Crime

ಕೋ- ಆಪರೇಟಿವ್ ಸೊಸೈಟಿ ಕಳ್ಳತನದ ಆರೋಪಿ ಬಂಧನ

ಭಟ್ಕಳ:- ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಸೊಸೈಟಿಗೆ ನುಗ್ಗಿ 1.70 ಲಕ್ಷ ರೂ ದೋಚಿದ್ದ ಮಹಮದ್ ರಾಯಿಕ್ ಎಂಬಾತನನ್ನು ಬಂಧಿಸಿದ್ದಾರೆ.

2024ರ ಜೂನ್ 14ರಂದು ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಎಂದಿನಂತೆ ನಡೆದಿತ್ತು. ಸಂಜೆ ಸಿಬ್ಬಂದಿ ಬಾಗಿಲಿಗೆ ಬೀಗ ಹಾಕಿ ಹೋಗಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಸೊಸೈಟಿಯಲ್ಲಿ ಕಳ್ಳತನ ನಡೆದಿರುವುದು ಅರಿವಿಗೆ ಬಂದಿತ್ತು. ಸೊಸೈಟಿಯಲ್ಲಿದ್ದ 170968ರೂ ಕಣ್ಮರೆಯಾಗಿತ್ತು.

ಈ ಬಗ್ಗೆ ಸೊಸೈಟಿಯವರು ಪೊಲೀಸ್ ದೂರು ನೀಡಿದ್ದರು. ಆದರೆ, ಕಳ್ಳ ಮಾತ್ರ ಈವರೆಗೂ ಸಿಕ್ಕಿರಲಿಲ್ಲ. ಅನೇಕ ತಿಂಗಳಿನಿಂದ ಈ ಪ್ರಕರಣ ಬಾಕಿಯಿರುವ ಬಗ್ಗೆ ಪೊಲೀಸ್‌ ಅಧೀಕ್ಷಕ ಎಂ ನಾರಾಯಣ ವಿಚಾರಿಸಿ ಕಳ್ಳನ ಬಂಧನಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಪೊಲೀಸ್‌ ಉಪಾಧ್ಯಕ್ಷ ಮಹೇಶ ಎಂ ಕೆ ಅವರು ನೇತೃತ್ವದಲ್ಲಿ ಭಟ್ಕಳದ ಸಿಪಿಐ ಸಂತೋಷ ಕಾಯ್ಕಿಣಿ, ಪಿಎಸ್‌ಐ ನವೀನ ನಾಯ್ಕ, ಶಾಂತಿನಾಥ ಪಾಸಾನೆ ನೇತ್ರತ್ವದಲ್ಲಿ ಕಳ್ಳತನ ಪ್ರಕರಣ ಬೇದಿಸಲು ತಂಡ ರಚಿಸಿದರು. ಪೊಲೀಸ್ ಸಿಬ್ಬಂದಿ ನಾರಾಯಣ ನಾಯ್ಕ ದಿನೇಶ ನಾಯಕ, ಅರುಣ ಪಿಂಟೋ ಕಳ್ಳತನ ನಡೆದ ಸ್ಥಳ ಪರಿಶೀಲನೆ ಮಾಡಿದರು. ದೀಪಕ ನಾಯ್ಕ, ಮದರಸಾಬ್ ಚಿಕ್ಕೇರಿ, ಕಿರಣಕುಮಾರ ನಾಯ್ಕ ಸೇರಿ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ಮಾಡಿ. 2025ರ ಮಾರ್ಚ 18ರಂದು ನಾಗರಾಜ ಮೊಗೇರ್, ಕೃಷ್ಣ ಎನ್ ಜಿ, ಲೋಕೇಶ ಕತ್ತಿ ಕಾರ್ಯಾಚರಣೆ ನಡೆಸಿ ಮಹಮದ್ ರಾಯಿಕ್ ಎಂಬಾತನನ್ನು ವಶಕ್ಕೆ ಪಡೆದರು.

ಭಟ್ಕಳ ಕಿದ್ವಾಯಿ ಮುಖ್ಯರಸ್ತೆಯ 2ನೇ ತಿರುವಿನಲ್ಲಿ ವಾಸವಾಗಿದ್ದ 24 ವರ್ಷದ ಮಹಮದ್ ರಾಯಿಕ್ ಆ ದಿನ ಸೊಸೈಟಿಯ ಲಾಕರ್‌ಸಹಿತ ಹಣ ಕದ್ದು ಪರಾರಿಯಾಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದು ಮಹಮದ್ ರಾಯಿಕ್ ಈ ಹಿಂದೆ 16ಕ್ಕೂ ಅಧಿಕ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಸಹ ಪೊಲೀಸ್‌ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ ಮಹಮದ್ ರಾಯಿಕ್ ಬಳಿಯಿದ್ದ 40 ಸಾವಿರ ರೂ ಹಣವನ್ನು ಪೋಲಿಸರು ವಶಕ್ಕೆ ಪಡೆದು ಮಹಮದ್ ರಾಯಿಕ್ ಪ್ರಕರಣದ ಬಗ್ಗೆ ನ್ಯಾಯಾಧೀಶರಿಗೆ ಮನವರಿಕೆ ಮಾಡಿ, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

2 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

15 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

16 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago