Latest

ಮದರಸಾದಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ: ಪೋಷಕರ ಆಕ್ರೋಶ

ಬೆಂಗಳೂರು: ಶಿಕ್ಷಣ ನೀಡಬೇಕಾದ ಸ್ಥಳದಲ್ಲಿ ಮಕ್ಕಳ ಮೇಲಿನ ಕ್ರೌರ್ಯ ನಡೀತಿದೆಯೆಂಬ ಆಘಾತಕಾರಿ ಘಟನೆ ಹೆಗಡೆನಗರದ ಮದರಸಾದಲ್ಲಿ ಬೆಳಕಿಗೆ ಬಂದಿದೆ. ಇಲ್ಲೊಬ್ಬ ವ್ಯಕ್ತಿ, ಶಿಸ್ತಿನ ಹೆಸರಲ್ಲಿ ಬಾಲಕಿಯರ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಇದರಿಂದ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.

ಕ್ರೂರತೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಮದರಸಾದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ನಡೆದಿರುವುದು ಹೊಸದಲ್ಲ, ಆದರೆ ಈ ಘಟನೆಯ ವಿಡಿಯೋ ಹೊರಬಂದ ಕಾರಣದಿಂದಾಗಿ ಇಡೀ ನಗರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆರೋಪಿಯು ಬಾಲಕಿಯರನ್ನು ಕಚೇರಿಗೆ ಕರೆಸಿಕೊಂಡು ಮನಬಂದಂತೆ ಹೊಡೆದಿದ್ದು, ಅವರ ಖಾಸಗಿ ಅಂಗಾಂಗಗಳಿಗೆ ಸ್ಪರ್ಶಿಸುವ ಮೂಲಕ ಅಮಾನವೀಯ ವರ್ತನೆ ಮೆರೆದಿರುವುದಾಗಿ ಆರೋಪ ಕೇಳಿಬಂದಿದೆ.

ಪೋಷಕರ ಪ್ರತಿಭಟನೆ, ನ್ಯಾಯಕ್ಕಾಗಿ ಆಗ್ರಹ
ಈ ಘಟನೆ ತಿಳಿದ ತಕ್ಷಣ, ಶೋಕಕ್ಕೀಡಾದ ಪೋಷಕರು ಮದರಸಾ ಎದುರು ಸೇರಿ ನ್ಯಾಯಕ್ಕೆ ಒತ್ತಾಯಿಸಿದರು. ಪೀಡಿತ ಬಾಲಕಿ ಹೇಳುವ ಪ್ರಕಾರ, ಈ ಮದರಸಾದಲ್ಲಿ ಕ್ಷುಲ್ಲಕ ಕಾರಣಗಳಿಗೆ ಮಕ್ಕಳ ಮೇಲೆ ಹಲ್ಲೆ ಮಾಡುವುದು ಸಾಮಾನ್ಯ. ಜೋರಾಗಿ ಮಾತನಾಡಿದರೂ ಸಹ ಶಿಕ್ಷೆ ಅನುಭವಿಸಬೇಕಾಗುತ್ತದೆಯಂತೆ. ಅಲ್ಲದೇ, ಊಟ, ನೀರು, ನೈರ್ಮಲ್ಯಗಳ ಸಮಸ್ಯೆಯೂ ಇದೆ ಎಂದು ಆರೋಪಿಸಲಾಗಿದೆ.

ಪೋಷಕರು ಈ ಸಿಸಿ ಟೀವಿ ದೃಶ್ಯಗಳನ್ನು ಬೆಂಗಳೂರಿನ ಪೊಲೀಸ್ ಕಮಿಷನರ್, ಎಸಿಪಿ, ಡಿಸಿಪಿ ಅವರಿಗೆ ಕಳುಹಿಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಕ್ರಮ ಕೈಗೊಳ್ಳಬೇಕಾದ ಅಗತ್ಯತೆಯಿದೆ, ಹಾಗೆಯೇ ಮಕ್ಕಳ ಸುರಕ್ಷತೆಗಾಗಿ ಸೂಕ್ತ ಕ್ರಮ ಜರುಗಿಸಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದಾರೆ.

nazeer ahamad

Recent Posts

400 ವರ್ಷ ಹಿಂದಿನ ರಾಜನೆಂದು ಹೇಳುತ್ತಿರುವ 10 ವರ್ಷದ ಬಾಲಕ: ಪುನರ್ಜನ್ಮದ ರಹಸ್ಯವೇ?

ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…

13 hours ago

ಅನೈತಿಕ ಸಂಬಂಧ: ಪವಿತ್ರಾಳನ್ನು ಪಡೆಯಲು ಆಕೆಯ ಗಂಡನನ್ನೇ ಕೊಂದ ಪ್ರಿಯಕರ..!

ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…

13 hours ago

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

19 hours ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

23 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

24 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

24 hours ago