Latest

ಆರೋಪಿ ನಯಾಜ್‌ಗೆ ಠಾಣೆಯ ಸೆಲ್‌ನಲ್ಲಿ ಮೊಬೈಲ್: ಪೊಲೀಸ್ ಕಾನ್‌ಸ್ಟೆಬಲ್‌ ವರ್ಗಾವಣೆ

ಹಾವೇರಿ: ಶುಶ್ರೂಷಕಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಯಾಜ್ ಇಮಾಮ್‌ಸಾಬ್ ಬೆಣ್ಣೆಗೇರಿಗೆ ಪೊಲೀಸ್ ಠಾಣೆಯ ಸೆಲ್‌ನಲ್ಲಿ ಅನಧಿಕೃತವಾಗಿ ಮೊಬೈಲ್ ಫೋನ್ ಒದಗಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಆರೋಪದ ಹಿನ್ನೆಲೆಯಲ್ಲಿ ಹಲಗೇರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೆಬಲ್ ಎಂ.ಎಚ್. ಬಣಕಾರ ಅವರನ್ನು ಹಾವೇರಿ ನಗರ ಠಾಣೆಗೆ ವರ್ಗಾಯಿಸಲಾಗಿದೆ.

ಪೊಲೀಸ್ ಸೆಲ್‌ನಲ್ಲಿ ಅನುಮಾನಾಸ್ಪದ ಚಟುವಟಿಕೆ

ಕಾನ್‌ಸ್ಟೆಬಲ್ ಬಣಕಾರ ಅವರು ಕೇವಲ ಮೊಬೈಲ್ ಫೋನ್ ನೀಡುವುದಷ್ಟೇ ಅಲ್ಲ, ಮತ್ತೊಬ್ಬ ಆರೋಪಿ ಗೆ ಗುಟ್ಕಾ ಸಹ ಒದಗಿಸಿದ ಮಾಹಿತಿ ಲಭ್ಯವಾಗಿದೆ. ಈ ವಿಚಾರವನ್ನು ಗಮನಿಸಿದ ಸ್ವಾತಿ ಬ್ಯಾಡಗಿಯ ಅವರ ಚಿಕ್ಕಪ್ಪ, ಘಟನೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ದೂರು ಸಲ್ಲಿಸಿದರು. ಈ ದೂರಿನ ಆಧಾರದ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಪೊಲೀಸ್ ಇಲಾಖೆ ನಿರ್ದಿಷ್ಟ ಮಾರ್ಗಸೂಚಿ ಉಲ್ಲಂಘನೆ

ಬಂಧಿತ ಆರೋಪಿ ತನಿಖೆ ಸಮಯದಲ್ಲಿ ಕೇವಲ ಕುಟುಂಬದ ಸದಸ್ಯರು ಮತ್ತು ವಕೀಲರನ್ನು ಮಾತ್ರ ಸಂಪರ್ಕಿಸಬಹುದು. ಇದೂ ಕೂಡ ತನಿಖಾಧಿಕಾರಿಯ ಅನುಮತಿ ಪಡೆದುಕೊಂಡು ಮಾತ್ರ ಸಾಧ್ಯ. ಆದರೆ ಈ ನಿಯಮ ಪಾಲಿಸದೆ, ಅನುಮತಿ ಇಲ್ಲದೇ ನಯಾಜ್‌ ಗೆ ಕಾನ್‌ಸ್ಟೆಬಲ್ ಬಣಕಾರ ಅವರು ಮೊಬೈಲ್ ಒದಗಿಸಿದ್ದ ಬಗ್ಗೆ ಪಕ್ಕಾ ಮಾಹಿತಿ ದೊರಕಿದೆ.

ಈ ಕುರಿತು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಲ್.ವೈ. ಶಿರಕೋಳ ಪ್ರತಿಕ್ರಿಯಿಸಿ, “ಪೊಲೀಸ್ ಇಲಾಖೆಯ ಶಿಸ್ತು ಮತ್ತು ನಿಯಮಗಳನ್ನು ಉಲ್ಲಂಘಿಸಿದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಣಕಾರ ಅವರನ್ನು ಸ್ಥಳಾಂತರ ಮಾಡಲಾಗಿದೆ. ತಪ್ಪಿತಸ್ಥರಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಈ ಪ್ರಕರಣದ ಬೆಳವಣಿಗೆಯು ಪೊಲೀಸ್ ಇಲಾಖೆ ಒಳಗಿನ ನಿಯಮಾವಳಿಗಳನ್ನು ಗಂಭೀರವಾಗಿ ಪರಿಗಣಿಸಲು ವಶದಲ್ಲಿದೆ. ಜನಸಾಮಾನ್ಯರ ವಿಶ್ವಾಸ ಉಳಿಸಿಕೊಳ್ಳಲು ಪೊಲೀಸರು ಶಿಸ್ತುಬದ್ಧವಾಗಿ ಕೆಲಸ ಮಾಡುವ ಅಗತ್ಯತೆಯೂ ಈ ಮೂಲಕ ಒತ್ತಿ ಹೇಳಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

6 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

6 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

6 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

6 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago