ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಸೋಮನಾಳ ಗ್ರಾಮದಲ್ಲಿರುವ ದ್ಯಾಮವ್ವನ ಗುಡಿ ಓಣಿಯ ಜನರಿಗೆ ಸುಮಾರು ಎಂಟು ದಿನಕ್ಕೆ ಒಮ್ಮೆ ಕುಡಿಯುವ ನೀರು ಬಿಡುತ್ತಾರೆ, ಜನರು ಹಳ್ಳದ ಕಲುಷಿತ ನೀರನ್ನು ಸೇವನೆ ಮಾಡುತ್ತಿದ್ದಾರೆ. ಇದರಿಂದ ರೋಗ ರುಜಿನಗಳಿಗೆ ತುತ್ತಾಗುವ ಸಾಧ್ಯತೆಗಳಿವೆ. ಓಣಿಯ ವೃದ್ಧ ಮಹಿಳೆಯೊಬ್ಬರು ಈ ವಿಚಾರದ ಬಗ್ಗೆ ಹೇಳಿದಾಗ ವಯಸ್ಸಾಗಿದೆ ಹಳ್ಳಕ್ಕೆ ಹೋಗಿ ನೀರು ತರಲು ಸಹ ಆಗುವುದಿಲ್ಲ ನಾನೇನು ಮಾಡಲಿ, ದಿನಗೂಲಿ ಕೆಲಸ ಮಾಡಿ ದುಡಿದು ಬಂದರು ನಾವೆಲ್ಲಾ ದಿನಾಲೂ ನೀರಿಗಾಗಿಯೇ ಪರದಾಡುವಂತಾಗಿದೆ ಎಂದರು. ಹಲವು ಬಾರಿ ಪಿಡಿಓ ರವರ ಗಮನಕ್ಕೆ ತಂದರು ಯಾವುದೇ ಪ್ರಯೋಜನವಿಲ್ಲ, ಕರೆ ಮಾಡಿದಾಗ ಯಾವಾಗಲೂ ಫೋನ್ ಸ್ವಿಚ್ ಆಫ್ ಇರುತ್ತದೆ. ಇದೇ ರೀತಿ ಮುಂದುವರೆದರೆ ನಾವೆಲ್ಲರೂ ಸೇರಿಕೊಂಡು ಗ್ರಾಮ ಪಂಚಾಯತಿಗೆ ಬೀಗ ಹಾಕಿ ಹೋರಾಟ ಮಾಡಬೇಕಾಗುತ್ತದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿರುತ್ತಾರೆ.
15 ದಿನಗಳ ಹಿಂದೆ ಗ್ರಾಮಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಮಿ ಚೌಧರಿ ರವರಿಗೆ ಗ್ರಾಮಸ್ಥರು ನೀರಿನ ಸಮಸ್ಯೆಯ ಬಗ್ಗೆ ತಿಳಿಸಿದಾಗ ಅಲ್ಲಿಯೇ ಇದ್ದ ಅಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡು ಈ ಕೂಡಲೇ ಸರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಆದರೆ ಅಧಿಕಾರಿಗಳು ಮಾತ್ರ ಇದರ ಬಗ್ಗೆ ಯಾವುದೇ ಗಮನ ಹರಿಸುತ್ತಿಲ್ಲ. ಓಣಿಯ ಮಹಿಳೆಯರು ಸುಮಾರು ಎರಡು ದಿನಗಳಿಂದ ನೀರಿಲ್ಲದ ಕಾರಣ ಹಳ್ಳದ ಕೊಳಚೆ ನೀರನ್ನು ಸೇವನೆ ಮಾಡುತ್ತಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆಯವರು ಸಹ ಸಮಸ್ಯೆ ಬಗೆ ಗಮನಹರಿಸಲು ಹೇಳಿ ಹದಿನೈದು ದಿನ ಕಳೆದು ಹೋದರು ಇಲ್ಲಿಯವರೆಗೂ ಕೆಲಸ ಆಗಿಲ್ಲ, ಇದರ ಬಗ್ಗೆ ಗ್ರಾಮ ಪಂಚಾಯತಿಯವರ ಗಮನಕ್ಕೆ ಬಂದರೂ ಸಹ ಇವರು ತಮ್ಮ ಕೆಲಸ ಮಾಡುತ್ತಿಲ್ಲ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿರವರು ಸರಿ ಪಡಿಸಿ ಎಂದು ಹೇಳಿದರೂ ಸಹ ಅವರ ಮಾತಿಗೆ ಬೆಲೆ ಇಲ್ಲವಾ? ಗ್ರಾಮ ಅಭಿವೃದ್ಧಿಗಾಗಿಯೇ ನೇಮಿಸಿರುವ ಈ ಅಧಿಕಾರಿಯೂ ಗ್ರಾಮಾಭಿವೃದ್ಧಿ ಏಕೆ ಮಾಡುತ್ತಿಲ್ಲ?ಕುಡಿಯುವ ನೀರನ್ನೇ ಒದಗಿಸುವುದಕ್ಕೆ ಇವರಿಗೆ ಯೋಗ್ಯತೆ ಇಲ್ಲವೆಂದರೆ, ಬೇರೆ ಯಾವ ಅಭಿವೃದ್ಧಿ ಗ್ರಾಮದಲ್ಲಿ ಮಾಡುತ್ತಾರೆ? ಮೇಲಾಧಿಕಾರಿಗಳು ಇದರ ಬಗ್ಗೆ ಆದಷ್ಟು ಬೇಗ ಎಚ್ಚೆತ್ತುಕೊಳ್ಳಲಿಲ್ಲವೆಂದರೆ ಗ್ರಾಮಸ್ಥರು ಹೋರಾಟಕ್ಕೆ ಮುಂದಾಗುತ್ತೇವೆ ಎಂದಿದ್ದಾರೆ ಎಚ್ಚರ! ವರದಿ: ಸಂಗಪ್ಪ ಚಲವಾದಿ
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…