ಟ್ರಾಫಿಕ್ ಜಾಮ್ನಲ್ಲಿ ಕಾರು ಸಿಲುಕಿಕೊಂಡಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬಿಟ್ಟು ಪರಾರಿಯಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆ. 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪರಾರಿಯಾದವನ ಹೆಸರು ವಿಜಯ್ ಜಾರ್ಜ್. ಮಾಜಿ ಪ್ರೇಯಸಿಯ ಬೆದರಿಕೆಗೆ ಹೆದರಿ ಪತ್ನಿಯನ್ನು ಬಿಟ್ಟು ಓಡಿದ್ದಾನೆಂದು ತಿಳಿದುಬಂದಿದೆ. ಮದುವೆ ನಡೆದ ಮರುದಿನವೇ ಈ ಘಟನೆ ಮಹದೇವಪುರದಲ್ಲಿ ನಡೆದಿದೆ. ಮದುವೆ ಮುಗಿಸಿ ಚರ್ಚ್ನಿಂದ ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಕಾರಿನಿಂದ ಕೆಳಗೆ ಇಳಿದು ಜಾರ್ಜ್ ಎಸ್ಕೇಪ್ ಆಗಿದ್ದು, ಆತನಿಗಾಗಿ ಪೊಲೀಸರು ಕಳೆದ ಎರಡು ವಾರಗಳಿಂದ ಹುಡುಕಾಟ ನಡೆಸುತ್ತಿದ್ದಾರೆ. ವಿಜಯ್, ಈ ಹಿಂದೆ ಮಹಿಳೆಯೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದ. ತನ್ನ ತಂದೆಯ ಕಂಪನಿಯಲ್ಲಿ ಕೆಲಸ ಮಾಡುವ ಆಟೋ ಚಾಲಕನ ಪತ್ನಿಯೊಂದಿಗಿ ಜಾರ್ಜ್, ಲವ್ವಿಡವ್ವಿ ಇಟ್ಟುಕೊಂಡಿದ್ದ. ಮಹಿಳೆ ಇಬ್ಬರು ಮಕ್ಕಳಿದ್ದು ಅದೇ ಕಂಪನಿಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಳು.
ಯಾವಾಗ ಇಬ್ಬರ ಬಗ್ಗೆ ಕುಟುಂಬಕ್ಕೆ ತಿಳಿಯಿತೋ ಆಗ ಸಂಬಂಧವನ್ನು ಮುರಿದುಕೊಂಡು ಮದುವೆ ಆಗಲು ಜಾರ್ಜ್ ನಿರ್ಧಾರ ಮಾಡಿದ. ಮದುವೆಗು ಮುನ್ನ ವಿಜಯ್, ತನ್ನ ತಪ್ಪನ್ನು ಪತ್ನಿಯ ಮುಂದೆ ಹೇಳಿಕೊಂಡಿದ್ದ. ಎಲ್ಲವನ್ನು ಕ್ಷಮಿಸಿ ಆತನನ್ನು ಮದುವೆ ಆಗಿದ್ದಳು. ಆದರೆ, ಬೇರೊಬ್ಬಳನ್ನು ಮದುವೆ ಆದರೆ, ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಹರಿಬಿಡುವುದಾಗಿ ಮಾಜಿ ಪ್ರೇಯಸಿ ಬೆದರಿಸುತ್ತಿದ್ದಳು. ಇದರಿಂದ ಜಾರ್ಜ್ ತುಂಬಾ ಒತ್ತಡಕ್ಕೆ ಒಳಗಾಗಿದ್ದ.
ಜಾರ್ಜ್ ಪತ್ನಿ ಘಟನೆಯ ಬಗ್ಗೆ ಮಾತನಾಡಿ, ಚರ್ಚ್ನಿಂದ ಮನೆಗೆ ಬರುವಾಗ ಕಾರು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಜಾರ್ಜ್ ಕಾರಿನ ಬಾಗಿಲು ತೆರೆದು ಓಡಿ ಹೋದ. ಇದನ್ನು ನೋಡಿ ನಾನು ಆಘಾತಕ್ಕೆ ಒಳಗಾದೆ. ಆತನನ್ನು ಹಿಂಬಾಲಿಸಲು ಯತ್ನಿಸಿದೆ. ಆದರೆ, ಆತ ಸಿಗಲಿಲ್ಲ. ಆತನ ಪರವಾಗಿ ನಿಲ್ಲುವುದಾಗಿ ನಾನು ಮತ್ತು ನನ್ನ ಕುಟುಂಬದವರು ಭರವಸೆ ನೀಡಿದ್ದೆವು. ಆದರೂ ಆತ ಓಡಿ ಹೋಗಿದ್ದಾನೆ. ಅವರ ಸುರಕ್ಷಿತವಾಗಿದ್ದಾರೆ ಮತ್ತು ಮರಳಿ ಬರುತ್ತಾರೆ ಎಂದು ಭಾವಿಸಿದ್ದೇನೆ ಎಂದು ಜಾರ್ಜ್ ಪತ್ನಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದರೂ, ಈ ಬಾರಿ ಆ ರಾಜ್ಯಕ್ಕಿಂತ ಹೆಚ್ಚು ಸದ್ದು ಮಾಡುತ್ತಿರುವುದು ಕರ್ನಾಟಕದ…
ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ,…
ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ…
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…
ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…