ನನ್ನ ಸ್ವಾಭಿಮಾನಕ್ಕೆ ಧಕ್ಕೆ ಆದ್ರೆ ಸುಮ್ಮನಿರಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ಟಿಕೆಟ್ ಕೊಟ್ರೆ ಸ್ಪರ್ಧೆ ಮಾಡ್ತೀನಿ, ಇಲ್ಲದಿದ್ರೆ ಸುಮ್ಮನಾಗ್ತೀನಿ. ರಾಜಕೀಯದಲ್ಲಿ ಯಾರಿಗೆ ಯಾರೂ ಶತ್ರು ಅಲ್ಲ. ಯಾರೂ ಈ ರೀತಿ ಮಾಡಬಾರದು ಎಂದು ಸಚಿವ ವಿ.ಸೋಮಣ್ಣ ಕಣ್ಣೀರು ಹಾಕಿದ್ದಾರೆ. ಇತ್ತೀಚೆಗೆ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗ್ತಾರೆ ಎಂಬ ವಿಚಾರ ರಾಜಕೀಯದಲ್ಲಿ ಸಾಕಷ್ಟು ಚರ್ಚೆ ಆಗ್ತಿತ್ತು. ಈ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿದ ಸೋಮಣ್ಣ, ಸುಳ್ಳು ಹೇಳಿ ನಾನು ನನ್ನ ಜೀವನ ಮಾಡಲ್ಲ. ನಮ್ಮ ತಾಯಿ, ತಂದೆ ನನಗೆ ಸಂಸ್ಕಾರ ಕಲಿಸಿಕೊಟ್ಟಿದ್ದಾರೆ. ನಾನು ಯಾರ ಮುಲಾಜಿನಲ್ಲೂ ಬದುಕಿಲ್ಲ. ಅನಾವಶ್ಯಕವಾಗಿ ಇನ್ನೊಬ್ಬರ ತೇಜೋವಧೆ ಮಾಡೋದು ಒಳ್ಳೆಯದಲ್ಲ ಎಂದು ಸೋಮಣ್ಣ ಕಣ್ಣೀರು ಹಾಕಿದರು.
ನಾನು ಸಂಜೆ ಕಾಲೇಜಿನಲ್ಲಿ ಓದಿದ್ದೇನೆ. ಕಸ್ತೂರಿ ಮಾತ್ರೆ ಮಾರಿದ್ದೇನೆ. ಸ್ವಾಭಿಮಾನಕ್ಕೆ ಧಕ್ಕೆ ಆದಾಗ ನಾನು ಸುಮ್ಮನೆ ಇರೋನಲ್ಲ. ನಾನು ಈಗಾಗಲೇ ಹಲವು ಬಾರಿ ಸ್ಪರ್ಧೆ ಮಾಡಿದ್ದೇನೆ. ಪ್ರಧಾನಿ ಮೋದಿ ಅವರು ಉತ್ತಮ ಮಾರ್ಗದಲ್ಲಿ ನಡೆಯುತ್ತಿದ್ದಾರೆ. ಬಿಜೆಪಿಯಲ್ಲೇ ಮುಂದುವರೆಯುತ್ತೇನೆ. ರಾಜಕೀಯದಲ್ಲಿ ಯಾರಿಗೆ ಯಾರೂ ಶತ್ರು ಅಲ್ಲ ಎಂದು ಸೋಮಣ್ಣ ಹೇಳಿದರು.
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…
ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…