Latest

ಅಂಬೇಡ್ಕರ್ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾದ ನಟ ಪ್ರಥಮ್: ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಒತ್ತಾಯ

ಬೆಂಗಳೂರು, ಆಗಸ್ಟ್ 1: ಬಿಗ್ ಬಾಸ್ ವಿಜೇತ ಮತ್ತು ‘ಒಳ್ಳೆ ಹುಡುಗ’ ಖ್ಯಾತಿಯ ನಟ ಪ್ರಥಮ್ ಇದೀಗ ತೀವ್ರ ವಿವಾದದ ಕಳ್ಳಕತ್ತಲೆಯಲ್ಲಿ ಸಿಲುಕಿದ್ದಾರೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ನೀಡಿದ ವಿವಾದಾಸ್ಪದ ಹೇಳಿಕೆಯಿಂದಾಗಿ, ಅಂಬೇಡ್ಕರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಚಿತ್ರರಂಗದಿಂದ ಈ ನಟನನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.

‘ಅಖಿಲ ಭಾರತ ಅಬ್ದುಲ್ ಕಲಾಂ ಅಸೋಶಿಯೇಶನ್’ ಹಾಗೂ ‘ದಲಿತ ಸಂಘರ್ಷ ಸಮಿತಿ, ಜಯನಗರ’ದ ಸದಸ್ಯರು ಈ ಸಂಬಂಧವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ, ನಟ ಪ್ರಥಮ್ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.

ಅವರು ಸಲ್ಲಿಸಿರುವ ದೂರಿನಲ್ಲಿ, ಪ್ರಥಮ್ ಅವರು ಅಂಬೇಡ್ಕರ್ ಅವರ ಬಗ್ಗೆ “ಸ್ವರ್ಗಕ್ಕೆ ಹೋಗಿ ಅವರನ್ನು ಭೇಟಿಯಾಗಬೇಕು” ಹಾಗೂ “ಅವರು ರಚಿಸಿದ ಸಂವಿಧಾನದಲ್ಲಿ ಕೆಲ ಲೂಪ್‌ಹೋಲ್‌ಗಳಿವೆ” ಎಂಬ ಅರ್ಥ ನೀಡುವ ಮಾತುಗಳನ್ನು ಬಳಸಿದ್ದನ್ನು ಉಲ್ಲೇಖಿಸಲಾಗಿದೆ. ಇದು ಅಂಬೇಡ್ಕರ್ ಅವರ ಭಾವನೆಗೆ ಅವಮಾನವಾಗಿದ್ದು, ಸಂವಿಧಾನ ಶಿಲ್ಪಿಯ ಗೌರವಕ್ಕೆ ಧಕ್ಕೆಯಾಗಿದೆ ಎಂದು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

“ಅಂಬೇಡ್ಕರ್‌ ಅವರನ್ನು ಪ್ರಥಮ್ ಹೇಗೆ ಹೋಲಿಸುತ್ತಾರೆ? ಅವರು ಸಾವಿರ ಪಟ್ಟು ಮೇಲ್ಮಟ್ಟದ ವ್ಯಕ್ತಿತ್ವ ಹೊಂದಿದ್ದಾರೆ. ಪ್ರಥಮ್ ಅವರೇನು ಮಾತನಾಡುತ್ತಿದ್ದಾರೆ ಎಂಬ ಬುದ್ಧಿ ಇಲ್ಲದ ಮಾತು” ಎಂದು ಸಂಘದ ಸದಸ್ಯರು ಕಿಡಿಕಾರಿದ್ದಾರೆ.

ಇಂತಹ ಹೇಳಿಕೆಗಳನ್ನು ನೀಡಿದ ನಟನಿಗೆ ಸಿನಿಮಾ ಹಾಗೂ ಟಿವಿ ಕ್ಷೇತ್ರದಲ್ಲಿ ಯಾವುದೇ ಅವಕಾಶ ನೀಡಬಾರದು, ಅವರನ್ನೆ ತಾತ್ಕಾಲಿಕವಾಗಿ ಬ್ಲಾಕ್ ಮಾಡಬೇಕು ಎಂದು ಆಗ್ರಹಿಸಲಾಗಿದೆ. ಪ್ರಥಮ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆಯನ್ನು ಸಂಘಟನೆಗಳು ವಾಣಿಜ್ಯ ಮಂಡಳಿಗೆ ಸಲ್ಲಿಸಿವೆ.

ಈ ಪ್ರಕರಣದಿಂದಾಗಿ ನಟ ಪ್ರಥಮ್‌ಗೆ ಮತ್ತೊಮ್ಮೆ ವಿವಾದದ ನಂಟು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ದಿಕ್ಕು ಪಡೆಯುತ್ತದೆ ಎಂಬುದು ಕುತೂಹಲ ಮೂಡಿಸಿದೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

8 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

8 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

11 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

12 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

12 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

13 hours ago