ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಸೋಮನಾಳ ಗ್ರಾಮದಲ್ಲಿರುವ ದ್ಯಾಮವ್ವನ ಗುಡಿ ಓಣಿಯ ಜನರಿಗೆ ಸುಮಾರು ಎಂಟು ದಿನಕ್ಕೆ ಒಮ್ಮೆ ಕುಡಿಯುವ ನೀರು ಬಿಡುತ್ತಾರೆ, ಜನರು ಹಳ್ಳದ ಕಲುಷಿತ ನೀರನ್ನು ಸೇವನೆ ಮಾಡುತ್ತಿದ್ದಾರೆ. ಇದರಿಂದ ರೋಗ ರುಜಿನಗಳಿಗೆ ತುತ್ತಾಗುವ ಸಾಧ್ಯತೆಗಳಿವೆ. ಓಣಿಯ ವೃದ್ಧ ಮಹಿಳೆಯೊಬ್ಬರು ಈ ವಿಚಾರದ ಬಗ್ಗೆ ಹೇಳಿದಾಗ ವಯಸ್ಸಾಗಿದೆ ಹಳ್ಳಕ್ಕೆ ಹೋಗಿ ನೀರು ತರಲು ಸಹ ಆಗುವುದಿಲ್ಲ ನಾನೇನು ಮಾಡಲಿ, ದಿನಗೂಲಿ ಕೆಲಸ ಮಾಡಿ ದುಡಿದು ಬಂದರು ನಾವೆಲ್ಲಾ ದಿನಾಲೂ ನೀರಿಗಾಗಿಯೇ ಪರದಾಡುವಂತಾಗಿದೆ ಎಂದರು. ಹಲವು ಬಾರಿ ಪಿಡಿಓ ರವರ ಗಮನಕ್ಕೆ ತಂದರು ಯಾವುದೇ ಪ್ರಯೋಜನವಿಲ್ಲ, ಕರೆ ಮಾಡಿದಾಗ ಯಾವಾಗಲೂ ಫೋನ್ ಸ್ವಿಚ್ ಆಫ್ ಇರುತ್ತದೆ. ಇದೇ ರೀತಿ ಮುಂದುವರೆದರೆ ನಾವೆಲ್ಲರೂ ಸೇರಿಕೊಂಡು ಗ್ರಾಮ ಪಂಚಾಯತಿಗೆ ಬೀಗ ಹಾಕಿ ಹೋರಾಟ ಮಾಡಬೇಕಾಗುತ್ತದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿರುತ್ತಾರೆ.
15 ದಿನಗಳ ಹಿಂದೆ ಗ್ರಾಮಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಮಿ ಚೌಧರಿ ರವರಿಗೆ ಗ್ರಾಮಸ್ಥರು ನೀರಿನ ಸಮಸ್ಯೆಯ ಬಗ್ಗೆ ತಿಳಿಸಿದಾಗ ಅಲ್ಲಿಯೇ ಇದ್ದ ಅಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡು ಈ ಕೂಡಲೇ ಸರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಆದರೆ ಅಧಿಕಾರಿಗಳು ಮಾತ್ರ ಇದರ ಬಗ್ಗೆ ಯಾವುದೇ ಗಮನ ಹರಿಸುತ್ತಿಲ್ಲ. ಓಣಿಯ ಮಹಿಳೆಯರು ಸುಮಾರು ಎರಡು ದಿನಗಳಿಂದ ನೀರಿಲ್ಲದ ಕಾರಣ ಹಳ್ಳದ ಕೊಳಚೆ ನೀರನ್ನು ಸೇವನೆ ಮಾಡುತ್ತಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆಯವರು ಸಹ ಸಮಸ್ಯೆ ಬಗೆ ಗಮನಹರಿಸಲು ಹೇಳಿ ಹದಿನೈದು ದಿನ ಕಳೆದು ಹೋದರು ಇಲ್ಲಿಯವರೆಗೂ ಕೆಲಸ ಆಗಿಲ್ಲ, ಇದರ ಬಗ್ಗೆ ಗ್ರಾಮ ಪಂಚಾಯತಿಯವರ ಗಮನಕ್ಕೆ ಬಂದರೂ ಸಹ ಇವರು ತಮ್ಮ ಕೆಲಸ ಮಾಡುತ್ತಿಲ್ಲ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿರವರು ಸರಿ ಪಡಿಸಿ ಎಂದು ಹೇಳಿದರೂ ಸಹ ಅವರ ಮಾತಿಗೆ ಬೆಲೆ ಇಲ್ಲವಾ? ಗ್ರಾಮ ಅಭಿವೃದ್ಧಿಗಾಗಿಯೇ ನೇಮಿಸಿರುವ ಈ ಅಧಿಕಾರಿಯೂ ಗ್ರಾಮಾಭಿವೃದ್ಧಿ ಏಕೆ ಮಾಡುತ್ತಿಲ್ಲ?ಕುಡಿಯುವ ನೀರನ್ನೇ ಒದಗಿಸುವುದಕ್ಕೆ ಇವರಿಗೆ ಯೋಗ್ಯತೆ ಇಲ್ಲವೆಂದರೆ, ಬೇರೆ ಯಾವ ಅಭಿವೃದ್ಧಿ ಗ್ರಾಮದಲ್ಲಿ ಮಾಡುತ್ತಾರೆ? ಮೇಲಾಧಿಕಾರಿಗಳು ಇದರ ಬಗ್ಗೆ ಆದಷ್ಟು ಬೇಗ ಎಚ್ಚೆತ್ತುಕೊಳ್ಳಲಿಲ್ಲವೆಂದರೆ ಗ್ರಾಮಸ್ಥರು ಹೋರಾಟಕ್ಕೆ ಮುಂದಾಗುತ್ತೇವೆ ಎಂದಿದ್ದಾರೆ ಎಚ್ಚರ! ವರದಿ: ಸಂಗಪ್ಪ ಚಲವಾದಿ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…