ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕ್ರೇನ್ನ್ನು ಕಳ್ಳತನ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಹಳಿಯಾಳ ತಾಲೂಕಿನ ಅಜಂಗಾವ ಗ್ರಾಮದ ರಘುನಾಥ ಕದಂ ಅವರ ಮಾಲಕತ್ವದ ಈ ಕ್ರೇನ್ನ್ನು ಖಾನಾಪುರ ತಾಲೂಕಿನ ನಂದಗಾವ ಗ್ರಾಮದ ಸೈಫುಲ್ಲಾ ಕಮಾಲಸಾಹೇಬ ಮುಲ್ಲಾ ಎಂಬಾತ ಕದಿದಿದ್ದಾನೆ. ಈ ಕ್ರೇನ್ ಬೆಲೆ ಸುಮಾರು 14 ಲಕ್ಷ ರೂಪಾಯಿಯಾಗಿದ್ದು, ಸಾಲಭಾರದ ಕಾರಣದಿಂದಾಗಿ ಆರೋಪಿಯು ಈ ಕೃತ್ಯಕ್ಕೆ ಮುಂದಾಗಿದ್ದನೆಂದು ತಿಳಿದುಬಂದಿದೆ.
ಪ್ರಾರಂಭದಲ್ಲಿ ಯಾವುದೇ ಸುಳಿವಿಲ್ಲದ ಈ ಪ್ರಕರಣದಲ್ಲಿ, ಪೊಲೀಸರು ಸಿಸಿಟಿವಿ ಕ್ಯಾಂಮೆರಾಗಳ ಸಹಾಯದಿಂದ ಆರೋಪಿಯ ಹಾದಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅದರ ಆಧಾರದಲ್ಲಿ ಆರೋಪಿ ಇರುವ ಸ್ಥಳವನ್ನು ಗುರುತಿಸಿ ಬಂಧಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ಸಪೆಕ್ಟರ್ ಮುರಗೇಶ ಚೆನ್ನಣ್ಣನವರ ನೇತೃತ್ವದ ತಂಡ ಈ ಪ್ರಕರಣವನ್ನು ಯಶಸ್ವಿಯಾಗಿ
ಪಿಎಸ್ಐ ಎಂ.ಡಿ. ಪಾಟೀಲ ಹಾಗೂ ಸಿಬ್ಬಂದಿಗಳಾದ ಎಚ್.ಬಿ. ಐಹೊಳೆ, ಅಬ್ರಹಾರ್ ಪಾಟೀಲ, ಅಬ್ದುಲ ಕಾಕರ, ಚೆನ್ನಪ್ಪ ಬಳ್ಳೊಳ್ಳಿ, ಮಹಾಂತೇಶ ಮದ್ದಿನ, ಗಿರೀಶ ತಿಪ್ಪಣಷನವರ, ತಿಪ್ಪಣ್ಣ ಆಲೂರ ಹಾಗೂ ತಾಂತ್ರಿಕ ಸಿಬ್ಬಂದಿಗಳಾದ ಆರೀಫ್ ಗೋಲಂದಾಜ್ ಮತ್ತು ವಿಠ್ಠಲ ಡಂಗನವರ ಈ ಕಾರ್ಯಾಚರಣೆಯಲ್ಲಿ ಭಾಗಿ ಆಗಿದ್ದರು.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…