ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕ್ರೇನ್ನ್ನು ಕಳ್ಳತನ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಹಳಿಯಾಳ ತಾಲೂಕಿನ ಅಜಂಗಾವ ಗ್ರಾಮದ ರಘುನಾಥ ಕದಂ ಅವರ ಮಾಲಕತ್ವದ ಈ ಕ್ರೇನ್ನ್ನು ಖಾನಾಪುರ ತಾಲೂಕಿನ ನಂದಗಾವ ಗ್ರಾಮದ ಸೈಫುಲ್ಲಾ ಕಮಾಲಸಾಹೇಬ ಮುಲ್ಲಾ ಎಂಬಾತ ಕದಿದಿದ್ದಾನೆ. ಈ ಕ್ರೇನ್ ಬೆಲೆ ಸುಮಾರು 14 ಲಕ್ಷ ರೂಪಾಯಿಯಾಗಿದ್ದು, ಸಾಲಭಾರದ ಕಾರಣದಿಂದಾಗಿ ಆರೋಪಿಯು ಈ ಕೃತ್ಯಕ್ಕೆ ಮುಂದಾಗಿದ್ದನೆಂದು ತಿಳಿದುಬಂದಿದೆ.
ಪ್ರಾರಂಭದಲ್ಲಿ ಯಾವುದೇ ಸುಳಿವಿಲ್ಲದ ಈ ಪ್ರಕರಣದಲ್ಲಿ, ಪೊಲೀಸರು ಸಿಸಿಟಿವಿ ಕ್ಯಾಂಮೆರಾಗಳ ಸಹಾಯದಿಂದ ಆರೋಪಿಯ ಹಾದಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅದರ ಆಧಾರದಲ್ಲಿ ಆರೋಪಿ ಇರುವ ಸ್ಥಳವನ್ನು ಗುರುತಿಸಿ ಬಂಧಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ಸಪೆಕ್ಟರ್ ಮುರಗೇಶ ಚೆನ್ನಣ್ಣನವರ ನೇತೃತ್ವದ ತಂಡ ಈ ಪ್ರಕರಣವನ್ನು ಯಶಸ್ವಿಯಾಗಿ
ಪಿಎಸ್ಐ ಎಂ.ಡಿ. ಪಾಟೀಲ ಹಾಗೂ ಸಿಬ್ಬಂದಿಗಳಾದ ಎಚ್.ಬಿ. ಐಹೊಳೆ, ಅಬ್ರಹಾರ್ ಪಾಟೀಲ, ಅಬ್ದುಲ ಕಾಕರ, ಚೆನ್ನಪ್ಪ ಬಳ್ಳೊಳ್ಳಿ, ಮಹಾಂತೇಶ ಮದ್ದಿನ, ಗಿರೀಶ ತಿಪ್ಪಣಷನವರ, ತಿಪ್ಪಣ್ಣ ಆಲೂರ ಹಾಗೂ ತಾಂತ್ರಿಕ ಸಿಬ್ಬಂದಿಗಳಾದ ಆರೀಫ್ ಗೋಲಂದಾಜ್ ಮತ್ತು ವಿಠ್ಠಲ ಡಂಗನವರ ಈ ಕಾರ್ಯಾಚರಣೆಯಲ್ಲಿ ಭಾಗಿ ಆಗಿದ್ದರು.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…