Latest

ಮದರಸಾದಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ: ಪೋಷಕರ ಆಕ್ರೋಶ

ಬೆಂಗಳೂರು: ಶಿಕ್ಷಣ ನೀಡಬೇಕಾದ ಸ್ಥಳದಲ್ಲಿ ಮಕ್ಕಳ ಮೇಲಿನ ಕ್ರೌರ್ಯ ನಡೀತಿದೆಯೆಂಬ ಆಘಾತಕಾರಿ ಘಟನೆ ಹೆಗಡೆನಗರದ ಮದರಸಾದಲ್ಲಿ ಬೆಳಕಿಗೆ ಬಂದಿದೆ. ಇಲ್ಲೊಬ್ಬ ವ್ಯಕ್ತಿ, ಶಿಸ್ತಿನ ಹೆಸರಲ್ಲಿ ಬಾಲಕಿಯರ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಇದರಿಂದ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.

ಕ್ರೂರತೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಮದರಸಾದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ನಡೆದಿರುವುದು ಹೊಸದಲ್ಲ, ಆದರೆ ಈ ಘಟನೆಯ ವಿಡಿಯೋ ಹೊರಬಂದ ಕಾರಣದಿಂದಾಗಿ ಇಡೀ ನಗರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆರೋಪಿಯು ಬಾಲಕಿಯರನ್ನು ಕಚೇರಿಗೆ ಕರೆಸಿಕೊಂಡು ಮನಬಂದಂತೆ ಹೊಡೆದಿದ್ದು, ಅವರ ಖಾಸಗಿ ಅಂಗಾಂಗಗಳಿಗೆ ಸ್ಪರ್ಶಿಸುವ ಮೂಲಕ ಅಮಾನವೀಯ ವರ್ತನೆ ಮೆರೆದಿರುವುದಾಗಿ ಆರೋಪ ಕೇಳಿಬಂದಿದೆ.

ಪೋಷಕರ ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹ
ಈ ಘಟನೆ ತಿಳಿದ ತಕ್ಷಣ, ಶೋಕಕ್ಕೀಡಾದ ಪೋಷಕರು ಮದರಸಾ ಎದುರು ಸೇರಿ ನ್ಯಾಯಕ್ಕೆ ಒತ್ತಾಯಿಸಿದರು. ಪೀಡಿತ ಬಾಲಕಿ ಹೇಳುವ ಪ್ರಕಾರ, ಈ ಮದರಸಾದಲ್ಲಿ ಕ್ಷುಲ್ಲಕ ಕಾರಣಗಳಿಗೆ ಮಕ್ಕಳ ಮೇಲೆ ಹಲ್ಲೆ ಮಾಡುವುದು ಸಾಮಾನ್ಯ. ಜೋರಾಗಿ ಮಾತನಾಡಿದರೂ ಸಹ ಶಿಕ್ಷೆ ಅನುಭವಿಸಬೇಕಾಗುತ್ತದೆಯಂತೆ. ಅಲ್ಲದೇ, ಊಟ, ನೀರು, ನೈರ್ಮಲ್ಯಗಳ ಸಮಸ್ಯೆಯೂ ಇದೆ ಎಂದು ಆರೋಪಿಸಲಾಗಿದೆ.

ಪೋಷಕರು ಈ ಸಿಸಿ ಟೀವಿ ದೃಶ್ಯಗಳನ್ನು ಬೆಂಗಳೂರಿನ ಪೊಲೀಸ್ ಕಮಿಷನರ್, ಎಸಿಪಿ, ಡಿಸಿಪಿ ಅವರಿಗೆ ಕಳುಹಿಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಕ್ರಮ ಕೈಗೊಳ್ಳಬೇಕಾದ ಅಗತ್ಯತೆಯಿದೆ, ಹಾಗೆಯೇ ಮಕ್ಕಳ ಸುರಕ್ಷತೆಗಾಗಿ ಸೂಕ್ತ ಕ್ರಮ ಜರುಗಿಸಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದಾರೆ.

nazeer ahamad

Recent Posts

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…

19 minutes ago

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…

20 minutes ago

ಜೈಲಿನಲ್ಲೂ ಪ್ರಜ್ವಲ್ ರೇವಣ್ಣಗೆ ಮೊಬೈಲ್‌ ಸೌಲಭ್ಯ? ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ, ಅಧಿಕಾರಿಗಳ ವಿರುದ್ಧ ಗಂಭೀರ ಪ್ರಶ್ನೆ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್…

22 minutes ago

ವಸತಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ಉನ್ನತ ಮಟ್ಟದ ತನಿಖೆಗೆ ಆಗ್ರಹ!

ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ…

2 hours ago

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

24 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

24 hours ago