ಗುಬ್ಬಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾಕ್ಟರ್ ನಾಗಲಕ್ಷ್ಮಿ. ಹಲವಾರು ದೂರುಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದು ರೋಗಿಗಳ ಹಲವಾರು ತೊಂದರೆಗಳನ್ನು ಆಲಿಸಿದರು.
ಸಾರ್ವಜನಿಕರುಗಳಿಂದ ಬಂದ ದೂರುಗಳಾದ ಕೆಲವು ವೈದ್ಯ ಅಧಿಕಾರಿಗಳು ಸಿಬ್ಬಂದಿಗಳು ಚಿಕಿತ್ಸೆಗಾಗಿ ರೋಗಿಗಳಿಂದ ಹಣವನ್ನು ಪಡೆಯುತ್ತಿರುವುದು, ಬೇಕಾಬಿಟ್ಟಿ ಚಿಕಿತ್ಸೆ ನೀಡುತ್ತಿರುವುದು, ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸದೆ ನಿರ್ಲಕ್ಷ ತೋರುತ್ತಿರುವ ಬಗ್ಗೆ ಹಾಗೂ ಅದೇ ರೀತಿ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಬಿಳೇಕಲ್ ಪಾಳ್ಯದ ತಿಮ್ಮರಾಜನ ಪತ್ನಿ ರೇಣುಕಾ 29 ವರ್ಷ ಸಂತಾನ ಹರಣ ಚಿಕಿತ್ಸೆಗೆಂದು ಬಂದಿದ್ದು ಚಿಕಿತ್ಸೆಗೆ 5000 ಹಣವನ್ನು ಕೇಳಿದ್ದು. ನಮಗೆ ಜೀವನ ಮಾಡೋದಕ್ಕೆ ತುಂಬಾ ಕಷ್ಟವಿದೆ ಅದಕ್ಕೆ ಸಾರ್ವಜನಿಕ ಆಸ್ಪತ್ರೆಗೆ ಬರುವುದು ನಮ್ಮಂತ ಬಡವರು. ನಮ್ಮ ಮೇಲಿನ ಕೋಪಕ್ಕೆ ಏನೋ ಗೊತ್ತಿಲ ಅರಿವಳಿಕೆ(Anesthesia) ನೀಡದೆ ಶಸ್ತ್ರ ಚಿಕಿತ್ಸೆಗೆ ಮುಂದಾಗಿದ್ದು ನನಗೆ ತುಂಬಾ ನೋವಾಗಿದೆ ಎಂದು ರೇಣುಕಾ ತಮ್ಮ ಅಳಲನ್ನು ತೋಡಿಕೊಂಡರು.
ಈ ಸಂಬಂಧ ಪಟ್ಟಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದೂರನ್ನು ಸಲ್ಲಿಸಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಯಾವುದೇ ಪ್ರಯೋಜನವಾಗಿಲ್ಲ ಎಂದು ರೇಣುಕಾ ಕುಟುಂಬದವರು ಇದೇ ಸಮಯದಲ್ಲಿ ಗಂಭೀರವಾಗಿ ಆರೋಪಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…