Latest

ಲವರ್ ಗೆ ಹೆದರಿ ಬೆಂಗಳೂರು ಟ್ರಾಫಿಕ್ ನಲ್ಲಿ ಪತ್ನಿಯನ್ನು ಬಿಟ್ಟು ಪ್ರತಿರಾಯ ಎಸ್ಕೇಪ್!

ಟ್ರಾಫಿಕ್​ ಜಾಮ್​ನಲ್ಲಿ ಕಾರು ಸಿಲುಕಿಕೊಂಡಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬಿಟ್ಟು ಪರಾರಿಯಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆ. 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪರಾರಿಯಾದವನ ಹೆಸರು ವಿಜಯ್​ ಜಾರ್ಜ್​. ಮಾಜಿ ಪ್ರೇಯಸಿಯ ಬೆದರಿಕೆಗೆ ಹೆದರಿ ಪತ್ನಿಯನ್ನು ಬಿಟ್ಟು ಓಡಿದ್ದಾನೆಂದು ತಿಳಿದುಬಂದಿದೆ. ಮದುವೆ ನಡೆದ ಮರುದಿನವೇ ಈ ಘಟನೆ ಮಹದೇವಪುರದಲ್ಲಿ ನಡೆದಿದೆ. ಮದುವೆ ಮುಗಿಸಿ ಚರ್ಚ್​ನಿಂದ ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಕಾರಿನಿಂದ ಕೆಳಗೆ ಇಳಿದು ಜಾರ್ಜ್​ ಎಸ್ಕೇಪ್​ ಆಗಿದ್ದು, ಆತನಿಗಾಗಿ ಪೊಲೀಸರು ಕಳೆದ ಎರಡು ವಾರಗಳಿಂದ ಹುಡುಕಾಟ ನಡೆಸುತ್ತಿದ್ದಾರೆ. ವಿಜಯ್​, ಈ ಹಿಂದೆ ಮಹಿಳೆಯೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದ. ತನ್ನ ತಂದೆಯ ಕಂಪನಿಯಲ್ಲಿ ಕೆಲಸ ಮಾಡುವ ಆಟೋ ಚಾಲಕನ ಪತ್ನಿಯೊಂದಿಗಿ ಜಾರ್ಜ್​, ಲವ್ವಿಡವ್ವಿ ಇಟ್ಟುಕೊಂಡಿದ್ದ. ಮಹಿಳೆ ಇಬ್ಬರು ಮಕ್ಕಳಿದ್ದು ಅದೇ ಕಂಪನಿಯಲ್ಲಿ ಕ್ಲರ್ಕ್​ ಆಗಿ ಕೆಲಸ ಮಾಡುತ್ತಿದ್ದಳು.
ಯಾವಾಗ ಇಬ್ಬರ ಬಗ್ಗೆ ಕುಟುಂಬಕ್ಕೆ ತಿಳಿಯಿತೋ ಆಗ ಸಂಬಂಧವನ್ನು ಮುರಿದುಕೊಂಡು ಮದುವೆ ಆಗಲು ಜಾರ್ಜ್​ ನಿರ್ಧಾರ ಮಾಡಿದ. ಮದುವೆಗು ಮುನ್ನ ವಿಜಯ್​, ತನ್ನ ತಪ್ಪನ್ನು ಪತ್ನಿಯ ಮುಂದೆ ಹೇಳಿಕೊಂಡಿದ್ದ. ಎಲ್ಲವನ್ನು ಕ್ಷಮಿಸಿ ಆತನನ್ನು ಮದುವೆ ಆಗಿದ್ದಳು. ಆದರೆ, ಬೇರೊಬ್ಬಳನ್ನು ಮದುವೆ ಆದರೆ, ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಹರಿಬಿಡುವುದಾಗಿ ಮಾಜಿ ಪ್ರೇಯಸಿ ಬೆದರಿಸುತ್ತಿದ್ದಳು. ಇದರಿಂದ ಜಾರ್ಜ್​ ತುಂಬಾ ಒತ್ತಡಕ್ಕೆ ಒಳಗಾಗಿದ್ದ.
ಜಾರ್ಜ್​ ಪತ್ನಿ ಘಟನೆಯ ಬಗ್ಗೆ ಮಾತನಾಡಿ, ಚರ್ಚ್​ನಿಂದ ಮನೆಗೆ ಬರುವಾಗ ಕಾರು ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಜಾರ್ಜ್​ ಕಾರಿನ ಬಾಗಿಲು ತೆರೆದು ಓಡಿ ಹೋದ. ಇದನ್ನು ನೋಡಿ ನಾನು ಆಘಾತಕ್ಕೆ ಒಳಗಾದೆ. ಆತನನ್ನು ಹಿಂಬಾಲಿಸಲು ಯತ್ನಿಸಿದೆ. ಆದರೆ, ಆತ ಸಿಗಲಿಲ್ಲ. ಆತನ ಪರವಾಗಿ ನಿಲ್ಲುವುದಾಗಿ ನಾನು ಮತ್ತು ನನ್ನ ಕುಟುಂಬದವರು ಭರವಸೆ ನೀಡಿದ್ದೆವು. ಆದರೂ ಆತ ಓಡಿ ಹೋಗಿದ್ದಾನೆ. ಅವರ ಸುರಕ್ಷಿತವಾಗಿದ್ದಾರೆ ಮತ್ತು ಮರಳಿ ಬರುತ್ತಾರೆ ಎಂದು ಭಾವಿಸಿದ್ದೇನೆ ಎಂದು ಜಾರ್ಜ್​ ಪತ್ನಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

11 minutes ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

14 minutes ago

ಮುತ್ತತ್ತಿಯಲ್ಲಿ ದಾರುಣ ದುರಂತ: ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…

15 minutes ago

₹15 ಲಕ್ಷ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ! ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರ ಚಾಣಾಕ್ಷ ತನಿಖೆ

ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…

16 minutes ago

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

22 minutes ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

27 minutes ago