Latest

ಲವರ್ ಗೆ ಹೆದರಿ ಬೆಂಗಳೂರು ಟ್ರಾಫಿಕ್ ನಲ್ಲಿ ಪತ್ನಿಯನ್ನು ಬಿಟ್ಟು ಪ್ರತಿರಾಯ ಎಸ್ಕೇಪ್!

ಟ್ರಾಫಿಕ್​ ಜಾಮ್​ನಲ್ಲಿ ಕಾರು ಸಿಲುಕಿಕೊಂಡಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬಿಟ್ಟು ಪರಾರಿಯಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆ. 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪರಾರಿಯಾದವನ ಹೆಸರು ವಿಜಯ್​ ಜಾರ್ಜ್​. ಮಾಜಿ ಪ್ರೇಯಸಿಯ ಬೆದರಿಕೆಗೆ ಹೆದರಿ ಪತ್ನಿಯನ್ನು ಬಿಟ್ಟು ಓಡಿದ್ದಾನೆಂದು ತಿಳಿದುಬಂದಿದೆ. ಮದುವೆ ನಡೆದ ಮರುದಿನವೇ ಈ ಘಟನೆ ಮಹದೇವಪುರದಲ್ಲಿ ನಡೆದಿದೆ. ಮದುವೆ ಮುಗಿಸಿ ಚರ್ಚ್​ನಿಂದ ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಕಾರಿನಿಂದ ಕೆಳಗೆ ಇಳಿದು ಜಾರ್ಜ್​ ಎಸ್ಕೇಪ್​ ಆಗಿದ್ದು, ಆತನಿಗಾಗಿ ಪೊಲೀಸರು ಕಳೆದ ಎರಡು ವಾರಗಳಿಂದ ಹುಡುಕಾಟ ನಡೆಸುತ್ತಿದ್ದಾರೆ. ವಿಜಯ್​, ಈ ಹಿಂದೆ ಮಹಿಳೆಯೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದ. ತನ್ನ ತಂದೆಯ ಕಂಪನಿಯಲ್ಲಿ ಕೆಲಸ ಮಾಡುವ ಆಟೋ ಚಾಲಕನ ಪತ್ನಿಯೊಂದಿಗಿ ಜಾರ್ಜ್​, ಲವ್ವಿಡವ್ವಿ ಇಟ್ಟುಕೊಂಡಿದ್ದ. ಮಹಿಳೆ ಇಬ್ಬರು ಮಕ್ಕಳಿದ್ದು ಅದೇ ಕಂಪನಿಯಲ್ಲಿ ಕ್ಲರ್ಕ್​ ಆಗಿ ಕೆಲಸ ಮಾಡುತ್ತಿದ್ದಳು.
ಯಾವಾಗ ಇಬ್ಬರ ಬಗ್ಗೆ ಕುಟುಂಬಕ್ಕೆ ತಿಳಿಯಿತೋ ಆಗ ಸಂಬಂಧವನ್ನು ಮುರಿದುಕೊಂಡು ಮದುವೆ ಆಗಲು ಜಾರ್ಜ್​ ನಿರ್ಧಾರ ಮಾಡಿದ. ಮದುವೆಗು ಮುನ್ನ ವಿಜಯ್​, ತನ್ನ ತಪ್ಪನ್ನು ಪತ್ನಿಯ ಮುಂದೆ ಹೇಳಿಕೊಂಡಿದ್ದ. ಎಲ್ಲವನ್ನು ಕ್ಷಮಿಸಿ ಆತನನ್ನು ಮದುವೆ ಆಗಿದ್ದಳು. ಆದರೆ, ಬೇರೊಬ್ಬಳನ್ನು ಮದುವೆ ಆದರೆ, ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಹರಿಬಿಡುವುದಾಗಿ ಮಾಜಿ ಪ್ರೇಯಸಿ ಬೆದರಿಸುತ್ತಿದ್ದಳು. ಇದರಿಂದ ಜಾರ್ಜ್​ ತುಂಬಾ ಒತ್ತಡಕ್ಕೆ ಒಳಗಾಗಿದ್ದ.
ಜಾರ್ಜ್​ ಪತ್ನಿ ಘಟನೆಯ ಬಗ್ಗೆ ಮಾತನಾಡಿ, ಚರ್ಚ್​ನಿಂದ ಮನೆಗೆ ಬರುವಾಗ ಕಾರು ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಜಾರ್ಜ್​ ಕಾರಿನ ಬಾಗಿಲು ತೆರೆದು ಓಡಿ ಹೋದ. ಇದನ್ನು ನೋಡಿ ನಾನು ಆಘಾತಕ್ಕೆ ಒಳಗಾದೆ. ಆತನನ್ನು ಹಿಂಬಾಲಿಸಲು ಯತ್ನಿಸಿದೆ. ಆದರೆ, ಆತ ಸಿಗಲಿಲ್ಲ. ಆತನ ಪರವಾಗಿ ನಿಲ್ಲುವುದಾಗಿ ನಾನು ಮತ್ತು ನನ್ನ ಕುಟುಂಬದವರು ಭರವಸೆ ನೀಡಿದ್ದೆವು. ಆದರೂ ಆತ ಓಡಿ ಹೋಗಿದ್ದಾನೆ. ಅವರ ಸುರಕ್ಷಿತವಾಗಿದ್ದಾರೆ ಮತ್ತು ಮರಳಿ ಬರುತ್ತಾರೆ ಎಂದು ಭಾವಿಸಿದ್ದೇನೆ ಎಂದು ಜಾರ್ಜ್​ ಪತ್ನಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

1 day ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

1 day ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

1 day ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

1 day ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

1 day ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

1 day ago