ಕೊಟ್ಟೂರು: ತಾಲೂಕಿನ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಿರಂತರ ಬೈಕ್ ಕಳ್ಳತನ ದೂರುಗಳು ದಾಖಲಾಗುತ್ತಿರುವುದನ್ನು ಗಮನಿಸಿದ ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ ಇವರ ಮಾರ್ಗದರ್ಶನದಲ್ಲಿ ಸಿಪಿಐ. ಟಿ. ವೆಂಕಟಸ್ವಾಮಿ ಹಾಗೂ ಪಿ ಎಸ್ ಐ ಗೀತಾಂಜಲಿ ಶಿಂಧೆ ರವರ ನೇತೃತ್ವದ ಬಸವರಾಜ ಹೆಚ್. ವೀರೇಶ್, ಶಶಿಧರ, ನಾಗಪ್ಪ ಯು.ಹೆಚ್.ಸಿ. ಕೊಟ್ರುಗೌಡ, ರೇವಣಸಿದ್ದಪ್ಪ ಪೊಲೀಸ್ ರ ತಂಡ ಬೈಕ್ ಕಳ್ಳರ ಪತ್ತೆಗಾಗಿ ರಚಿಸಲಾಗಿತ್ತು.
ಮಲ್ಲೇಶಪ್ಪ ಮಲ್ಲಾಪುರ ಡಿ ವೈ ಎಸ್ಪಿ ಕೂಡ್ಲಿಗಿ ಇವರ ಸಲಹೆಯಂತೆ ಕೊಟ್ಟೂರು ಪೊಲೀಸ್ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಹ್ಯಾಳ್ಯಾ ರಸ್ತೆಯ ಪೆಟ್ರೋಲ್ ಬಂಕ್ ನಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ದೂಪದಹಳ್ಳಿ ಗ್ರಾಮದ ಕೆ ಸಂತೋಷ (31) ಎಂಬ ವ್ಯಕ್ತಿಯನ್ನು ಬಂಧಿಸಿ ಅವನ ಬಳಿ ಇದ್ದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ 7 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಶ ಪಡಿಸಿಕೊಂಡ ಬೈಕ್ ಗಳ ಅಂದಾಜು ಮೊತ್ತ 2 ಲಕ್ಷದ 50 ಸಾವಿರ ಎಂದು ತಿಳಿದುಬಂದಿದೆ
ತಂಡದ ಕಾರ್ಯಚರಣೆ ಯಶಸ್ವಿಯನ್ನು ಗಮನಿಸಿದ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಹರಿಬಾಬು ಕೊಟ್ಟೂರು ಪೊಲೀಸ್ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರದಿ:- ಮಣಿಕಂಠ. ಬಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…