Categories: Latest

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಆರೋಪ; ಮಾನ್ವಿಯ 3 ಸೈಬರ್ ಕೇಂದ್ರ ಸೀಜ್!

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮಹಿಳೆಯರಿಂದ 200 ರಿಂದ 250 ರೂಪಾಯಿವರೆಗೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆಯ ಮಾನ್ವಿಯ ಮೂರು ಸೈಬರ್ ಕೇಂದ್ರಗಳನ್ನು ಸೀಜ್​ ಮಾಡಲಾಗಿದೆ. ಗ್ರಾಮ ಒನ್ ಕೇಂದ್ರಗಳಲ್ಲಿ ಪಾಸ್‌ವಾರ್ಡ್ (ರಹಸ್ಯ ಸಂಖ್ಯೆ) ದುರ್ಬಳಕೆ ಮಾಡಿಕೊಂಡು ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಡಲು ಮಹಿಳೆಯರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮೂರು ಕಂಪ್ಯೂಟರ್ ಸೆಂಟರ್ ಮೇಲೆ‌ ದಾಳಿ ಮಾಡಿದ ಅಧಿಕಾರಿಗಳು, ಅವುಗಳನ್ನು ಸೀಜ್ ಮಾಡಿರುವ ಘಟನೆ ಜಿಲ್ಲೆಯ ಮಾನವಿಯಲ್ಲಿ ನಡೆದಿದೆ.
ಪ್ರತಿ ತಿಂಗಳು 2000 ಸಾವಿರ ರೂಪಾಯಿ ಹಣವನ್ನು ಕುಟುಂಬದ ಮನೆ ಯಜಮಾನಿಯ ಖಾತೆಗೆ ಜಮಾ ಮಾಡುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್​ ಸರ್ಕಾರ ಈ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯ ಹಣ ಪಡೆಯಲು ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಮಹಿಳೆಯರು ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಸರ್ಕಾರ ಇತ್ತೀಚೆಗಷ್ಟೇ ಹೇಳಿತ್ತು. ಆದರೆ, ಇದರ ಹೆಸರಿನಲ್ಲಿ ಮಾನವಿಯ ಗ್ರಾಮ ಒನ್‌ ಕೇಂದ್ರದ ಪಾಸ್‌ವರ್ಡ್ ಅನ್ನು ಖಾಸಗಿ ಅಂಗಡಿಯಲ್ಲಿ ದುರ್ಬಳಕೆ ಮಾಡಿಕೊ೦ಡು ಒಂದು ಅರ್ಜಿಗೆ 200 ರೂ. ವಸೂಲಿ ಮಾಡುತ್ತಿದ್ದರು ಎಂಬ ದೂರು ಕೇಳಿ ಬಂದಿತ್ತು. ಈ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಮಾನವಿಯ ತಹಶೀಲ್ದಾರ್ ಎಲ್ ಡಿ ಚಂದ್ರಕಾಂತ ಅವರು ತಮ್ಮ ಸಿಬ್ಬಂದಿಯೊಂದಿಗೆ ಎಕ್ಸೆಲ್ ಕಂಪ್ಯೂಟರ್, ಲಕ್ಷ್ಮೀ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್ ಸೆಂಟರ್ ಮೇಲೆ ದಾಳಿ ನಡೆಸಿ ಸೀಜ್ ಮಾಡಿದ್ದಾರೆ.
ದಾಳಿ ಬಳಿಕ ಮಾಹಿತಿ ನೀಡಿದ ತಹಶೀಲ್ದಾರ್ ಚಂದ್ರಕಾಂತ್, ಸರ್ಕಾರದ ಗ್ರಾಮ್ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಮಹಿಳೆಯರಿಗೆ ಉಚಿತ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ, ಸದಾಪೂರು ಗ್ರಾಮದಲ್ಲಿ ಗ್ರಾಮ ಒನ್‌ ಕೇಂದ್ರ ಇದ್ದರೂ ಸಹ ಅದನ್ನು ಬಂದ್‌ ಮಾಡಿ ಮಾನವಿ ಲಕ್ಷ್ಮಿ ಕಂಪ್ಯೂಟರ್ ಕೇಂದ್ರದಲ್ಲಿ ಸರ್ಕಾರ ನೀಡಿದ ಪಾಸ್‌ವರ್ಡ್ ಅನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೇ ಫಲಾನುಭವಿ ಮಹಿಳೆಯಿಂದ ನೋಂದಣಿ ಮಾಡಿಕೊಡಲು ಹೆಚ್ಚುವರಿ ಹಣ ಪಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಎಕ್ಸೆಲ್ ಕಂಪ್ಯೂಟರ್, ಲಕ್ಷ್ಮೀ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್ ಸೆಂಟರ್​ನಲ್ಲಿ ಒಂದು ಅರ್ಜಿಗೆ 200 ರಿಂದ 250 ರೂಪಾಯಿವರೆಗೆ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮೂರು ಕಂಪ್ಯೂಟರ್ ಸೆಂಟರ್ ಅಂಗಡಿ ಮಾಲೀಕರ ಮೇಲೆ ಪ್ರಕರಣ ದಾಖಲಿಸುವುದಾಗಿ ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಈ ಬಗ್ಗೆ ಯಾರಾದರು ಅಸಡ್ಡೆ ತೋರಿದರೆ ಅಥವಾ ಜನರಿಂದ ದುಡ್ಡು ಪಡೆದರೆ ಅಂಥವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

23 hours ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

23 hours ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

23 hours ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

23 hours ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago