Latest

ಪ್ರಿಯಕರನಿಗೋಸ್ಕರ ಗಂಡನಿಗೆ ವಿಚ್ಛೇದನ ಕೊಟ್ಟ ಪ್ರಿಯತಮೆಯ ಕೈಬಿಟ್ಟ ಪ್ರಿಯಕರ.

ಮಾಲೂರು ತಾಲ್ಲೂಕು ದೊಡ್ಡಮಲೆ ಗ್ರಾಮದ ಪೂಜಾ ತನ್ನ ಪಕ್ಕದ ಮನೆಯ ಕಿರಣ್ ಜೊತೆ ಐದು ವರ್ಷಗಳಿಂದ ಪ್ರೀತಿಸಿ ದೈಹಿಕ ಸಂಬಂಧ ಹೊಂದಿದ್ದರು. ವಿಚಾರ ತಿಳಿದ ಪೋಷಕರು ಪೂಜಾಳನ್ನು ಒಂದುವರೆ ವರ್ಷದ ಹಿಂದೆ ಸಾಂಪ್ರದಾಯಿಕವಾಗಿ ತಮಿಳುನಾಡಿನ ಹುಡುಗನ‌ ಜೊತೆ ಮದುವೆ ಮಾಡಿಸಿದ್ದರು. ಕಿರಣ್ ಮಾತು ಕೇಳಿ ಗಂಡನಿಗೆ ವಿಚ್ಛೇದನ ನೀಡಿ ಮರಳಿ ಬಂದ‌ ಪೂಜಾ, ಕಿರಣ್‌ ಮನೆಗೆ ಬಂದಿದ್ದಳು. ಆದರೆ ಕಿರಣ್ ಹಾಗೂ ಆತನ ಅಪ್ಪ ಅಮ್ಮ ಪೂಜಾಳನ್ನು ಮನೆಗೆ ಕರೆದುಕೊಳ್ಳಲು ನಿರಾಕರಿಸಿದ್ದಾರೆ. ಪೂಜಾಳನ್ನು ತಾನು‌ ಮದುವೆಯಾಗುವುದಿಲ್ಲ ಎಂದು‌ ಕಿರಣ್‌ ನಿರಾಕರಿಸಿದ್ದಾನೆ.
ಅತ್ತ ಅತ್ತೆ ಮನೆಯೂ ಇಲ್ಲ, ಇತ್ತ ಪ್ರಿಯಕರನ ಮನೆಯೂ ಇಲ್ಲದೆ‌ ಪೂಜಾ ಈಗ ನ್ಯಾಯಕ್ಕಾಗಿ ಠಾಣೆ ‌ಮೆಟ್ಟಿಲೇರಿದ್ದಾರೆ. ಆತನ ಮನೆಯ ಮುಂದೆ ಯುವತಿ ಧರಣಿ ಕೂತಿದ್ದು, ನ್ಯಾಯ ಸಿಗುವವರೆಗೆ, ಪ್ರಿಯಕರ ಬರುವವರೆಗೂ ಹೋರಾಟ ಎಂದಿದ್ದಾಳೆ. ಪೊಲೀಸರು ಮತ್ತು ಗ್ರಾಮಸ್ಥರ ಸಂಧಾನ ಸಹ ಯಶಸ್ವಿಯಾಗದೆ, ಮಾಸ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಿಯಕರ ಕಿರಣ್ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿರಣ್‌ಗಾಗಿ ಬಲೆ ಬೀಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

9 minutes ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

11 minutes ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

4 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

4 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

4 hours ago