Categories: CinemaLatest

34 ವರ್ಷಗಳ ಬಳಿಕ ರವಿಚಂದ್ರನ್ ಬಳಿ ಕಣ್ಣೀರಿಟ್ಟು ಕ್ಷಮೆ ಕೇಳಿದ ನಟಿ ಬಿಂದಿಯಾ; “ರವಿ ಸರ್ ಯಾವುದೇ ತಪ್ಪು ಮಾಡಿರಲಿಲ್ಲ”

ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧ ಮೂರು ದಶಕಗಳ ಹಿಂದೆ ಗಂಭೀರ ಆರೋಪ ಮಾಡಿದ್ದ ನಟಿ ಬಿಂದಿಯಾ, ಇದೀಗ 34 ವರ್ಷಗಳ ಬಳಿಕ ಆ ಘಟನೆ ನೆನೆದು ಭಾವುಕರಾಗಿ ಕ್ಷಮೆಯಾಚಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅಂದಿನ ಆರೋಪದಿಂದ ರವಿಚಂದ್ರನ್ ಅವರಿಗೆ ಅನಗತ್ಯ ತೊಂದರೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ನಟ, ನಿರ್ದೇಶಕ ರಘುರಾಮ್ ಅವರ ಯೂಟ್ಯೂಬ್ ಚಾನೆಲ್‌ನ ‘ನೂರೊಂದು ನೆನಪು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಂದಿಯಾ, ರವಿಚಂದ್ರನ್ ಬಗ್ಗೆ ಮಾತನಾಡುವ ವೇಳೆ ಕಣ್ಣೀರಿಟ್ಟರು. “ರವಿ ಸರ್ ನನಗೆ ದೊಡ್ಡ ಅವಕಾಶ ಕೊಟ್ಟಿದ್ದರು. ಆದರೆ ಒಂದು ಮ್ಯಾಗಜೀನ್‌ನಲ್ಲಿ ಪ್ರಕಟವಾದ ವರದಿಯಿಂದ ದೊಡ್ಡ ವಿವಾದ ಸೃಷ್ಟಿಯಾಯಿತು. ಆ ರೀತಿ ಆಗಬಾರದಿತ್ತು. ಇಂದಿಗೂ ಅವರು ತಮ್ಮ ಸಿನಿಮಾದಲ್ಲಿ ತಾಯಿ ಅಥವಾ ಅಜ್ಜಿ ಪಾತ್ರ ಕೊಟ್ಟರೆ ಯಾವುದೇ ಸಂಭಾವನೆ ಪಡೆಯದೇ ನಟಿಸಲು ಸಿದ್ಧಳಿದ್ದೇನೆ. ದಯವಿಟ್ಟು ಒಂದು ಅವಕಾಶ ಕೊಡಿ ಸರ್” ಎಂದು ಮನವಿ ಮಾಡಿದರು.

ಆ ಘಟನೆ ಬಳಿಕ ರವಿಚಂದ್ರನ್ ಅವರೊಂದಿಗೆ ನೇರವಾಗಿ ಮಾತನಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ ಬಿಂದಿಯಾ, “ನಾವು ಕೋರ್ಟ್‌ನಲ್ಲಿ ಮಾತ್ರ ಭೇಟಿಯಾದೆವು. ಆಗ ನಾನು ತುಂಬಾ ಚಿಕ್ಕವಳಾಗಿದ್ದೆ. ಪ್ರಬುದ್ಧತೆ ಇರಲಿಲ್ಲ. ನಂತರ ರವಿ ಸರ್ ಪ್ರಕರಣದಲ್ಲಿ ಗೆದ್ದರು ಹಾಗೂ ಬಳಿಕ ಅದನ್ನು ಹಿಂತೆಗೆದುಕೊಂಡರು. ಎಲ್ಲವೂ ಅಲ್ಲಿ ಮುಗಿದಿತ್ತು” ಎಂದು ನೆನಪಿಸಿಕೊಂಡರು.

ಅಂದಿನ ಪ್ರಕರಣದ ಕುರಿತು ಸ್ಪಷ್ಟನೆ ನೀಡಿದ ಅವರು, “ನಾನು ಹೇಳಿದ್ದೇ ಒಂದು, ಮ್ಯಾಗಜೀನ್‌ನಲ್ಲಿ ಪ್ರಕಟವಾದದ್ದು ಮತ್ತೊಂದು. ನನ್ನ ಆರೋಪಕ್ಕೆ ಯಾವುದೇ ಆಧಾರ ಇರಲಿಲ್ಲ. ಆ ವರದಿ ರವಿಚಂದ್ರನ್ ಅವರ ಬಗ್ಗೆ ತಪ್ಪು ಅಭಿಪ್ರಾಯ ಮೂಡುವಂತೆ ಮಾಡಿತ್ತು. ಕೋರ್ಟ್‌ನಲ್ಲಿ ಅವರನ್ನು ನೋಡಿದಾಗ ನನಗೆ ತುಂಬಾ ಸಂಕಟವಾಯಿತು. ಅವರು ಯಾವುದೇ ತಪ್ಪು ಮಾಡಿರಲಿಲ್ಲ” ಎಂದು ಒಪ್ಪಿಕೊಂಡರು.

1992ರಲ್ಲಿ ಬಿಡುಗಡೆಯಾದ ‘ಹಳ್ಳಿಮೇಷ್ಟ್ರು’ ಚಿತ್ರದಲ್ಲಿ ಬಿಂದಿಯಾ ಮತ್ತು ರವಿಚಂದ್ರನ್ ಜೊತೆಯಾಗಿ ನಟಿಸಿದ್ದರು. ತಮಿಳಿನ ‘ಮುಂದಾನೈ ಮುಡಿಚು’ ಚಿತ್ರದ ರೀಮೇಕ್ ಆಗಿದ್ದ ಈ ಸಿನಿಮಾ ಭಾರೀ ಯಶಸ್ಸು ಕಂಡಿತ್ತು. ಆದರೆ ಚಿತ್ರದ ಯಶಸ್ಸಿನ ಬಳಿಕ ಮ್ಯಾಗಜೀನ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಿಂದಿಯಾ, ರವಿಚಂದ್ರನ್ ತಮ್ಮ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ಆರೋಪಿಸಿದ್ದರು.

ಈ ಆರೋಪಗಳಿಂದ ಬೇಸರಗೊಂಡ ರವಿಚಂದ್ರನ್, ತಮ್ಮ ವಿರುದ್ಧದ ಆರೋಪವನ್ನು ಸಾಬೀತುಪಡಿಸುವಂತೆ ಸವಾಲು ಹಾಕಿ ಕೇವಲ ಒಂದು ರೂಪಾಯಿಗೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ವಿಚಾರಣೆ ವೇಳೆ ಬಿಂದಿಯಾ, ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿ ಕ್ಷಮೆಯಾಚಿಸಿದ್ದರು. ಬಳಿಕ ಪ್ರಕರಣ ಇತ್ಯರ್ಥಗೊಂಡಿತ್ತು.

ಈಗ ಹಲವು ವರ್ಷಗಳ ನಂತರ ಮತ್ತೆ ಆ ಘಟನೆಯನ್ನು ನೆನೆದ ಬಿಂದಿಯಾ, ರವಿಚಂದ್ರನ್ ಅವರ ವಿರುದ್ಧ ಮಾಡಲಾದ ಆರೋಪದಿಂದ ಅವರಿಗೆ ಆಗಿದ್ದ ನೋವಿನ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ತಮ್ಮ ತಪ್ಪಿಗೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

5 hours ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

5 hours ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

5 hours ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

6 hours ago

ಮಳೆಗಾಲದ ಸೊಬಗಿನಲ್ಲಿ ಮಿಂದೇಳಿದ ಕಪ್ಪತ್ತಗುಡ್ಡ: ಪರಿಸರ ಪ್ರಿಯರನ್ನು ಕೈಬೀಸಿ ಕರೆಯುತ್ತಿರುವ ಉತ್ತರ ಕರ್ನಾಟಕದ ಸಹ್ಯಾದ್ರಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…

9 hours ago

ಹುಬ್ಬಳ್ಳಿಯಲ್ಲಿ ರೈಲ್ವೆ ಹಳಿ ಪಕ್ಕ ಯುವಕನ ಶವ ಪತ್ತೆ; ಪತ್ನಿಯೊಂದಿಗೆ ಕಲಹದ ಬಳಿಕ ವ್ಯಸನಕ್ಕೆ ಬಿದ್ದಿದ್ದ ಆರೋಪ

ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…

1 day ago