Cinema

ನಟಿ ಸೌಂದರ್ಯ ಸಾವಿನ ಪ್ರಕರಣ: 21 ವರ್ಷಗಳ ಬಳಿಕ ಕೊಲೆಯೆಂದು ದೂರು ದಾಖಲು..!

ನಟಿ ಸೌಂದರ್ಯ 2004ರ ಏಪ್ರಿಲ್ 17ರಂದು ನಡೆದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದರು ಎಂಬುದು ಅಧಿಕೃತ ವರದಿ. ಆದರೆ, ಇದು ಅಪಘಾತವಲ್ಲ, ಕೊಲೆ ಎಂಬ ಗಂಭೀರ ಆರೋಪದೊಂದಿಗೆ ಖ್ಯಾತ ನಟನ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

21 ವರ್ಷಗಳ ಬಳಿಕ ಹೊಸ ಬೆಳವಣಿಗೆ
ಸೌಂದರ್ಯ ಬಹುಭಾಷಾ ನಟಿಯಾಗಿ ಪ್ರಸಿದ್ಧರಾಗಿದ್ದು, ಕನ್ನಡ, ತೆಲುಗು ಸೇರಿದಂತೆ ಹಲವು ಚಿತ್ರಗಳಲ್ಲಿ ಮಿಂಚಿದ್ದರು. ಆದರೆ, ಕೇವಲ 31ನೇ ವಯಸ್ಸಿನಲ್ಲಿ ಅವರು ದುರಂತ ಸಾವಿಗೆ ಗುರಿಯಾಗಿದ್ದರು. 2004ರ ಏಪ್ರಿಲ್ 17ರಂದು ಭಾರತೀಯ ಜನತಾ ಪಕ್ಷ (BJP) ಮತ್ತು ತೆಲುಗು ದೇಶಂ ಪಕ್ಷ (TDP) ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ತೆರಳುತ್ತಿದ್ದ ವೇಳೆ, ಅವರ ಖಾಸಗಿ ವಿಮಾನ ಅಪಘಾತಕ್ಕೀಡಾಗಿ ಅವರ ಸಾವಾಯಿತು. ಅಪಘಾತದ ಪರಿಣಾಮ ಅವರ ದೇಹ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅವರ ಕುಟುಂಬದವರಿಗೆ ಕೊನೆಯ ಬಾರಿ ಮುಖ ನೋಡಲು ಸಾಧ್ಯವಾಗಲಿಲ್ಲ.

ಈ ದುರಂತದಿಂದ ಇದೀಗ 21 ವರ್ಷಗಳ ನಂತರ, ಟಾಲಿವುಡ್ ಹಿರಿಯ ನಟ ಮೋಹನ್ ಬಾಬು ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಚಿಟ್ಟಿಮಲ್ಲು ಎಂಬಾತ ಖಮ್ಮಂ ಎಸಿಪಿ ಮತ್ತು ಜಿಲ್ಲಾಧಿಕಾರಿಗಳಿಗೆ ದೂರು ನೀಡಿ, ಸೌಂದರ್ಯ ಅವರ ಸಾವಿಗೆ ಮೋಹನ್ ಬಾಬು ಕಾರಣ ಎಂದು ಆರೋಪಿಸಿದ್ದಾರೆ.

ಭೂಮಿ ವಿವಾದವೇ ಹತ್ಯೆಗೆ ಕಾರಣವೋ?

ದೂರಿನ ಪ್ರಕಾರ, ಸೌಂದರ್ಯ ಹೈದರಾಬಾದ್ ಸಮೀಪದ ಜಲಪಲ್ಲಿ ಗ್ರಾಮದಲ್ಲಿ 6 ಎಕರೆ ಭೂಮಿಯನ್ನು ಖರೀದಿಸಿದ್ದರು. ಈ ಭೂಮಿಗೆ ಮೋಹನ್ ಬಾಬು ಆಸಕ್ತಿ ಹೊಂದಿದ್ದರು ಮತ್ತು ಸೌಂದರ್ಯ ಹಾಗೂ ಅವರ ಸಹೋದರ ಅಮರನಾಥ್ ಅವರನ್ನು ಮಾರಾಟ ಮಾಡಲು ಒತ್ತಾಯಿಸಿದ್ದರು. ಆದರೆ ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಈ ಕಾರಣದಿಂದ ಮೋಹನ್ ಬಾಬು ದ್ವೇಷದಿಂದ ಸೌಂದರ್ಯ ಹತ್ಯೆ ಮಾಡಿಸಿದ್ದಾರೆ ಎಂದು ದೂರುದಾರ ಆರೋಪಿಸಿದ್ದಾರೆ.

ವಿಮಾನ ಅಪಘಾತಕ್ಕೂ ಹೊಸ ಅನುಮಾನ

2004ರ ಏಪ್ರಿಲ್ 17ರಂದು, ಸೌಂದರ್ಯ ಮತ್ತು ಅವರ ಸಹೋದರ ಅಮರನಾಥ್ ಬೆಂಗಳೂರಿನಿಂದ ತೆಲಂಗಾಣಕ್ಕೆ ತೆರಳುತ್ತಿದ್ದ ವಿಮಾನ ಅಪಘಾತಕ್ಕೀಡಾಯಿತು. ಅಪಘಾತಕ್ಕೆ ಸ್ಪಷ್ಟ ಕಾರಣವೇನೆಂಬುದು ಯಾವತ್ತಿಗೂ ನಿರ್ಧಾರವಾಗಿಲ್ಲ. ಆದರೆ ಅಪಘಾತದ ಬಳಿಕ ಮೋಹನ್ ಬಾಬು ಅವರು ಜಲಪಲ್ಲಿಯ 6 ಎಕರೆ ಭೂಮಿಯನ್ನು ಅಕ್ರಮವಾಗಿ ಬಳಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ದೂರಿನಲ್ಲಿ ಕೇಳಿಬಂದಿದೆ.

ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು: ದೂರುದಾರರ ಒತ್ತಾಯ

ಚಿಟ್ಟಿಮಲ್ಲು, ಈ ಭೂಮಿಯನ್ನು ಸರ್ಕಾರ ವಶಕ್ಕೆ ಪಡೆದು ಅನಾಥಾಶ್ರಮ, ಮಿಲಿಟರಿ, ಪೊಲೀಸರು ಅಥವಾ ಮಾಧ್ಯಮ ಸ್ನೇಹಿತರಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ತಮಗೆ ಮೋಹನ್ ಬಾಬುವಿನಿಂದ ಅಪಾಯವಿದೆ ಎಂದು ಹೇಳಿ ಪೊಲೀಸರಿಂದ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಪೊಲೀಸರ ಮುಂದಿನ ನಡೆ?

ಸೌಂದರ್ಯ ಸಾವಿನ ಪ್ರಕರಣವು ನಿಜಕ್ಕೂ ಅಪಘಾತವೋ ಅಥವಾ ಸಜೀವರೂಪದಲ್ಲಿ ನಡೆದ ಕೊಲೆಯೋ ಎಂಬ ಬಗ್ಗೆ ಯಾವುದೇ ಪುರಾವೆಗಳು ಇನ್ನೂ ಲಭ್ಯವಿಲ್ಲ. ಆದರೆ ಜಮೀನಿನ ವಿವಾದವೇ ಈ ಘಟನೆಗೆ ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಕುರಿತಾಗಿ ಪೊಲೀಸರು ತನಿಖೆ ನಡೆಸುವ ನಿರೀಕ್ಷೆಯಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

12 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

12 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

12 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

12 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

17 hours ago