Latest

ಹೈಟೆಕ್‌ ವೇಶ್ಯಾವಾಟಿಕೆಯಲ್ಲಿ ನಟಿ ಯಮುನಾ ಹೆಸರು; ಕೋರ್ಟಲ್ಲಿ ಗೆದ್ದಿದ್ದೇನೆ ಎಂದ ನಟಿ.

ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಅಭಿನಯಿಸಿರುವ ನಟಿ ಯಮುನಾ 12 ವರ್ಷಗಳ ಹಿಂದೆ ದೊಡ್ಡ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದರು. ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿ ನಾಲ್ಕು ಮಹಡಿಗಳನ್ನು ಬಾಡಿಗೆ ಪಡೆದುಕೊಂಡು, ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದಡಿ ಪೊಲೀಸರು ರೇಡ್ ಮಾಡಿ, ನಟಿ ಯಮುನಾರನ್ನು ವಶಕ್ಕೆ ಪಡೆದಿದ್ದರು. ಈ ಘಟನೆಯಲ್ಲಿ ನಾನು ನಿರಪರಾಧಿ ಎಂದು ಸಾಬೀತು ಮಾಡಿದ್ದರೂ, ಜನರು ಪದೆ ಪದೇ ಸಾಮಾಜಿಕ ಜಾಲತಾಣದಲ್ಲಿ ನನ್ನನ್ನು ಟಾರ್ಗೆಟ್ ಮಾಡುತ್ತಿರುವುದು ತಪ್ಪು ಎಂದು ಹೇಳಿಕೊಂಡಿದ್ದಾರೆ.
‘ಎಲ್ಲರಿಗೂ ನಮಸ್ಕಾರ. ಜೀವನದಲ್ಲಿ ನನ್ನನ್ನು ನಾನು ಎಷ್ಟು ಮೋಟಿವೇಟ್ ಮಾಡಿಕೊಂಡರೂ ಕಾಡುತ್ತಿರುವುದು ಒಂದೇ ನೋವು. ಇಷ್ಟು ವರ್ಷವಾದರೂ ಆ ನೋವು ನನ್ನಲ್ಲಿ ಉಳಿದು ಬಿಟ್ಟಿದೆ. ಪದೇ ಪದೇ ನೋವಾಗಲು ಕಾರಣ ಸೋಷಿಯಲ್ ಮೀಡಿಯಾ. ಬಹಳ ವರ್ಷಗಳ ಹಿಂದೆಯೇ ದೊಡ್ಡ ಸಮಸ್ಯೆಯೊಂದನ್ನು ಎದುರಿಸಿ ಅದರಿಂದ ಹೊರ ಬಂದು ನಿಶ್ಚಿಂತೆಯಿಂದ ಜೀವನ ನಡೆಸುತ್ತಿರುವೆ. ಆ ಸಮಸ್ಯೆಯಲ್ಲಿ ಹೇಗೆ ಸಿಲುಕಿಕೊಂಡೆ ಎಂದು ಈಗಾಗಲೇ ಅನೇಕ ಸಂದರ್ಶನದಲ್ಲಿ ಹೇಳಿಕೊಂಡು, ನಾನಾ ರೀತಿಯಲ್ಲಿ ಕ್ಲಾರಿಟಿ ಕೊಟ್ಟಿದ್ದೇನೆ. ಈ ವಿಚಾರದಲ್ಲಿ ಸ್ವತಃ ಕೋರ್ಟ್ ಕೂಡ ನನಗೆ ಕ್ಲೀನ್ ಚಿಟ್ ಕೊಟ್ಟಿದೆ. ನನ್ನನ್ನು ನ್ಯಾಯ ಗೆಲ್ಲಿಸಿದೆ. ನ್ಯಾಯಯುತವಾಗಿ ನಾನು ಗೆಲ್ಲುವು ಸಾಧಿಸಿರುವೆ. ಆದರೆ ಸಾಮಾಜಿಕ ಜಾಲತಾಣವನ್ನು ನಾನು ಕಂಟ್ರೋಲ್ ಮಾಡಲು ಆಗುತ್ತಿಲ್ಲ,’ ಎಂದು ವಿಡಿಯೋದಲ್ಲಿ ಯಮುನಾ ನೋವು ತೋಡಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago