Latest

ಮದರಸಾದಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ: ಪೋಷಕರ ಆಕ್ರೋಶ

ಬೆಂಗಳೂರು: ಶಿಕ್ಷಣ ನೀಡಬೇಕಾದ ಸ್ಥಳದಲ್ಲಿ ಮಕ್ಕಳ ಮೇಲಿನ ಕ್ರೌರ್ಯ ನಡೀತಿದೆಯೆಂಬ ಆಘಾತಕಾರಿ ಘಟನೆ ಹೆಗಡೆನಗರದ ಮದರಸಾದಲ್ಲಿ ಬೆಳಕಿಗೆ ಬಂದಿದೆ. ಇಲ್ಲೊಬ್ಬ ವ್ಯಕ್ತಿ, ಶಿಸ್ತಿನ ಹೆಸರಲ್ಲಿ ಬಾಲಕಿಯರ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಇದರಿಂದ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.

ಕ್ರೂರತೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಮದರಸಾದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ನಡೆದಿರುವುದು ಹೊಸದಲ್ಲ, ಆದರೆ ಈ ಘಟನೆಯ ವಿಡಿಯೋ ಹೊರಬಂದ ಕಾರಣದಿಂದಾಗಿ ಇಡೀ ನಗರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆರೋಪಿಯು ಬಾಲಕಿಯರನ್ನು ಕಚೇರಿಗೆ ಕರೆಸಿಕೊಂಡು ಮನಬಂದಂತೆ ಹೊಡೆದಿದ್ದು, ಅವರ ಖಾಸಗಿ ಅಂಗಾಂಗಗಳಿಗೆ ಸ್ಪರ್ಶಿಸುವ ಮೂಲಕ ಅಮಾನವೀಯ ವರ್ತನೆ ಮೆರೆದಿರುವುದಾಗಿ ಆರೋಪ ಕೇಳಿಬಂದಿದೆ.

ಪೋಷಕರ ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹ
ಈ ಘಟನೆ ತಿಳಿದ ತಕ್ಷಣ, ಶೋಕಕ್ಕೀಡಾದ ಪೋಷಕರು ಮದರಸಾ ಎದುರು ಸೇರಿ ನ್ಯಾಯಕ್ಕೆ ಒತ್ತಾಯಿಸಿದರು. ಪೀಡಿತ ಬಾಲಕಿ ಹೇಳುವ ಪ್ರಕಾರ, ಈ ಮದರಸಾದಲ್ಲಿ ಕ್ಷುಲ್ಲಕ ಕಾರಣಗಳಿಗೆ ಮಕ್ಕಳ ಮೇಲೆ ಹಲ್ಲೆ ಮಾಡುವುದು ಸಾಮಾನ್ಯ. ಜೋರಾಗಿ ಮಾತನಾಡಿದರೂ ಸಹ ಶಿಕ್ಷೆ ಅನುಭವಿಸಬೇಕಾಗುತ್ತದೆಯಂತೆ. ಅಲ್ಲದೇ, ಊಟ, ನೀರು, ನೈರ್ಮಲ್ಯಗಳ ಸಮಸ್ಯೆಯೂ ಇದೆ ಎಂದು ಆರೋಪಿಸಲಾಗಿದೆ.

ಪೋಷಕರು ಈ ಸಿಸಿ ಟೀವಿ ದೃಶ್ಯಗಳನ್ನು ಬೆಂಗಳೂರಿನ ಪೊಲೀಸ್ ಕಮಿಷನರ್, ಎಸಿಪಿ, ಡಿಸಿಪಿ ಅವರಿಗೆ ಕಳುಹಿಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಕ್ರಮ ಕೈಗೊಳ್ಳಬೇಕಾದ ಅಗತ್ಯತೆಯಿದೆ, ಹಾಗೆಯೇ ಮಕ್ಕಳ ಸುರಕ್ಷತೆಗಾಗಿ ಸೂಕ್ತ ಕ್ರಮ ಜರುಗಿಸಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದಾರೆ.

nazeer ahamad

Recent Posts

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

6 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

20 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

22 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago