Latest

ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದ ನೂತನ ಅಧ್ಯಕ್ಷೆಗೆ ಸಾರ್ವಜನಿಕ ಮಹಿಳೆಯರಿಂದ ದೂರುಗಳ ಸುರಿಮಳೆ.

ಗುಬ್ಬಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾಕ್ಟರ್ ನಾಗಲಕ್ಷ್ಮಿ. ಹಲವಾರು ದೂರುಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದು ರೋಗಿಗಳ ಹಲವಾರು ತೊಂದರೆಗಳನ್ನು ಆಲಿಸಿದರು.

ಸಾರ್ವಜನಿಕರುಗಳಿಂದ ಬಂದ ದೂರುಗಳಾದ ಕೆಲವು ವೈದ್ಯ ಅಧಿಕಾರಿಗಳು ಸಿಬ್ಬಂದಿಗಳು ಚಿಕಿತ್ಸೆಗಾಗಿ ರೋಗಿಗಳಿಂದ ಹಣವನ್ನು ಪಡೆಯುತ್ತಿರುವುದು, ಬೇಕಾಬಿಟ್ಟಿ ಚಿಕಿತ್ಸೆ ನೀಡುತ್ತಿರುವುದು, ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸದೆ ನಿರ್ಲಕ್ಷ ತೋರುತ್ತಿರುವ ಬಗ್ಗೆ ಹಾಗೂ ಅದೇ ರೀತಿ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಬಿಳೇಕಲ್ ಪಾಳ್ಯದ ತಿಮ್ಮರಾಜನ ಪತ್ನಿ ರೇಣುಕಾ 29 ವರ್ಷ ಸಂತಾನ ಹರಣ ಚಿಕಿತ್ಸೆಗೆಂದು ಬಂದಿದ್ದು ಚಿಕಿತ್ಸೆಗೆ 5000 ಹಣವನ್ನು ಕೇಳಿದ್ದು. ನಮಗೆ ಜೀವನ ಮಾಡೋದಕ್ಕೆ ತುಂಬಾ ಕಷ್ಟವಿದೆ ಅದಕ್ಕೆ ಸಾರ್ವಜನಿಕ ಆಸ್ಪತ್ರೆಗೆ ಬರುವುದು ನಮ್ಮಂತ ಬಡವರು. ನಮ್ಮ ಮೇಲಿನ ಕೋಪಕ್ಕೆ ಏನೋ ಗೊತ್ತಿಲ ಅರಿವಳಿಕೆ(Anesthesia) ನೀಡದೆ ಶಸ್ತ್ರ ಚಿಕಿತ್ಸೆಗೆ ಮುಂದಾಗಿದ್ದು ನನಗೆ ತುಂಬಾ ನೋವಾಗಿದೆ ಎಂದು ರೇಣುಕಾ ತಮ್ಮ ಅಳಲನ್ನು ತೋಡಿಕೊಂಡರು.

ಈ ಸಂಬಂಧ ಪಟ್ಟಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ದೂರನ್ನು ಸಲ್ಲಿಸಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಯಾವುದೇ ಪ್ರಯೋಜನವಾಗಿಲ್ಲ ಎಂದು ರೇಣುಕಾ ಕುಟುಂಬದವರು ಇದೇ ಸಮಯದಲ್ಲಿ ಗಂಭೀರವಾಗಿ ಆರೋಪಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಸಂಭ್ರಮ: ಯಶ್‌ ಬಳಗದ ಅದ್ಧೂರಿ ಆಗಮನ

ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…

1 hour ago

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago