ಗುಬ್ಬಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾಕ್ಟರ್ ನಾಗಲಕ್ಷ್ಮಿ. ಹಲವಾರು ದೂರುಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದು ರೋಗಿಗಳ ಹಲವಾರು ತೊಂದರೆಗಳನ್ನು ಆಲಿಸಿದರು.
ಸಾರ್ವಜನಿಕರುಗಳಿಂದ ಬಂದ ದೂರುಗಳಾದ ಕೆಲವು ವೈದ್ಯ ಅಧಿಕಾರಿಗಳು ಸಿಬ್ಬಂದಿಗಳು ಚಿಕಿತ್ಸೆಗಾಗಿ ರೋಗಿಗಳಿಂದ ಹಣವನ್ನು ಪಡೆಯುತ್ತಿರುವುದು, ಬೇಕಾಬಿಟ್ಟಿ ಚಿಕಿತ್ಸೆ ನೀಡುತ್ತಿರುವುದು, ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸದೆ ನಿರ್ಲಕ್ಷ ತೋರುತ್ತಿರುವ ಬಗ್ಗೆ ಹಾಗೂ ಅದೇ ರೀತಿ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಬಿಳೇಕಲ್ ಪಾಳ್ಯದ ತಿಮ್ಮರಾಜನ ಪತ್ನಿ ರೇಣುಕಾ 29 ವರ್ಷ ಸಂತಾನ ಹರಣ ಚಿಕಿತ್ಸೆಗೆಂದು ಬಂದಿದ್ದು ಚಿಕಿತ್ಸೆಗೆ 5000 ಹಣವನ್ನು ಕೇಳಿದ್ದು. ನಮಗೆ ಜೀವನ ಮಾಡೋದಕ್ಕೆ ತುಂಬಾ ಕಷ್ಟವಿದೆ ಅದಕ್ಕೆ ಸಾರ್ವಜನಿಕ ಆಸ್ಪತ್ರೆಗೆ ಬರುವುದು ನಮ್ಮಂತ ಬಡವರು. ನಮ್ಮ ಮೇಲಿನ ಕೋಪಕ್ಕೆ ಏನೋ ಗೊತ್ತಿಲ ಅರಿವಳಿಕೆ(Anesthesia) ನೀಡದೆ ಶಸ್ತ್ರ ಚಿಕಿತ್ಸೆಗೆ ಮುಂದಾಗಿದ್ದು ನನಗೆ ತುಂಬಾ ನೋವಾಗಿದೆ ಎಂದು ರೇಣುಕಾ ತಮ್ಮ ಅಳಲನ್ನು ತೋಡಿಕೊಂಡರು.
ಈ ಸಂಬಂಧ ಪಟ್ಟಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದೂರನ್ನು ಸಲ್ಲಿಸಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಯಾವುದೇ ಪ್ರಯೋಜನವಾಗಿಲ್ಲ ಎಂದು ರೇಣುಕಾ ಕುಟುಂಬದವರು ಇದೇ ಸಮಯದಲ್ಲಿ ಗಂಭೀರವಾಗಿ ಆರೋಪಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…