ದಿ 1/10/2022 ರಂದು ಬೆಳಗಿನ ಜಾವ KA 47/1207 ಈ ನಂಬರಿನ ಪ್ಯಾಸೆಂಜರ್ ಟೆಂಪೋ ಅನಂತವಾಡಿಯಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿರುತ್ತದೆ. ಈ ಟೆಂಪೋ ಚಾಲಕ (ರಾಮಚಂದ್ರ ಗೌಡ) ರಸ್ತೆ ಮಧ್ಯದಲ್ಲಿ ಕೈ ಮಾಡಿದ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತಿರುವಾಗ ಭಟ್ಕಳ ರಾಷ್ಟ್ರೀಯ ಹೆದ್ದಾರಿ 66 ತೆರನಮಕ್ಕಿ ಹೆದ್ದಾರಿ ಪಕ್ಕದಲ್ಲಿ ಒಬ್ಬ ಮಹಿಳಾ ಪ್ಯಾಸೆಂಜರರನ್ನು ಟೆಂಪೋದಲ್ಲಿ ಹತ್ತಿಸಿಕೊಂಡು ನಿಧಾನವಾಗಿ ಟೆಂಪೋ ಚಲಾಯಿಸುತ್ತಿರುವಾಗ ಅದೇ ಮಾರ್ಗದಲ್ಲಿ ಅನಂತವಾಡಿಯಿಂದ ಭಟ್ಕಳ ಕಡೆ ತೆರಳುತ್ತಿದ್ದ k s r t c ಬಸ್ಸ್ ನಂಬರ್ KA 01/F9088 ಈ ಬಸ್ ಚಾಲಕ (ಪ್ರಸಾದ ಯು ಬಂಗೇರ) ಈತನು k s r t c ಬಸ್ಸನ್ನು ಅತಿವೇಗವಾಗಿ ನಿರ್ಲಕ್ಷತನದಿಂದ ಬಸ್ ಚಲಾಯಿಸಿಕೊಂಡು ಭಟ್ಕಳ ಕಡೆ ತೆರಳುತ್ತಿದ್ದ ಸದರಿ ಟೆಂಪೋಗೆ ಹಿಂದಿಂದ ಡಿಕ್ಕಿ ಹೊಡೆದು ಅಪಘಾತ ಪಡಿಸಿ ಪ್ಯಾಸೆಂಜರ್ ಟೆಂಪೋದಲ್ಲಿನ 19 ಜನರಿಗೆ ಹಾಗೂ k s r t c ಬಸ್ಸಿನಲ್ಲಿದ್ದ ಒಬ್ಬ ಮಹಿಳಾ ಪ್ರಯಾಣಿಕರಿಗೆ ಗಾಯ. ಹಾಗೂ ಸದರಿ ಟೆಂಪೋ ಚಾಲಕ ರಾಮಚಂದ್ರ ರವರು ಕೂಡಲೇ ಮುರ್ಡೇಶ್ವರ ಪೊಲೀಸ್ ಠಾಣೆಗೆ ವಿಷಯ ತಿಳಿಸಿ ದೂರು ದಾಖಲಿಸುತ್ತಾರೆ . ವಿಷಯ ತಿಳಿದ ಮುರ್ಡೇಶ್ವರ ಪೋಲಿಸ ಠಾಣೆಯ ಕಾನೂನು ಮತ್ತು ಸೂ ವ್ಯವಸ್ತೆಯ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಪರಮಾನಂದ ಬಿ ಕುಮಾರ್ ರವರು ದೂರು ದಾಖಲಿಸಿಕೊಂದು ಕಾನೂನು ಕ್ರಮ ಜರುಗಿಸಿದ್ದಾರೆ ..
ವರದಿ: ಶ್ರೀಪಾದ್ ಹೆಗಡೆ
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…
ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…
ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…