Crime

ಕೋ- ಆಪರೇಟಿವ್ ಸೊಸೈಟಿ ಕಳ್ಳತನದ ಆರೋಪಿ ಬಂಧನ

ಭಟ್ಕಳ:- ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಸೊಸೈಟಿಗೆ ನುಗ್ಗಿ 1.70 ಲಕ್ಷ ರೂ ದೋಚಿದ್ದ ಮಹಮದ್ ರಾಯಿಕ್ ಎಂಬಾತನನ್ನು ಬಂಧಿಸಿದ್ದಾರೆ.

2024ರ ಜೂನ್ 14ರಂದು ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಎಂದಿನಂತೆ ನಡೆದಿತ್ತು. ಸಂಜೆ ಸಿಬ್ಬಂದಿ ಬಾಗಿಲಿಗೆ ಬೀಗ ಹಾಕಿ ಹೋಗಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಸೊಸೈಟಿಯಲ್ಲಿ ಕಳ್ಳತನ ನಡೆದಿರುವುದು ಅರಿವಿಗೆ ಬಂದಿತ್ತು. ಸೊಸೈಟಿಯಲ್ಲಿದ್ದ 170968ರೂ ಕಣ್ಮರೆಯಾಗಿತ್ತು.

ಈ ಬಗ್ಗೆ ಸೊಸೈಟಿಯವರು ಪೊಲೀಸ್ ದೂರು ನೀಡಿದ್ದರು. ಆದರೆ, ಕಳ್ಳ ಮಾತ್ರ ಈವರೆಗೂ ಸಿಕ್ಕಿರಲಿಲ್ಲ. ಅನೇಕ ತಿಂಗಳಿನಿಂದ ಈ ಪ್ರಕರಣ ಬಾಕಿಯಿರುವ ಬಗ್ಗೆ ಪೊಲೀಸ್‌ ಅಧೀಕ್ಷಕ ಎಂ ನಾರಾಯಣ ವಿಚಾರಿಸಿ ಕಳ್ಳನ ಬಂಧನಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಪೊಲೀಸ್‌ ಉಪಾಧ್ಯಕ್ಷ ಮಹೇಶ ಎಂ ಕೆ ಅವರು ನೇತೃತ್ವದಲ್ಲಿ ಭಟ್ಕಳದ ಸಿಪಿಐ ಸಂತೋಷ ಕಾಯ್ಕಿಣಿ, ಪಿಎಸ್‌ಐ ನವೀನ ನಾಯ್ಕ, ಶಾಂತಿನಾಥ ಪಾಸಾನೆ ನೇತ್ರತ್ವದಲ್ಲಿ ಕಳ್ಳತನ ಪ್ರಕರಣ ಬೇದಿಸಲು ತಂಡ ರಚಿಸಿದರು. ಪೊಲೀಸ್ ಸಿಬ್ಬಂದಿ ನಾರಾಯಣ ನಾಯ್ಕ ದಿನೇಶ ನಾಯಕ, ಅರುಣ ಪಿಂಟೋ ಕಳ್ಳತನ ನಡೆದ ಸ್ಥಳ ಪರಿಶೀಲನೆ ಮಾಡಿದರು. ದೀಪಕ ನಾಯ್ಕ, ಮದರಸಾಬ್ ಚಿಕ್ಕೇರಿ, ಕಿರಣಕುಮಾರ ನಾಯ್ಕ ಸೇರಿ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ಮಾಡಿ. 2025ರ ಮಾರ್ಚ 18ರಂದು ನಾಗರಾಜ ಮೊಗೇರ್, ಕೃಷ್ಣ ಎನ್ ಜಿ, ಲೋಕೇಶ ಕತ್ತಿ ಕಾರ್ಯಾಚರಣೆ ನಡೆಸಿ ಮಹಮದ್ ರಾಯಿಕ್ ಎಂಬಾತನನ್ನು ವಶಕ್ಕೆ ಪಡೆದರು.

ಭಟ್ಕಳ ಕಿದ್ವಾಯಿ ಮುಖ್ಯರಸ್ತೆಯ 2ನೇ ತಿರುವಿನಲ್ಲಿ ವಾಸವಾಗಿದ್ದ 24 ವರ್ಷದ ಮಹಮದ್ ರಾಯಿಕ್ ಆ ದಿನ ಸೊಸೈಟಿಯ ಲಾಕರ್‌ಸಹಿತ ಹಣ ಕದ್ದು ಪರಾರಿಯಾಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದು ಮಹಮದ್ ರಾಯಿಕ್ ಈ ಹಿಂದೆ 16ಕ್ಕೂ ಅಧಿಕ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಸಹ ಪೊಲೀಸ್‌ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ ಮಹಮದ್ ರಾಯಿಕ್ ಬಳಿಯಿದ್ದ 40 ಸಾವಿರ ರೂ ಹಣವನ್ನು ಪೋಲಿಸರು ವಶಕ್ಕೆ ಪಡೆದು ಮಹಮದ್ ರಾಯಿಕ್ ಪ್ರಕರಣದ ಬಗ್ಗೆ ನ್ಯಾಯಾಧೀಶರಿಗೆ ಮನವರಿಕೆ ಮಾಡಿ, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

13 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

18 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

18 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

18 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

18 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

23 hours ago