ಬೆಂಗಳೂರು: ನಟಿ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿರುವ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಟ ಪ್ರಜ್ವಲ್ ದೇವರಾಜ್ ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ನಡೆದ ‘ಸು ಫ್ರಮ್ ಸೋ’ ಸಿನಿಮಾದ ವಿಶೇಷ ಪ್ರದರ್ಶನಕ್ಕೆ ಹಾಜರಾಗಿದ್ದ ಪ್ರಜ್ವಲ್, ಮಾಧ್ಯಮದೊಂದಿಗೆ ಮಾತನಾಡುತ್ತಾ, “ಯಾರು ಯಾರ ಫ್ಯಾನ್ ಆಗಿದ್ರೂ, ಅವರಿಗೆ ಮಿತಿಮೀರಿ ಅಭಿಮಾನ ತೋರಿಸಬಾರದು. ಜವಾಬ್ದಾರಿ ಸಹ ಅವಶ್ಯಕ. ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಹೆಣ್ಣುಮಕ್ಕಳಿಗೆ ಆಗುವ ಕಿರುಕುಳದ ವಿರುದ್ಧ ಸ್ಪಷ್ಟ ಸಂದೇಶವಿದೆ. ಆ ವಿಷಯವನ್ನು ಮನಗಂಡು, ಇಂದಿನ ಯುವಕರು ಪ್ರಬುದ್ಧವಾಗಿ ವರ್ತಿಸಬೇಕು,” ಎಂದು ಮನವೊಲಿಸಿದರು.
“ಧೈರ್ಯವಿದ್ದರೆ ಮುಂಚೆ ಬಂದು ನೇರವಾಗಿ ಮಾತನಾಡಲಿ. ಎಲ್ಲ ಚಿಕ್ಕ ಹುಡುಗರ ಕೈಯಲ್ಲೂ ಮೊಬೈಲ್ ಇದ್ದೀತು. ಆದರೆ, ಯಾರಿಗೂ ಗೊತ್ತಾಗಲ್ಲ ಅನ್ನೋ ಭಾವನೆಯಿಂದ ಅಶ್ಲೀಲ ಮೆಸೇಜ್ ಕಳಿಸುವುದನ್ನು ನ್ಯಾಯಸಮ್ಮತವಾಗಿ ಕಾನೂನು ಕಪ್ಪೆ ಮೇಲೆ ತರುವ ಅವಶ್ಯಕತೆ ಇದೆ,” ಎಂದು ಅವರು ಎಚ್ಚರಿಸಿದರು.
ಇದರ ಜೊತೆಗೆ ಪ್ರಜ್ವಲ್ ದೇವರಾಜ್ ತಮ್ಮ ಕುಟುಂಬಕ್ಕೂ ಇದೇ ರೀತಿಯ ಕಿರುಕುಳವಾಗಿದೆ ಎಂದು ಬಹಿರಂಗಪಡಿಸಿದರು. ತಮ್ಮ ಪತ್ನಿ ರಾಗಿಣಿ ದೇವರಾಜ್ ಅವರ ಸಹೋದರಿಗೆ ಅಪರಿಚಿತ ವ್ಯಕ್ತಿಯೊಬ್ಬ 280ಕ್ಕೂ ಹೆಚ್ಚು ಬಾರಿ ಫೋನ್ ಮಾಡಿರುವುದು, ಅಶ್ಲೀಲ ಸಂದೇಶ ಹಾಗೂ ಚಿತ್ರಗಳನ್ನು ಕಳುಹಿಸಿರುವುದಾಗಿ ಅವರು ದೂರಿದ್ದಾರೆ.
ಈ ಸಂಬಂಧ ಅಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಕಾನೂನಾತ್ಮಕವಾಗಿ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಜ್ವಲ್ ಸ್ಪಷ್ಟಪಡಿಸಿದ್ದಾರೆ.
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…