ಹಾವೇರಿ: ಶುಶ್ರೂಷಕಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಯಾಜ್ ಇಮಾಮ್ಸಾಬ್ ಬೆಣ್ಣೆಗೇರಿಗೆ ಪೊಲೀಸ್ ಠಾಣೆಯ ಸೆಲ್ನಲ್ಲಿ ಅನಧಿಕೃತವಾಗಿ ಮೊಬೈಲ್ ಫೋನ್ ಒದಗಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಆರೋಪದ ಹಿನ್ನೆಲೆಯಲ್ಲಿ ಹಲಗೇರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೆಬಲ್ ಎಂ.ಎಚ್. ಬಣಕಾರ ಅವರನ್ನು ಹಾವೇರಿ ನಗರ ಠಾಣೆಗೆ ವರ್ಗಾಯಿಸಲಾಗಿದೆ.
ಪೊಲೀಸ್ ಸೆಲ್ನಲ್ಲಿ ಅನುಮಾನಾಸ್ಪದ ಚಟುವಟಿಕೆ
ಕಾನ್ಸ್ಟೆಬಲ್ ಬಣಕಾರ ಅವರು ಕೇವಲ ಮೊಬೈಲ್ ಫೋನ್ ನೀಡುವುದಷ್ಟೇ ಅಲ್ಲ, ಮತ್ತೊಬ್ಬ ಆರೋಪಿ ಗೆ ಗುಟ್ಕಾ ಸಹ ಒದಗಿಸಿದ ಮಾಹಿತಿ ಲಭ್ಯವಾಗಿದೆ. ಈ ವಿಚಾರವನ್ನು ಗಮನಿಸಿದ ಸ್ವಾತಿ ಬ್ಯಾಡಗಿಯ ಅವರ ಚಿಕ್ಕಪ್ಪ, ಘಟನೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ದೂರು ಸಲ್ಲಿಸಿದರು. ಈ ದೂರಿನ ಆಧಾರದ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಪೊಲೀಸ್ ಇಲಾಖೆ ನಿರ್ದಿಷ್ಟ ಮಾರ್ಗಸೂಚಿ ಉಲ್ಲಂಘನೆ
ಬಂಧಿತ ಆರೋಪಿ ತನಿಖೆ ಸಮಯದಲ್ಲಿ ಕೇವಲ ಕುಟುಂಬದ ಸದಸ್ಯರು ಮತ್ತು ವಕೀಲರನ್ನು ಮಾತ್ರ ಸಂಪರ್ಕಿಸಬಹುದು. ಇದೂ ಕೂಡ ತನಿಖಾಧಿಕಾರಿಯ ಅನುಮತಿ ಪಡೆದುಕೊಂಡು ಮಾತ್ರ ಸಾಧ್ಯ. ಆದರೆ ಈ ನಿಯಮ ಪಾಲಿಸದೆ, ಅನುಮತಿ ಇಲ್ಲದೇ ನಯಾಜ್ ಗೆ ಕಾನ್ಸ್ಟೆಬಲ್ ಬಣಕಾರ ಅವರು ಮೊಬೈಲ್ ಒದಗಿಸಿದ್ದ ಬಗ್ಗೆ ಪಕ್ಕಾ ಮಾಹಿತಿ ದೊರಕಿದೆ.
ಈ ಕುರಿತು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಲ್.ವೈ. ಶಿರಕೋಳ ಪ್ರತಿಕ್ರಿಯಿಸಿ, “ಪೊಲೀಸ್ ಇಲಾಖೆಯ ಶಿಸ್ತು ಮತ್ತು ನಿಯಮಗಳನ್ನು ಉಲ್ಲಂಘಿಸಿದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಣಕಾರ ಅವರನ್ನು ಸ್ಥಳಾಂತರ ಮಾಡಲಾಗಿದೆ. ತಪ್ಪಿತಸ್ಥರಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಸ್ಪಷ್ಟಪಡಿಸಿದರು.
ಈ ಪ್ರಕರಣದ ಬೆಳವಣಿಗೆಯು ಪೊಲೀಸ್ ಇಲಾಖೆ ಒಳಗಿನ ನಿಯಮಾವಳಿಗಳನ್ನು ಗಂಭೀರವಾಗಿ ಪರಿಗಣಿಸಲು ವಶದಲ್ಲಿದೆ. ಜನಸಾಮಾನ್ಯರ ವಿಶ್ವಾಸ ಉಳಿಸಿಕೊಳ್ಳಲು ಪೊಲೀಸರು ಶಿಸ್ತುಬದ್ಧವಾಗಿ ಕೆಲಸ ಮಾಡುವ ಅಗತ್ಯತೆಯೂ ಈ ಮೂಲಕ ಒತ್ತಿ ಹೇಳಲಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…