Latest

8 ದಿನವಾದರು ಕುಡಿಯೋಕಿಲ್ಲ ನೀರು, ಪಂಚಾಯಿತಿಗೆ ಬೀಗ ಹಾಕುತ್ತೇವೆ ಎಂದ ಮಹಿಳೆಯರು!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಸೋಮನಾಳ ಗ್ರಾಮದಲ್ಲಿರುವ ದ್ಯಾಮವ್ವನ ಗುಡಿ ಓಣಿಯ ಜನರಿಗೆ ಸುಮಾರು ಎಂಟು ದಿನಕ್ಕೆ ಒಮ್ಮೆ ಕುಡಿಯುವ ನೀರು ಬಿಡುತ್ತಾರೆ, ಜನರು ಹಳ್ಳದ ಕಲುಷಿತ ನೀರನ್ನು ಸೇವನೆ ಮಾಡುತ್ತಿದ್ದಾರೆ. ಇದರಿಂದ ರೋಗ ರುಜಿನಗಳಿಗೆ ತುತ್ತಾಗುವ ಸಾಧ್ಯತೆಗಳಿವೆ. ಓಣಿಯ ವೃದ್ಧ ಮಹಿಳೆಯೊಬ್ಬರು ಈ ವಿಚಾರದ ಬಗ್ಗೆ ಹೇಳಿದಾಗ ವಯಸ್ಸಾಗಿದೆ ಹಳ್ಳಕ್ಕೆ ಹೋಗಿ ನೀರು ತರಲು ಸಹ ಆಗುವುದಿಲ್ಲ ನಾನೇನು ಮಾಡಲಿ, ದಿನಗೂಲಿ ಕೆಲಸ ಮಾಡಿ ದುಡಿದು ಬಂದರು ನಾವೆಲ್ಲಾ ದಿನಾಲೂ ನೀರಿಗಾಗಿಯೇ ಪರದಾಡುವಂತಾಗಿದೆ ಎಂದರು. ಹಲವು ಬಾರಿ ಪಿಡಿಓ ರವರ ಗಮನಕ್ಕೆ ತಂದರು ಯಾವುದೇ ಪ್ರಯೋಜನವಿಲ್ಲ, ಕರೆ ಮಾಡಿದಾಗ ಯಾವಾಗಲೂ ಫೋನ್ ಸ್ವಿಚ್ ಆಫ್ ಇರುತ್ತದೆ. ಇದೇ ರೀತಿ ಮುಂದುವರೆದರೆ ನಾವೆಲ್ಲರೂ ಸೇರಿಕೊಂಡು ಗ್ರಾಮ ಪಂಚಾಯತಿಗೆ ಬೀಗ ಹಾಕಿ ಹೋರಾಟ ಮಾಡಬೇಕಾಗುತ್ತದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿರುತ್ತಾರೆ.
15 ದಿನಗಳ ಹಿಂದೆ ಗ್ರಾಮಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಮಿ ಚೌಧರಿ ರವರಿಗೆ ಗ್ರಾಮಸ್ಥರು ನೀರಿನ ಸಮಸ್ಯೆಯ ಬಗ್ಗೆ ತಿಳಿಸಿದಾಗ ಅಲ್ಲಿಯೇ ಇದ್ದ ಅಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡು ಈ ಕೂಡಲೇ ಸರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಆದರೆ ಅಧಿಕಾರಿಗಳು ಮಾತ್ರ ಇದರ ಬಗ್ಗೆ ಯಾವುದೇ ಗಮನ ಹರಿಸುತ್ತಿಲ್ಲ. ಓಣಿಯ ಮಹಿಳೆಯರು ಸುಮಾರು ಎರಡು ದಿನಗಳಿಂದ ನೀರಿಲ್ಲದ ಕಾರಣ ಹಳ್ಳದ ಕೊಳಚೆ ನೀರನ್ನು ಸೇವನೆ ಮಾಡುತ್ತಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆಯವರು ಸಹ ಸಮಸ್ಯೆ ಬಗೆ ಗಮನಹರಿಸಲು ಹೇಳಿ ಹದಿನೈದು ದಿನ ಕಳೆದು ಹೋದರು ಇಲ್ಲಿಯವರೆಗೂ ಕೆಲಸ ಆಗಿಲ್ಲ, ಇದರ ಬಗ್ಗೆ ಗ್ರಾಮ ಪಂಚಾಯತಿಯವರ ಗಮನಕ್ಕೆ ಬಂದರೂ ಸಹ ಇವರು ತಮ್ಮ ಕೆಲಸ ಮಾಡುತ್ತಿಲ್ಲ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿರವರು ಸರಿ ಪಡಿಸಿ ಎಂದು ಹೇಳಿದರೂ ಸಹ ಅವರ ಮಾತಿಗೆ ಬೆಲೆ ಇಲ್ಲವಾ? ಗ್ರಾಮ ಅಭಿವೃದ್ಧಿಗಾಗಿಯೇ ನೇಮಿಸಿರುವ ಈ ಅಧಿಕಾರಿಯೂ ಗ್ರಾಮಾಭಿವೃದ್ಧಿ ಏಕೆ ಮಾಡುತ್ತಿಲ್ಲ?ಕುಡಿಯುವ ನೀರನ್ನೇ ಒದಗಿಸುವುದಕ್ಕೆ ಇವರಿಗೆ ಯೋಗ್ಯತೆ ಇಲ್ಲವೆಂದರೆ, ಬೇರೆ ಯಾವ ಅಭಿವೃದ್ಧಿ ಗ್ರಾಮದಲ್ಲಿ ಮಾಡುತ್ತಾರೆ? ಮೇಲಾಧಿಕಾರಿಗಳು ಇದರ ಬಗ್ಗೆ ಆದಷ್ಟು ಬೇಗ ಎಚ್ಚೆತ್ತುಕೊಳ್ಳಲಿಲ್ಲವೆಂದರೆ ಗ್ರಾಮಸ್ಥರು ಹೋರಾಟಕ್ಕೆ ಮುಂದಾಗುತ್ತೇವೆ ಎಂದಿದ್ದಾರೆ ಎಚ್ಚರ! ವರದಿ: ಸಂಗಪ್ಪ ಚಲವಾದಿ

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago