Latest

ಹೈಟೆಕ್‌ ವೇಶ್ಯಾವಾಟಿಕೆಯಲ್ಲಿ ನಟಿ ಯಮುನಾ ಹೆಸರು; ಕೋರ್ಟಲ್ಲಿ ಗೆದ್ದಿದ್ದೇನೆ ಎಂದ ನಟಿ.

ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಅಭಿನಯಿಸಿರುವ ನಟಿ ಯಮುನಾ 12 ವರ್ಷಗಳ ಹಿಂದೆ ದೊಡ್ಡ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದರು. ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿ ನಾಲ್ಕು ಮಹಡಿಗಳನ್ನು ಬಾಡಿಗೆ ಪಡೆದುಕೊಂಡು, ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದಡಿ ಪೊಲೀಸರು ರೇಡ್ ಮಾಡಿ, ನಟಿ ಯಮುನಾರನ್ನು ವಶಕ್ಕೆ ಪಡೆದಿದ್ದರು. ಈ ಘಟನೆಯಲ್ಲಿ ನಾನು ನಿರಪರಾಧಿ ಎಂದು ಸಾಬೀತು ಮಾಡಿದ್ದರೂ, ಜನರು ಪದೆ ಪದೇ ಸಾಮಾಜಿಕ ಜಾಲತಾಣದಲ್ಲಿ ನನ್ನನ್ನು ಟಾರ್ಗೆಟ್ ಮಾಡುತ್ತಿರುವುದು ತಪ್ಪು ಎಂದು ಹೇಳಿಕೊಂಡಿದ್ದಾರೆ.
‘ಎಲ್ಲರಿಗೂ ನಮಸ್ಕಾರ. ಜೀವನದಲ್ಲಿ ನನ್ನನ್ನು ನಾನು ಎಷ್ಟು ಮೋಟಿವೇಟ್ ಮಾಡಿಕೊಂಡರೂ ಕಾಡುತ್ತಿರುವುದು ಒಂದೇ ನೋವು. ಇಷ್ಟು ವರ್ಷವಾದರೂ ಆ ನೋವು ನನ್ನಲ್ಲಿ ಉಳಿದು ಬಿಟ್ಟಿದೆ. ಪದೇ ಪದೇ ನೋವಾಗಲು ಕಾರಣ ಸೋಷಿಯಲ್ ಮೀಡಿಯಾ. ಬಹಳ ವರ್ಷಗಳ ಹಿಂದೆಯೇ ದೊಡ್ಡ ಸಮಸ್ಯೆಯೊಂದನ್ನು ಎದುರಿಸಿ ಅದರಿಂದ ಹೊರ ಬಂದು ನಿಶ್ಚಿಂತೆಯಿಂದ ಜೀವನ ನಡೆಸುತ್ತಿರುವೆ. ಆ ಸಮಸ್ಯೆಯಲ್ಲಿ ಹೇಗೆ ಸಿಲುಕಿಕೊಂಡೆ ಎಂದು ಈಗಾಗಲೇ ಅನೇಕ ಸಂದರ್ಶನದಲ್ಲಿ ಹೇಳಿಕೊಂಡು, ನಾನಾ ರೀತಿಯಲ್ಲಿ ಕ್ಲಾರಿಟಿ ಕೊಟ್ಟಿದ್ದೇನೆ. ಈ ವಿಚಾರದಲ್ಲಿ ಸ್ವತಃ ಕೋರ್ಟ್ ಕೂಡ ನನಗೆ ಕ್ಲೀನ್ ಚಿಟ್ ಕೊಟ್ಟಿದೆ. ನನ್ನನ್ನು ನ್ಯಾಯ ಗೆಲ್ಲಿಸಿದೆ. ನ್ಯಾಯಯುತವಾಗಿ ನಾನು ಗೆಲ್ಲುವು ಸಾಧಿಸಿರುವೆ. ಆದರೆ ಸಾಮಾಜಿಕ ಜಾಲತಾಣವನ್ನು ನಾನು ಕಂಟ್ರೋಲ್ ಮಾಡಲು ಆಗುತ್ತಿಲ್ಲ,’ ಎಂದು ವಿಡಿಯೋದಲ್ಲಿ ಯಮುನಾ ನೋವು ತೋಡಿಕೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

5 hours ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

5 hours ago

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ – ಖಾಸಗಿ ಸೆಂಟರ್‌ಗಳ ನಿಯಮ ಉಲ್ಲಂಘನೆ ಬಯಲು

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…

5 hours ago

ಮದ್ಯದ ದರ ಏರಿಕೆ ಶಾಕ್: ‘ಎಕಾನಮಿ’ ಬ್ರ್ಯಾಂಡ್‌ಗಳೇ ಹೆಚ್ಚು ದುಬಾರಿ

ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…

18 hours ago

ಬೇಸಿಗೆ ಬಿಸಿಗೆ ಬೈಕ್ ಟೈರ್ ಬ್ಲಾಸ್ಟ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದುರ್ಮರಣ

ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…

20 hours ago

ಶಿರಸಿ ವೈದ್ಯನ ಕೊಲೆ ರಹಸ್ಯ ಬಯಲು: ಮದುವೆ ಮುನ್ನವೇ ಸ್ನೇಹಿತನಿಂದ ಕ್ರೂರ ಹತ್ಯೆ.!

ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…

20 hours ago