತ ಈ ಕೃತ್ಯವೆಸಗಿದವನು.
ಈ ಕೃತ್ಯಕೆ ಮಹಿಳೆಯೊಬ್ಬಳ ಸಹಕಾರ ಇತ್ತು ಎನ್ನಲಾಗಿದೆ. ಈ ವಿಷಯವನ್ನು ಹೊರಗೆ ಹೇಳದಂತೆ ಬೆದರಿಕೆಯನ್ನೂ ಹಾಕಿದ್ದಾನೆ. ಮಾತ್ರವಲ್ಲದೇ ಮದುವೆ ಆಗುವುದಾಗಿ ನಂಬಿಸಿ, ಪದೇಪದೇ ಆಕೆಯೊಂದಿಗೆಬಲವಂತವಾಗಿ ದೈಹಿಕ ಸಂಪರ್ಕವನ್ನು ಬೆಳೆಸಿದ್ದಾನೆ ಎಂದು ಹೇಳಲಾಗುತ್ತಿದೆ
ಬಾಲಕಿ ತನಗೆ ಅರಿವಿಲ್ಲದೆ ಏಳು ತಿಂಗಳ ಗರ್ಭಿಣಿ ಯಾಗಿದ್ದಾಳೆ. ಆಕೆಯ ಆರೋಗ್ಯ ದಲ್ಲಿ ಏರುಪೇರು ಆಗಿದ್ದಾಗ ಪೋಷಕರು ಗಮನಿಸಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ , ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿ ಎಂದು ತಿಳಿದು ಬಂದಿದೆ. ಆಗ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಸುರೇಶ್ ಕೃತ್ಯವು ಬೆಳಕಿಗೆ ಬಂದಿದೆ. ಇನ್ನೂ ಈ ವಿಷಯ ಬೆಳಕಿಗೆ ಬಂದ ತಕ್ಷಣ ಬಾಲಕಿಯರ ಸಂಬಂಧಿಕರು ಮದುವೆ ಆಗುವಂತೆ ಕೇಳಿದರೆ ಹಣ ಕೊಟ್ಟು ಸೇಟಲ್ ಮೆಂಟ್ ಮಾಡಿಕೊಳ್ಳೋಣ ಎಂದು ಸುರೇಶ್ ಹೇಳಿದ್ದಾನೆ ಎಂದು ಹೇಳಿದ್ದಾರೆ.
ಸದ್ಯ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಆಕೆಯನ್ನು ಸಾಂತ್ವನ ಕೇಂದ್ರಕ್ಕೆ ರವಾನೆ ಮಾಡಲಾಗುತ್ತದೆ. ವಿಚಾರಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…