ಮಾಲೂರು ತಾಲ್ಲೂಕು ದೊಡ್ಡಮಲೆ ಗ್ರಾಮದ ಪೂಜಾ ತನ್ನ ಪಕ್ಕದ ಮನೆಯ ಕಿರಣ್ ಜೊತೆ ಐದು ವರ್ಷಗಳಿಂದ ಪ್ರೀತಿಸಿ ದೈಹಿಕ ಸಂಬಂಧ ಹೊಂದಿದ್ದರು. ವಿಚಾರ ತಿಳಿದ ಪೋಷಕರು ಪೂಜಾಳನ್ನು ಒಂದುವರೆ ವರ್ಷದ ಹಿಂದೆ ಸಾಂಪ್ರದಾಯಿಕವಾಗಿ ತಮಿಳುನಾಡಿನ ಹುಡುಗನ ಜೊತೆ ಮದುವೆ ಮಾಡಿಸಿದ್ದರು. ಕಿರಣ್ ಮಾತು ಕೇಳಿ ಗಂಡನಿಗೆ ವಿಚ್ಛೇದನ ನೀಡಿ ಮರಳಿ ಬಂದ ಪೂಜಾ, ಕಿರಣ್ ಮನೆಗೆ ಬಂದಿದ್ದಳು. ಆದರೆ ಕಿರಣ್ ಹಾಗೂ ಆತನ ಅಪ್ಪ ಅಮ್ಮ ಪೂಜಾಳನ್ನು ಮನೆಗೆ ಕರೆದುಕೊಳ್ಳಲು ನಿರಾಕರಿಸಿದ್ದಾರೆ. ಪೂಜಾಳನ್ನು ತಾನು ಮದುವೆಯಾಗುವುದಿಲ್ಲ ಎಂದು ಕಿರಣ್ ನಿರಾಕರಿಸಿದ್ದಾನೆ.
ಅತ್ತ ಅತ್ತೆ ಮನೆಯೂ ಇಲ್ಲ, ಇತ್ತ ಪ್ರಿಯಕರನ ಮನೆಯೂ ಇಲ್ಲದೆ ಪೂಜಾ ಈಗ ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ್ದಾರೆ. ಆತನ ಮನೆಯ ಮುಂದೆ ಯುವತಿ ಧರಣಿ ಕೂತಿದ್ದು, ನ್ಯಾಯ ಸಿಗುವವರೆಗೆ, ಪ್ರಿಯಕರ ಬರುವವರೆಗೂ ಹೋರಾಟ ಎಂದಿದ್ದಾಳೆ. ಪೊಲೀಸರು ಮತ್ತು ಗ್ರಾಮಸ್ಥರ ಸಂಧಾನ ಸಹ ಯಶಸ್ವಿಯಾಗದೆ, ಮಾಸ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಿಯಕರ ಕಿರಣ್ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿರಣ್ಗಾಗಿ ಬಲೆ ಬೀಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…