ಹಾವೇರಿ: ಹಾನಗಲ್ ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಭೀಕರ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ‘ಕೆಲಸ ಕೊಡಿಸುವೆ’ ಎಂಬ ಆಮಿಷವೊಡ್ಡಿ ಅನಾಥ ಹಾಗೂ ಮನೆ ಬಿಟ್ಟು ಹೊರಟ ಬಾಲಕಿಯರನ್ನು ಮನೆಗೆ ಕರೆದುಕೊಂಡು ಹೋಗಿ, ಅವರ ಮೇಲೆ ಮಾನಸಿಕ ಹಾಗೂ ಶಾರೀರಿಕ ಪೀಡೆ ಎಸಗುತ್ತಿದ್ದ ಲಕ್ಕವ್ವ ಎಂಬ ಮಹಿಳೆ ಧರ್ಮದೇಟಿಗೆ ಒಳಗಾಗಿದ್ದಾಳೆ.
ಗ್ರಾಮಸ್ಥರ ಹೇಳಿಕೆಯಂತೆ, ಲಕ್ಕವ್ವ 14 ವರ್ಷದ ಬಾಲಕಿಯೊಬ್ಬಳನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ, ಮಂಚದ ಕೆಳಗೆ ಬಚ್ಚಿಟ್ಟು ಬದ್ರವಾಗಿ ನಿರ್ಬಂಧಿಸಿದ್ದಳು. ಅಲ್ಲದೆ, ಆಕೆಗೆ ಚಿತ್ರಹಿಂಸೆ ನೀಡುತ್ತಿದ್ದಳು. ಈ ಬಗ್ಗೆ ಮಾಹಿತಿ ಲಭಿಸಿದ ಗ್ರಾಮಸ್ಥರು ತಕ್ಷಣ ಮಹಿಳೆಯ ಮನೆಗೆ ಧಾವಿಸಿ, ಗಲಾಟೆ ಮಾಡಿದ್ದು, ಬಳಿಕ ಆಕೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಲಕ್ಕವ್ವ ಎಷ್ಟೇ ದಿನಗಳಿಂದ ಈ ಕೃತ್ಯ ನಡೆಸುತ್ತಿದ್ದಾಳೆ ಎಂಬುದು ಕಾರಣವಾಗಿದೆ. ಹಾವೇರಿ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ವಿವಿಧ ನಗರಗಳ ಬಸ್ ನಿಲ್ದಾಣಗಳಲ್ಲಿ ಓಡಾಡುತ್ತಿದ್ದ ಅನಾಥ ಹಾಗೂ ಒಂಟಿ ಬಾಲಕಿಯರೊಂದಿಗೆ ಪರಿಚಯ ಬೆಳೆಸುತ್ತಿದ್ದ ಲಕ್ಕವ್ವ, ಅವರಿಗೆ ಕೆಲಸ ಕೊಡಿಸುವ ಭರವಸೆ ನೀಡುತ್ತಿದ್ದಳು. ಬಳಿಕ ತಮ್ಮ ಮನೆಗೆ ಕರೆದುಕೊಂಡು ಹೋಗಿ ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡುವ, ಅಥವಾ ಮದುವೆ ಮಾಡಿಸುವ ನೆಪದಲ್ಲಿ ಹಣ ಪಡೆಯುವಂತಹ ಕೃತ್ಯಗಳಲ್ಲಿ ನಿರತರಾಗಿದ್ದಾಳೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಇದಕ್ಕೂ ಮುನ್ನ, ಚಿಕ್ಕಮಗಳೂರು ಮೂಲದ ಬಾಲಕಿಯೊಬ್ಬಳನ್ನು ಮನೆಯಲ್ಲಿರಿಸಿಕೊಂಡು ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಶೋಷಿತ ಬಾಲಕಿ ತಪ್ಪಿಸಿಕೊಳ್ಳಲು ಹೊರಟಾಗ, ಲಕ್ಕವ್ವ ಡ್ರಾಮಾ ಸೃಷ್ಟಿಸಿ ‘ಅವಳಿಗೆ ಹುಚ್ಚು ಹಿಡಿದಿದೆ’ ಎಂದು ತಪ್ಪುದಾರವನ್ನಾಗಿ ಮಾಡಲು ಯತ್ನಿಸಿದ್ದಳು. ಆದರೆ ಬಾಲಕಿ ತಾನು ಅನುಭವಿಸಿದ ನೋವಿನ ಬಗ್ಗೆ ಗ್ರಾಮಸ್ಥರ ಮುಂದೆ ಅಳಲು ತೋಡಿಕೊಂಡ ನಂತರ ಸತ್ಯ ಬೆಳಕಿಗೆ ಬಂದಿದೆ.
ಈ ಘಟನೆಯ ನಂತರ ಗ್ರಾಮಸ್ಥರು ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿ ಮಹಿಳೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈಗಲೇ ಮತ್ತೊಂದು ಬಾಲಕಿಯನ್ನು ಮನೆಗೆ ಕರೆತಂದಿರುವುದು ಕಂಡುಬಂದ ಹಿನ್ನಲೆಯಲ್ಲಿ, ಆಕ್ರೋಶ ಸ್ಫೋಟಗೊಂಡಿದ್ದು ಮಹಿಳೆಯ ಮನೆಗೆ ದಾಳಿ ನಡೆದಿದೆ.
ಈ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪೀಡಿತ ಬಾಲಕಿಯರಿಗೆ ರಕ್ಷಣೆ ಒದಗಿಸಲು ಹಾಗೂ ಇಂತಹ ಪ್ರಕರಣಗಳು ಮರುಕಳಿಸದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಗತ್ಯವಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…