ಕೊಟ್ಟೂರು: ತಾಲೂಕಿನ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಿರಂತರ ಬೈಕ್ ಕಳ್ಳತನ ದೂರುಗಳು ದಾಖಲಾಗುತ್ತಿರುವುದನ್ನು ಗಮನಿಸಿದ ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ ಇವರ ಮಾರ್ಗದರ್ಶನದಲ್ಲಿ ಸಿಪಿಐ. ಟಿ. ವೆಂಕಟಸ್ವಾಮಿ ಹಾಗೂ ಪಿ ಎಸ್ ಐ ಗೀತಾಂಜಲಿ ಶಿಂಧೆ ರವರ ನೇತೃತ್ವದ ಬಸವರಾಜ ಹೆಚ್. ವೀರೇಶ್, ಶಶಿಧರ, ನಾಗಪ್ಪ ಯು.ಹೆಚ್.ಸಿ. ಕೊಟ್ರುಗೌಡ, ರೇವಣಸಿದ್ದಪ್ಪ ಪೊಲೀಸ್ ರ ತಂಡ ಬೈಕ್ ಕಳ್ಳರ ಪತ್ತೆಗಾಗಿ ರಚಿಸಲಾಗಿತ್ತು.
ಮಲ್ಲೇಶಪ್ಪ ಮಲ್ಲಾಪುರ ಡಿ ವೈ ಎಸ್ಪಿ ಕೂಡ್ಲಿಗಿ ಇವರ ಸಲಹೆಯಂತೆ ಕೊಟ್ಟೂರು ಪೊಲೀಸ್ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಹ್ಯಾಳ್ಯಾ ರಸ್ತೆಯ ಪೆಟ್ರೋಲ್ ಬಂಕ್ ನಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ದೂಪದಹಳ್ಳಿ ಗ್ರಾಮದ ಕೆ ಸಂತೋಷ (31) ಎಂಬ ವ್ಯಕ್ತಿಯನ್ನು ಬಂಧಿಸಿ ಅವನ ಬಳಿ ಇದ್ದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ 7 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಶ ಪಡಿಸಿಕೊಂಡ ಬೈಕ್ ಗಳ ಅಂದಾಜು ಮೊತ್ತ 2 ಲಕ್ಷದ 50 ಸಾವಿರ ಎಂದು ತಿಳಿದುಬಂದಿದೆ
ತಂಡದ ಕಾರ್ಯಚರಣೆ ಯಶಸ್ವಿಯನ್ನು ಗಮನಿಸಿದ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಹರಿಬಾಬು ಕೊಟ್ಟೂರು ಪೊಲೀಸ್ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರದಿ:- ಮಣಿಕಂಠ. ಬಿ
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…