Latest

ಅಂಬೇಡ್ಕರ್ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾದ ನಟ ಪ್ರಥಮ್: ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಒತ್ತಾಯ

ಬೆಂಗಳೂರು, ಆಗಸ್ಟ್ 1: ಬಿಗ್ ಬಾಸ್ ವಿಜೇತ ಮತ್ತು ‘ಒಳ್ಳೆ ಹುಡುಗ’ ಖ್ಯಾತಿಯ ನಟ ಪ್ರಥಮ್ ಇದೀಗ ತೀವ್ರ ವಿವಾದದ ಕಳ್ಳಕತ್ತಲೆಯಲ್ಲಿ ಸಿಲುಕಿದ್ದಾರೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ನೀಡಿದ ವಿವಾದಾಸ್ಪದ ಹೇಳಿಕೆಯಿಂದಾಗಿ, ಅಂಬೇಡ್ಕರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಚಿತ್ರರಂಗದಿಂದ ಈ ನಟನನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.

‘ಅಖಿಲ ಭಾರತ ಅಬ್ದುಲ್ ಕಲಾಂ ಅಸೋಶಿಯೇಶನ್’ ಹಾಗೂ ‘ದಲಿತ ಸಂಘರ್ಷ ಸಮಿತಿ, ಜಯನಗರ’ದ ಸದಸ್ಯರು ಈ ಸಂಬಂಧವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ, ನಟ ಪ್ರಥಮ್ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.

ಅವರು ಸಲ್ಲಿಸಿರುವ ದೂರಿನಲ್ಲಿ, ಪ್ರಥಮ್ ಅವರು ಅಂಬೇಡ್ಕರ್ ಅವರ ಬಗ್ಗೆ “ಸ್ವರ್ಗಕ್ಕೆ ಹೋಗಿ ಅವರನ್ನು ಭೇಟಿಯಾಗಬೇಕು” ಹಾಗೂ “ಅವರು ರಚಿಸಿದ ಸಂವಿಧಾನದಲ್ಲಿ ಕೆಲ ಲೂಪ್‌ಹೋಲ್‌ಗಳಿವೆ” ಎಂಬ ಅರ್ಥ ನೀಡುವ ಮಾತುಗಳನ್ನು ಬಳಸಿದ್ದನ್ನು ಉಲ್ಲೇಖಿಸಲಾಗಿದೆ. ಇದು ಅಂಬೇಡ್ಕರ್ ಅವರ ಭಾವನೆಗೆ ಅವಮಾನವಾಗಿದ್ದು, ಸಂವಿಧಾನ ಶಿಲ್ಪಿಯ ಗೌರವಕ್ಕೆ ಧಕ್ಕೆಯಾಗಿದೆ ಎಂದು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

“ಅಂಬೇಡ್ಕರ್‌ ಅವರನ್ನು ಪ್ರಥಮ್ ಹೇಗೆ ಹೋಲಿಸುತ್ತಾರೆ? ಅವರು ಸಾವಿರ ಪಟ್ಟು ಮೇಲ್ಮಟ್ಟದ ವ್ಯಕ್ತಿತ್ವ ಹೊಂದಿದ್ದಾರೆ. ಪ್ರಥಮ್ ಅವರೇನು ಮಾತನಾಡುತ್ತಿದ್ದಾರೆ ಎಂಬ ಬುದ್ಧಿ ಇಲ್ಲದ ಮಾತು” ಎಂದು ಸಂಘದ ಸದಸ್ಯರು ಕಿಡಿಕಾರಿದ್ದಾರೆ.

ಇಂತಹ ಹೇಳಿಕೆಗಳನ್ನು ನೀಡಿದ ನಟನಿಗೆ ಸಿನಿಮಾ ಹಾಗೂ ಟಿವಿ ಕ್ಷೇತ್ರದಲ್ಲಿ ಯಾವುದೇ ಅವಕಾಶ ನೀಡಬಾರದು, ಅವರನ್ನೆ ತಾತ್ಕಾಲಿಕವಾಗಿ ಬ್ಲಾಕ್ ಮಾಡಬೇಕು ಎಂದು ಆಗ್ರಹಿಸಲಾಗಿದೆ. ಪ್ರಥಮ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆಯನ್ನು ಸಂಘಟನೆಗಳು ವಾಣಿಜ್ಯ ಮಂಡಳಿಗೆ ಸಲ್ಲಿಸಿವೆ.

ಈ ಪ್ರಕರಣದಿಂದಾಗಿ ನಟ ಪ್ರಥಮ್‌ಗೆ ಮತ್ತೊಮ್ಮೆ ವಿವಾದದ ನಂಟು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ದಿಕ್ಕು ಪಡೆಯುತ್ತದೆ ಎಂಬುದು ಕುತೂಹಲ ಮೂಡಿಸಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago