ಭಟ್ಕಳ:- ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಸೊಸೈಟಿಗೆ ನುಗ್ಗಿ 1.70 ಲಕ್ಷ ರೂ ದೋಚಿದ್ದ ಮಹಮದ್ ರಾಯಿಕ್ ಎಂಬಾತನನ್ನು ಬಂಧಿಸಿದ್ದಾರೆ.
2024ರ ಜೂನ್ 14ರಂದು ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಎಂದಿನಂತೆ ನಡೆದಿತ್ತು. ಸಂಜೆ ಸಿಬ್ಬಂದಿ ಬಾಗಿಲಿಗೆ ಬೀಗ ಹಾಕಿ ಹೋಗಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಸೊಸೈಟಿಯಲ್ಲಿ ಕಳ್ಳತನ ನಡೆದಿರುವುದು ಅರಿವಿಗೆ ಬಂದಿತ್ತು. ಸೊಸೈಟಿಯಲ್ಲಿದ್ದ 170968ರೂ ಕಣ್ಮರೆಯಾಗಿತ್ತು.
ಈ ಬಗ್ಗೆ ಸೊಸೈಟಿಯವರು ಪೊಲೀಸ್ ದೂರು ನೀಡಿದ್ದರು. ಆದರೆ, ಕಳ್ಳ ಮಾತ್ರ ಈವರೆಗೂ ಸಿಕ್ಕಿರಲಿಲ್ಲ. ಅನೇಕ ತಿಂಗಳಿನಿಂದ ಈ ಪ್ರಕರಣ ಬಾಕಿಯಿರುವ ಬಗ್ಗೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ವಿಚಾರಿಸಿ ಕಳ್ಳನ ಬಂಧನಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಪೊಲೀಸ್ ಉಪಾಧ್ಯಕ್ಷ ಮಹೇಶ ಎಂ ಕೆ ಅವರು ನೇತೃತ್ವದಲ್ಲಿ ಭಟ್ಕಳದ ಸಿಪಿಐ ಸಂತೋಷ ಕಾಯ್ಕಿಣಿ, ಪಿಎಸ್ಐ ನವೀನ ನಾಯ್ಕ, ಶಾಂತಿನಾಥ ಪಾಸಾನೆ ನೇತ್ರತ್ವದಲ್ಲಿ ಕಳ್ಳತನ ಪ್ರಕರಣ ಬೇದಿಸಲು ತಂಡ ರಚಿಸಿದರು. ಪೊಲೀಸ್ ಸಿಬ್ಬಂದಿ ನಾರಾಯಣ ನಾಯ್ಕ ದಿನೇಶ ನಾಯಕ, ಅರುಣ ಪಿಂಟೋ ಕಳ್ಳತನ ನಡೆದ ಸ್ಥಳ ಪರಿಶೀಲನೆ ಮಾಡಿದರು. ದೀಪಕ ನಾಯ್ಕ, ಮದರಸಾಬ್ ಚಿಕ್ಕೇರಿ, ಕಿರಣಕುಮಾರ ನಾಯ್ಕ ಸೇರಿ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ಮಾಡಿ. 2025ರ ಮಾರ್ಚ 18ರಂದು ನಾಗರಾಜ ಮೊಗೇರ್, ಕೃಷ್ಣ ಎನ್ ಜಿ, ಲೋಕೇಶ ಕತ್ತಿ ಕಾರ್ಯಾಚರಣೆ ನಡೆಸಿ ಮಹಮದ್ ರಾಯಿಕ್ ಎಂಬಾತನನ್ನು ವಶಕ್ಕೆ ಪಡೆದರು.
ಭಟ್ಕಳ ಕಿದ್ವಾಯಿ ಮುಖ್ಯರಸ್ತೆಯ 2ನೇ ತಿರುವಿನಲ್ಲಿ ವಾಸವಾಗಿದ್ದ 24 ವರ್ಷದ ಮಹಮದ್ ರಾಯಿಕ್ ಆ ದಿನ ಸೊಸೈಟಿಯ ಲಾಕರ್ಸಹಿತ ಹಣ ಕದ್ದು ಪರಾರಿಯಾಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದು ಮಹಮದ್ ರಾಯಿಕ್ ಈ ಹಿಂದೆ 16ಕ್ಕೂ ಅಧಿಕ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಸಹ ಪೊಲೀಸ್ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ ಮಹಮದ್ ರಾಯಿಕ್ ಬಳಿಯಿದ್ದ 40 ಸಾವಿರ ರೂ ಹಣವನ್ನು ಪೋಲಿಸರು ವಶಕ್ಕೆ ಪಡೆದು ಮಹಮದ್ ರಾಯಿಕ್ ಪ್ರಕರಣದ ಬಗ್ಗೆ ನ್ಯಾಯಾಧೀಶರಿಗೆ ಮನವರಿಕೆ ಮಾಡಿ, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…