Latest

ಡೆಂಗ್ಯೂ ಸೋಂಕಿನಿಂದ ನಟಿ ರಾಧಿಕಾ ಶರತ್ ಕುಮಾರ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ?

ಚೆನ್ನೈ: ಕಲಾವಿದರ ಜಗತ್ತಿನಲ್ಲಿ ಒಂದು ದುಃಖದ ಸುದ್ದಿ – ಹಿರಿಯ ನಟಿ, ನಿರ್ಮಾಪಕಿ ಮತ್ತು ರಾಜಕಾರಣಿ ರಾಧಿಕಾ ಶರತ್ ಕುಮಾರ್ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ವೈದ್ಯಕೀಯ ನಿಗಾ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜುಲೈ 28 ರಂದು ರಾಧಿಕಾ ಅವರು ಉಡುಪು ಜ್ವರದ ಲಕ್ಷಣಗಳಿಂದ ಬಳಲುತ್ತಿದ್ದ ಕಾರಣ ಕುಟುಂಬದವರಿಂದ ತಕ್ಷಣವೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಮೊದಲಿಗೆ ಇದು ಸಾಮಾನ್ಯ ಜ್ವರವೆಂದು ಅನಿಸುತ್ತಿದ್ದರೂ, ವೈದ್ಯಕೀಯ ಪರೀಕ್ಷೆಗಳ ಬಳಿಕ ಅವರಿಗೆ ಡೆಂಗ್ಯೂ ಸೋಂಕು ತಗುಲಿರುವುದು ದೃಢಪಟ್ಟಿದೆ.

ವೈದ್ಯರ ಪ್ರಕಾರ, ರಾಧಿಕಾ ಅವರ ಆರೋಗ್ಯ ಸ್ಥಿತಿ ತೀವ್ರ ಗಮನದಲ್ಲಿಡಲಾಗಿದೆ. ಈಗ ಅವರು ತೀವ್ರ ನಿಗಾ ಘಟಕದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯಕೀಯ ತಂಡದ ಸಲಹೆಯಂತೆ, ಆಗಸ್ಟ್ 5 ರವರೆಗೆ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ಅವರು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, “#GetWellSoonRadhika” ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗುತ್ತಿದೆ. ಹಲವಾರು ಚಿತ್ರರಂಗದ ತಾರೆಯರು, ರಾಜಕೀಯ ನಾಯಕರು ಮತ್ತು ಅಭಿಮಾನಿಗಳು ರಾಧಿಕಾ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶುಭಾಶಯಗಳನ್ನು ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago