ಬೆಂಗಳೂರು: ನಟಿ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿರುವ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಟ ಪ್ರಜ್ವಲ್ ದೇವರಾಜ್ ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ನಡೆದ ‘ಸು ಫ್ರಮ್ ಸೋ’ ಸಿನಿಮಾದ ವಿಶೇಷ ಪ್ರದರ್ಶನಕ್ಕೆ ಹಾಜರಾಗಿದ್ದ ಪ್ರಜ್ವಲ್, ಮಾಧ್ಯಮದೊಂದಿಗೆ ಮಾತನಾಡುತ್ತಾ, “ಯಾರು ಯಾರ ಫ್ಯಾನ್ ಆಗಿದ್ರೂ, ಅವರಿಗೆ ಮಿತಿಮೀರಿ ಅಭಿಮಾನ ತೋರಿಸಬಾರದು. ಜವಾಬ್ದಾರಿ ಸಹ ಅವಶ್ಯಕ. ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಹೆಣ್ಣುಮಕ್ಕಳಿಗೆ ಆಗುವ ಕಿರುಕುಳದ ವಿರುದ್ಧ ಸ್ಪಷ್ಟ ಸಂದೇಶವಿದೆ. ಆ ವಿಷಯವನ್ನು ಮನಗಂಡು, ಇಂದಿನ ಯುವಕರು ಪ್ರಬುದ್ಧವಾಗಿ ವರ್ತಿಸಬೇಕು,” ಎಂದು ಮನವೊಲಿಸಿದರು.
“ಧೈರ್ಯವಿದ್ದರೆ ಮುಂಚೆ ಬಂದು ನೇರವಾಗಿ ಮಾತನಾಡಲಿ. ಎಲ್ಲ ಚಿಕ್ಕ ಹುಡುಗರ ಕೈಯಲ್ಲೂ ಮೊಬೈಲ್ ಇದ್ದೀತು. ಆದರೆ, ಯಾರಿಗೂ ಗೊತ್ತಾಗಲ್ಲ ಅನ್ನೋ ಭಾವನೆಯಿಂದ ಅಶ್ಲೀಲ ಮೆಸೇಜ್ ಕಳಿಸುವುದನ್ನು ನ್ಯಾಯಸಮ್ಮತವಾಗಿ ಕಾನೂನು ಕಪ್ಪೆ ಮೇಲೆ ತರುವ ಅವಶ್ಯಕತೆ ಇದೆ,” ಎಂದು ಅವರು ಎಚ್ಚರಿಸಿದರು.
ಇದರ ಜೊತೆಗೆ ಪ್ರಜ್ವಲ್ ದೇವರಾಜ್ ತಮ್ಮ ಕುಟುಂಬಕ್ಕೂ ಇದೇ ರೀತಿಯ ಕಿರುಕುಳವಾಗಿದೆ ಎಂದು ಬಹಿರಂಗಪಡಿಸಿದರು. ತಮ್ಮ ಪತ್ನಿ ರಾಗಿಣಿ ದೇವರಾಜ್ ಅವರ ಸಹೋದರಿಗೆ ಅಪರಿಚಿತ ವ್ಯಕ್ತಿಯೊಬ್ಬ 280ಕ್ಕೂ ಹೆಚ್ಚು ಬಾರಿ ಫೋನ್ ಮಾಡಿರುವುದು, ಅಶ್ಲೀಲ ಸಂದೇಶ ಹಾಗೂ ಚಿತ್ರಗಳನ್ನು ಕಳುಹಿಸಿರುವುದಾಗಿ ಅವರು ದೂರಿದ್ದಾರೆ.
ಈ ಸಂಬಂಧ ಅಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಕಾನೂನಾತ್ಮಕವಾಗಿ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಜ್ವಲ್ ಸ್ಪಷ್ಟಪಡಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…