Latest

ಪ್ರಿಯಕರನಿಗೋಸ್ಕರ ಗಂಡನಿಗೆ ವಿಚ್ಛೇದನ ಕೊಟ್ಟ ಪ್ರಿಯತಮೆಯ ಕೈಬಿಟ್ಟ ಪ್ರಿಯಕರ.

ಮಾಲೂರು ತಾಲ್ಲೂಕು ದೊಡ್ಡಮಲೆ ಗ್ರಾಮದ ಪೂಜಾ ತನ್ನ ಪಕ್ಕದ ಮನೆಯ ಕಿರಣ್ ಜೊತೆ ಐದು ವರ್ಷಗಳಿಂದ ಪ್ರೀತಿಸಿ ದೈಹಿಕ ಸಂಬಂಧ ಹೊಂದಿದ್ದರು. ವಿಚಾರ ತಿಳಿದ ಪೋಷಕರು ಪೂಜಾಳನ್ನು ಒಂದುವರೆ ವರ್ಷದ ಹಿಂದೆ ಸಾಂಪ್ರದಾಯಿಕವಾಗಿ ತಮಿಳುನಾಡಿನ ಹುಡುಗನ‌ ಜೊತೆ ಮದುವೆ ಮಾಡಿಸಿದ್ದರು. ಕಿರಣ್ ಮಾತು ಕೇಳಿ ಗಂಡನಿಗೆ ವಿಚ್ಛೇದನ ನೀಡಿ ಮರಳಿ ಬಂದ‌ ಪೂಜಾ, ಕಿರಣ್‌ ಮನೆಗೆ ಬಂದಿದ್ದಳು. ಆದರೆ ಕಿರಣ್ ಹಾಗೂ ಆತನ ಅಪ್ಪ ಅಮ್ಮ ಪೂಜಾಳನ್ನು ಮನೆಗೆ ಕರೆದುಕೊಳ್ಳಲು ನಿರಾಕರಿಸಿದ್ದಾರೆ. ಪೂಜಾಳನ್ನು ತಾನು‌ ಮದುವೆಯಾಗುವುದಿಲ್ಲ ಎಂದು‌ ಕಿರಣ್‌ ನಿರಾಕರಿಸಿದ್ದಾನೆ.
ಅತ್ತ ಅತ್ತೆ ಮನೆಯೂ ಇಲ್ಲ, ಇತ್ತ ಪ್ರಿಯಕರನ ಮನೆಯೂ ಇಲ್ಲದೆ‌ ಪೂಜಾ ಈಗ ನ್ಯಾಯಕ್ಕಾಗಿ ಠಾಣೆ ‌ಮೆಟ್ಟಿಲೇರಿದ್ದಾರೆ. ಆತನ ಮನೆಯ ಮುಂದೆ ಯುವತಿ ಧರಣಿ ಕೂತಿದ್ದು, ನ್ಯಾಯ ಸಿಗುವವರೆಗೆ, ಪ್ರಿಯಕರ ಬರುವವರೆಗೂ ಹೋರಾಟ ಎಂದಿದ್ದಾಳೆ. ಪೊಲೀಸರು ಮತ್ತು ಗ್ರಾಮಸ್ಥರ ಸಂಧಾನ ಸಹ ಯಶಸ್ವಿಯಾಗದೆ, ಮಾಸ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಿಯಕರ ಕಿರಣ್ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿರಣ್‌ಗಾಗಿ ಬಲೆ ಬೀಸಿದ್ದಾರೆ.

ಭ್ರಷ್ಟರ ಬೇಟೆ

Recent Posts

SSC 2026 ಭರ್ಜರಿ ನೇಮಕಾತಿ: 3,734 ಹುದ್ದೆಗಳು – ಮೇ 4ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…

3 hours ago

ನಿಶ್ಚಿತಾರ್ಥದ ದಿನವೇ ಯುವತಿ ನಾಪತ್ತೆ: ಮುಸ್ಲಿಂ ಯುವಕನೊಂದಿಗೆ ಪರಾರಿ? ಕುಟುಂಬಸ್ಥರ ಆಕ್ರೋಶ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…

3 hours ago

ದೇವನಹಳ್ಳಿ: ಚಹಾ ಅಂಗಡಿ ಯುವಕನ ಮೇಲೆ ಪೊಲೀಸ್ ದೌರ್ಜನ್ಯ – ವೈರಲ್ ವಿಡಿಯೋಗೆ ಸಾರ್ವಜನಿಕರ ಆಕ್ರೋಶ

ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ‘ಹೈವೇ ನೆಸ್ಟ್’ ಚಹಾ ಅಂಗಡಿಯಲ್ಲಿ ನಡೆದ ದೌರ್ಜನ್ಯ ಪ್ರಕರಣ ಇದೀಗ…

6 hours ago

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

18 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

1 day ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

1 day ago