Latest

ನಟಿ ರಮ್ಯಾ ಮೇಲೆ ಅಶ್ಲೀಲ ಮೆಸೇಜ್ ಕೇಸ್: ಯುವಜನರಲ್ಲಿ ಜವಾಬ್ದಾರಿ ಅಗತ್ಯವೆಂದು ನಟ ಪ್ರಜ್ವಲ್ ದೇವರಾಜ್ ಕಿಡಿ

ಬೆಂಗಳೂರು: ನಟಿ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿರುವ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಟ ಪ್ರಜ್ವಲ್ ದೇವರಾಜ್ ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ನಡೆದ ‘ಸು ಫ್ರಮ್ ಸೋ’ ಸಿನಿಮಾದ ವಿಶೇಷ ಪ್ರದರ್ಶನಕ್ಕೆ ಹಾಜರಾಗಿದ್ದ ಪ್ರಜ್ವಲ್, ಮಾಧ್ಯಮದೊಂದಿಗೆ ಮಾತನಾಡುತ್ತಾ, “ಯಾರು ಯಾರ ಫ್ಯಾನ್ ಆಗಿದ್ರೂ, ಅವರಿಗೆ ಮಿತಿಮೀರಿ ಅಭಿಮಾನ ತೋರಿಸಬಾರದು. ಜವಾಬ್ದಾರಿ ಸಹ ಅವಶ್ಯಕ. ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಹೆಣ್ಣುಮಕ್ಕಳಿಗೆ ಆಗುವ ಕಿರುಕುಳದ ವಿರುದ್ಧ ಸ್ಪಷ್ಟ ಸಂದೇಶವಿದೆ. ಆ ವಿಷಯವನ್ನು ಮನಗಂಡು, ಇಂದಿನ ಯುವಕರು ಪ್ರಬುದ್ಧವಾಗಿ ವರ್ತಿಸಬೇಕು,” ಎಂದು ಮನವೊಲಿಸಿದರು.

“ಧೈರ್ಯವಿದ್ದರೆ ಮುಂಚೆ ಬಂದು ನೇರವಾಗಿ ಮಾತನಾಡಲಿ. ಎಲ್ಲ ಚಿಕ್ಕ ಹುಡುಗರ ಕೈಯಲ್ಲೂ ಮೊಬೈಲ್ ಇದ್ದೀತು. ಆದರೆ, ಯಾರಿಗೂ ಗೊತ್ತಾಗಲ್ಲ ಅನ್ನೋ ಭಾವನೆಯಿಂದ ಅಶ್ಲೀಲ ಮೆಸೇಜ್ ಕಳಿಸುವುದನ್ನು ನ್ಯಾಯಸಮ್ಮತವಾಗಿ ಕಾನೂನು ಕಪ್ಪೆ ಮೇಲೆ ತರುವ ಅವಶ್ಯಕತೆ ಇದೆ,” ಎಂದು ಅವರು ಎಚ್ಚರಿಸಿದರು.

ಇದರ ಜೊತೆಗೆ ಪ್ರಜ್ವಲ್ ದೇವರಾಜ್ ತಮ್ಮ ಕುಟುಂಬಕ್ಕೂ ಇದೇ ರೀತಿಯ ಕಿರುಕುಳವಾಗಿದೆ ಎಂದು ಬಹಿರಂಗಪಡಿಸಿದರು. ತಮ್ಮ ಪತ್ನಿ ರಾಗಿಣಿ ದೇವರಾಜ್ ಅವರ ಸಹೋದರಿಗೆ ಅಪರಿಚಿತ ವ್ಯಕ್ತಿಯೊಬ್ಬ 280ಕ್ಕೂ ಹೆಚ್ಚು ಬಾರಿ ಫೋನ್ ಮಾಡಿರುವುದು, ಅಶ್ಲೀಲ ಸಂದೇಶ ಹಾಗೂ ಚಿತ್ರಗಳನ್ನು ಕಳುಹಿಸಿರುವುದಾಗಿ ಅವರು ದೂರಿದ್ದಾರೆ.

ಈ ಸಂಬಂಧ ಅಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಕಾನೂನಾತ್ಮಕವಾಗಿ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಜ್ವಲ್ ಸ್ಪಷ್ಟಪಡಿಸಿದ್ದಾರೆ.

 

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

12 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

12 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

12 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

12 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago