Categories: CorruptionLatest

ಜೈಪುರದಲ್ಲಿ ಲಂಚ ಪಡೆಯುತ್ತಿದ್ದ ಬೆಂಗಳೂರು ಪೊಲೀಸರು ಎಸಿಬಿ ಬಲೆಗೆ: ಎಚ್‌ಎಎಲ್ ಠಾಣೆಯ ಮೂವರ ಬಂಧನ

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗಾಗಿ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ ಬೆಂಗಳೂರಿನ ಎಚ್‌ಎಎಲ್ ಠಾಣೆಯ ಮೂವರು ಪೊಲೀಸರು ಲಂಚ ಸ್ವೀಕರಿಸುವ ವೇಳೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ಎಚ್‌ಎಎಲ್ ಠಾಣೆಯ ಪಿಎಸ್‌ಐ ಅನಿತಾ, ಹೆಡ್ ಕಾನ್‌ಸ್ಟೆಬಲ್ ಉಳುವಪ್ಪ ಹಾಗೂ ಕಾನ್‌ಸ್ಟೆಬಲ್ ಯತೀಶ್ ಬಂಧಿತ ಪೊಲೀಸರು. ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯೊಬ್ಬರಿಂದ ಎರಡು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಇವರ ಮೇಲಿದೆ.

ಆರೋಪಿಗಳು ಬೇಡಿಕೆ ಇಟ್ಟಿದ್ದ ಹಣದಲ್ಲಿ ಮುಂಗಡವಾಗಿ 40 ಸಾವಿರ ರೂಪಾಯಿ ಸ್ವೀಕರಿಸುವ ವೇಳೆ ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಎಸಿಬಿ ಎಎಸ್‌ಪಿ ಭೂಪೇಂದ್ರ ಚೌಧರಿ ನೇತೃತ್ವದಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ.

ಪ್ರಕರಣ ಸಂಬಂಧ ಜೈಪುರ ಎಸಿಬಿ ಅಧಿಕಾರಿಗಳು ಬಂಧಿತ ಪೊಲೀಸರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಲಂಚ ಪ್ರಕರಣದಲ್ಲಿ ಬೆಂಗಳೂರು ಪೊಲೀಸರ ಬಂಧನದ ಕುರಿತು ರಾಜಸ್ಥಾನದ ಎಸಿಬಿ ಅಧಿಕಾರಿಗಳು ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಈ ಘಟನೆ ಬೆಂಗಳೂರು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದ್ದು, ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿಯೂ ಪರಿಶೀಲನೆ ಆರಂಭವಾಗಿದೆ. ಸದ್ಯ ಎಸಿಬಿ ಅಧಿಕಾರಿಗಳು ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಲಂಚ ಬೇಡಿಕೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

12 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

12 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

12 hours ago